ಬೆಂಗಳೂರು:ಪೊಲೀಸರೆಂದು 42 ಪ್ರಯಾಣಿಕರಿದ್ದ ಖಾಸಗಿ ಬಸ್ ಹೈಜಾಕ್
Team Udayavani, Apr 28, 2018, 9:01 AM IST
ಬೆಂಗಳೂರು: ಪೊಲೀಸರ ಸೋಗಿನಲ್ಲಿ ಬಂದು ಖಾಸಗಿ ಬಸ್ಸನ್ನು ದುಷ್ಕರ್ಮಿಗಳು ಹೈಜಾಕ್ ಮಾಡಿದ ಆತಂಕಕಾರಿ ಘಟನೆ ಶುಕ್ರವಾರ ತಡರಾತ್ರಿ ನಗರದಲ್ಲಿ ನಡೆದಿದೆ.
ನಾಲ್ವರು ದುಷ್ಕರ್ಮಿಗಳು ಕೃತ್ಯ ಎಸಗಿದ್ದು, ಕೇರಳದ ಕಣ್ಣೂರಿಗೆ ಪ್ರಯಾಣ ಬೆಳೆಸಿದ್ದ ಖಾಸಗಿ ಬಸ್ಸನ್ನು ಮೈಸೂರ್ ರೋಡ್ನ ಆರ್ವಿ ಕಾಲೇಜ್ ಬಳಿ ಅಡ್ಡಗಟ್ಟಿ ಡ್ರೈವರ್ನನ್ನು ಕೆಳಗಿಳಿಸಿ ಹೈಜಾಕ್ ಮಾಡಿ ಆರ್.ಆರ್.ನಗರದ ಪಟ್ಟಣಗೆರೆಯ ಗೋದಾಮೊಂದರಲ್ಲಿ ಇರಿಸಿದ್ದರು.
ಸುಮಾರು ಒಂದು ಗಂಟೆಗಳ ಕಾಲ ಗೋದಾಮಿನಲ್ಲಿ ಬಸ್ ಇರುವುದನ್ನು ಕಂಡು ಕಂಗಾಲಾದ ಪ್ರಯಾಣಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾಹಿತಿ ದೊರೆತ ತಕ್ಷಣ ಕಾರ್ಯಾಚರಣೆಗಿಳಿದ 30ಕ್ಕೂ ಹೆಚ್ಚು ಮಂದಿ ಸಿಬಂದಿಗಳಿಂದ ಪೊಲೀಸರ ತಂಡ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಮೂವರು ದುಷ್ಕರ್ಮಿಗಳು ಪರಾರಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ.
ಹಣಕಾಸು ವಿಚಾರಕ್ಕೆ ಬಸ್ ಹೈಜಾಕ್ ಮಾಡಿದ್ದಾರೆ ಎನ್ನಲಾಗಿದ್ದು ,ಆರ್ಆರ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಅಕ್ರಮವಾಗಿ ಬಸ್ ತಡೆ ಹಿಡಿದು ಪ್ರಯಾಣಿಕರಿಗೆ ತೊಂದರೆ ಮಾಡಿರುವ ಆರೋಪಿಗಳ ವಿರುದ್ದ ಎಫ್ಐಆರ್ ದಾಖಲಿಸಿರುವುದಾಗಿ ಪಶ್ಚಿಮ ವಲಯ ಡಿಸಿಪಿ ರವಿ ಸಿ ಚನ್ನಣ್ಣನವರ್ ಮಾಧ್ಯಮಗಳಿಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ