ಫೋನ್ ಕದ್ದಾಲಿಕೆ, ಐಟಿ ದಾಳಿ ಬೆದರಿಕೆ: ರಾಮಲಿಂಗಾ ರೆಡ್ಡಿ ಆರೋಪ
Team Udayavani, Apr 28, 2018, 7:10 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಮತ್ತೆ ಕೇಂದ್ರದ ವಿರುದ್ಧ ರಾಜ್ಯದ ಗೃಹ ಸಚಿವ ರಾಮಲಿಂಗಾ ರೆಡ್ಡಿ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೂಚನೆ ಮೇರೆಗೆ ಕೇಂದ್ರ ಸರಕಾರ ರಾಜ್ಯದ ಕಾಂಗ್ರೆಸ್ ನಾಯಕರು, ಸಚಿವರು, ಶಾಸಕರು ಹಾಗೂ ಪಕ್ಷದ ಹಿತೈಷಿಗಳ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ದೂರಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಕಳೆದ ಮೂರು ತಿಂಗಳಿಂದ ನಿರಂತರವಾಗಿ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ಕಳೆದ 15 ದಿನಗಳಿಂದ ಪ್ರತಿ ದಿನ 16 ಗಂಟೆ ಫೋನ್ ಕರೆಗಳು ಕದ್ದಾಲಿಕೆಯಾಗುತ್ತಿವೆ. ದಿಲ್ಲಿ, ಗುಜರಾತ್, ಜೈಪುರದಿಂದ 3 ತಂಡಗಳು ಈ ಕಾರ್ಯದಲ್ಲಿ ತೊಡಗಿದ್ದು, ಬಿಜೆಪಿ ಮತ್ತು ಬೆಂಬಲಿತ ಸಂಘಟನೆಗಳ ಕಾರ್ಯಕರ್ತರು ಇದರಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.
ದೂರವಾಣಿ ಕದ್ದಾಲಿಕೆ ಮಾಡಿ ಕನ್ನಡದಲ್ಲಿ ನಡೆ ಯುವ ನಮ್ಮ ಕಾರ್ಯತಂತ್ರಗಳನ್ನು ಭಾಷಾಂತರಿಸಿ ತಿಳಿದುಕೊಳ್ಳುತ್ತಿದ್ದಾರೆ. ಕೇಂದ್ರದ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡೆಸಿಕೊಂಡು ಕಿರುಕುಳ ನೀಡಲು ಈ ಕೆಲಸ ಮಾಡಲಾಗುತ್ತಿದೆ. ಕಾಂಗ್ರೆಸ್ಗೆ ಬೆಂಬಲಿಸಿದರೆ ಐಟಿ ದಾಳಿ ಮಾಡುವುದಾಗಿ ಉದ್ಯಮಿಗಳಿಗೂ ಬೆದರಿಕೆ ಹಾಕಲಾಗುತ್ತಿದೆ. ಈ ಬಗ್ಗೆ ಈಗಾಗಲೇ ಕೇಂದ್ರ ಸರಕಾರಕ್ಕೆ ಪತ್ರ ಬರೆದು ದೂರು ನೀಡಲಾಗಿದೆ ಎಂದು ತಿಳಿಸಿದರು.
ಬಿಜೆಪಿ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ ಆ ಪಕ್ಷಕ್ಕೆ ಸೋಲಾಗುತ್ತದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರ ಹಿಡಿಯಲು ವಾಮಮಾರ್ಗ ಅನುಸರಿಸುತ್ತಿದೆ. ಬಿಜೆಪಿಯ ಫೋನ್ ಟ್ಯಾಪಿಂಗ್ ಪ್ರಕ ರಣದ ಬಗ್ಗೆ ವಿಶೇಷ ತನಿಖೆ ನಡೆಸಿ ಮುಂದಿನ ವರ್ಷದ ಲೋಕಸಭೆ ಚುನಾವಣೆಯೊಳಗೆ ಅವರ ಬಂಡವಾಳ ಬಯಲು ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?