ಖರ್ಗೆಗೆ ಕಾಂಗ್ರೆಸ್‌ ಮೋಸ


Team Udayavani, May 4, 2018, 6:00 AM IST

Ban04051801Medn.jpg

ಕಲಬುರಗಿ/ಬಳ್ಳಾರಿ/ಬೆಂಗಳೂರು: ದಲಿತ ಸಮುದಾಯದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ 2013ರ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಮಾಡುತ್ತೇವೆ ಎಂದು ಹೇಳಿ, ಮಾತು ತಪ್ಪುವ ಮೂಲಕ ಕಾಂಗ್ರೆಸ್‌ ದಲಿತರಿಗೆ ಮೋಸ‌ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ಧಾಳಿ ನಡೆಸಿದ್ದಾರೆ.

ಹೈದರಾಬಾದ್‌ ಕರ್ನಾಟಕ ಭಾಗದ ಪ್ರಮುಖ ನಗರ ಕಲಬುರಗಿ, ಬಳ್ಳಾರಿ ಹಾಗೂ ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನ ರ್ಯಾಲಿ ನಡೆಸಿದ ಅವರು, ಕಾಂಗ್ರೆಸ್‌ ವಿರುದ್ಧ ನೇರವಾಗಿ ದಲಿತ ಕಾರ್ಡ್‌ ಪ್ರಯೋಗ ಮಾಡಿದರು. ಮೊನ್ನೆಯಷ್ಟೇ ಕನ್ನಡಿಗ ಮಾಜಿ ಪ್ರಧಾನಿ ದೇವೇಗೌಡರಿಗೆ ಕಾಂಗ್ರೆಸ್‌ ಅವಮಾನ ಮಾಡುತ್ತಿದೆ ಎಂದು ಹೇಳಿ ಒಕ್ಕಲಿಗ ಸಮುದಾಯ ಗೆಲ್ಲಲು ತಂತ್ರಗಾರಿಕೆ ಮಾಡಿದ್ದ ಮೋದಿ ಅವರು, ಇದೀಗ ಕಾಂಗ್ರೆಸ್‌ ದಲಿತ ಸಮುದಾಯಕ್ಕೂ ಮೋಸ ಮಾಡಿದೆ ಎಂದು ಹೇಳುವ ಮೂಲಕ ಹೊಸ ಅಸ್ತ್ರ ಪ್ರಯೋಗ ಮಾಡಿದ್ದಾರೆ.

2013ರ ವಿಧಾನಸಭೆ ಚುನಾವಣೆಗೂ ಮುನ್ನ ದಲಿತ ಸಮುದಾಯದ ಖರ್ಗೆ ಅವರನ್ನೇ ಮುಖ್ಯಮಂತ್ರಿ ಮಾಡುವುದಾಗಿ ಹೇಳಿ ಅವರ ಹೆಸರಲ್ಲೇ ಮತ ಪಡೆದು ಕಡೆಗೆ ಮೋಸ ಮಾಡಿದ್ದೀರಿ. ಆದರೆ, ಬಿಜೆಪಿ ನಿಮ್ಮ ರೀತಿ ಮಾಡಲಿಲ್ಲ. ಮುಸ್ಲಿಂ ಸಮುದಾಯದ ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಮತ್ತು ದಲಿತ ಮಹಿಳೆಯ ಪುತ್ರ ರಾಮನಾಥ್‌ ಕೋವಿಂದ್‌ ಅವರನ್ನು ರಾಷ್ಟ್ರಪತಿ ಹುದ್ದೆಗೇರಿಸಿದ್ದು ಬಿಜೆಪಿ ಎಂದರು. 

ಇದಷ್ಟೇ ಅಲ್ಲ, ಬಿಜೆಪಿ ನೀತಿಯ ಕಾರಣದಿಂದಲೇ ಹಿಂದುಳಿದ ಸಮುದಾಯದ ಹಾಗೂ ಟೀ ಮಾರಾಟ ಮಾಡುತ್ತಿದ್ದ ತಾವು ಕೂಡ ಪ್ರಧಾನಿಯಾದದ್ದು ಎಂದು ಹೇಳಿ, ಕಾಂಗ್ರೆಸ್‌ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಅಹಿಂದ ಅಸ್ತ್ರವನ್ನೂ ಪ್ರಯೋಗಿಸಿದ್ದಾರೆ.

ಸರ್ಜಿಕಲ್‌ ಸ್ಟ್ರೈಕ್‌ಗೆ ಕ್ಯಾಮೆರಾ ಬೇಕಿತ್ತೇ?: ಸ್ವಾತಂತ್ರ್ಯ ಬಂದಾಗಿನಿಂದಲೂ ಕಾಂಗ್ರೆಸ್‌ ನಮ್ಮ ಸೇನೆಗೆ ಗೌರವ ಕೊಡಲೇ ಇಲ್ಲ. ಮೊದಲ ಪ್ರಧಾನಿ ನೆಹರು ಮತ್ತು ರಕ್ಷಣಾ ಸಚಿವ ಕೃಷ್ಣ ಮೆನನ್‌, ಆಗ ಸರ್ಜಿಕಲ್‌ ಸ್ಟ್ರೈಕ್‌ ಮಾಡಿದ್ದ ಕನ್ನಡಿಗರಾದ ಫೀಲ್ಡ್‌ ಮಾರ್ಷಲ್‌ ಕಾರಿಯಪ್ಪ ಹಾಗೂ ಜನರಲ್‌ ತಿಮ್ಮಯ್ಯ ಅವರನ್ನು ಅವಮಾನ ಮಾಡಿದ್ದರು. ಈಗ ನಾವು ಸರ್ಜಿಕಲ್‌ ಸ್ಟ್ರೈಕ್‌ ಮಾಡಿದಾಗಲೂ, ಅದಕ್ಕೆ ಕಾಂಗ್ರೆಸ್‌ನವರು ಸಾಕ್ಷ್ಯ ಕೇಳುತ್ತಿದ್ದಾರೆ. ನಮ್ಮ ಯೋಧರು ಇವರಿಗೆ ಸಾಕ್ಷ್ಯ ನೀಡುವ ಸಲುವಾಗಿ ಸರ್ಜಿಕಲ್‌ ಸ್ಟ್ರೈಕ್‌ಗೆ ಗನ್‌ ತೆಗೆದುಕೊಂಡು ಹೋಗಬೇಕಿತ್ತೋ ಅಥವಾ ಕ್ಯಾಮೆರಾ ತೆಗೆದುಕೊಂಡು ಹೋಗಬೇಕಿತ್ತೋ ಎಂದು ಮೋದಿ ಪ್ರಶ್ನಿಸಿದ್ದಾರೆ.

ಸಿದ್ಧರೂಪಯ್ಯ ಸರ್ಕಾರ: ಅತ್ತ ಬಳ್ಳಾರಿಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಮೋದಿ ಅವರು, ಕಾಂಗ್ರೆಸ್‌ ಸರ್ಕಾರವನ್ನು ಸಿದ್ಧರೂಪಯ್ಯ ಸರ್ಕಾರ ಎಂದು ಕರೆದರು. ಈ ಸರ್ಕಾರ ಇಡೀ ರಾಜ್ಯವನ್ನು ಸಾಲದ ಸುಳಿಯಲ್ಲಿ ಇಟ್ಟಿದೆ ಎಂದ ಮೋದಿ, ವಿಜಯನಗರ ಅರಸರು ಆಳಿದ್ದ ಈ ನೆಲವನ್ನು ಕಳ್ಳ-ಕಾಕರ ನೆಲ ಎಂದು ಕಾಂಗ್ರೆಸ್‌ನವರು ಬಿಂಬಿಸಿದರು. ಈ ಮೂಲಕ ಇಲ್ಲಿನ ಜನರಿಗೆ ಅವಮಾನ ಮಾಡಿದ್ದಾರೆ ಎಂದೂ ಆರೋಪಿಸಿದರು.

ಸೋಲುವ ಪಕ್ಷಕ್ಕೇಕೆ ಓಟು?: ಎರಡು ದಿನಗಳ ಹಿಂದಷ್ಟೇ ಮಾಜಿ ಪ್ರಧಾನಿ ದೇವೇಗೌಡರನ್ನು ಹೊಗಳಿದ್ದ ಮೋದಿ ಅವರು, ಗುರುವಾರ ಸಂಜೆ ಬೆಂಗಳೂರಿನ ಬಳಿಯ ಕೆಂಗೇರಿಯಲ್ಲಿ ಜೆಡಿಎಸ್‌ ಅನ್ನೇ ಟಾರ್ಗೆಟ್‌ ಮಾಡಿಕೊಂಡರು. ರಾಜ್ಯದ ಎಲ್ಲಾ ಮತದಾರರಿಗೂ ಜೆಡಿಎಸ್‌ ಸೋಲುವ ಮತ್ತು ಮೂರನೇ ಸ್ಥಾನ ಪಡೆಯುವ ಪಕ್ಷ ಎಂಬುದು ಗೊತ್ತು. ಈಗ ಅದು ತೆವಳುತ್ತಾ ಸಾಗುತ್ತಿದೆ. ಬುದ್ಧಿವಂತ ಮತದಾರರ್ಯಾರೂ ಈ ಪಕ್ಷಕ್ಕೆ ಓಟು ಹಾಕಲ್ಲ ಎಂದರು. ಅಲ್ಲದೆ ಜೆಡಿಎಸ್‌ ನಕ್ಸರನ್ನು ಬೆಂಬಲಿಸುವ ಕೋಮುವಾದಿ ಪಕ್ಷಗಳ ಜತೆ ಕೈಜೋಡಿಸಿದೆ ಎಂದು ಆರೋಪಿಸಿದರು.

ಸಿದ್ದು ತಿರುಗೇಟು
ಫೀಲ್ಡ್‌ ಮಾರ್ಷಲ್‌ ಕೆ.ಎಂ.ಕಾರ್ಯಪ್ಪ ಅವರು ಕನ್ನಡದ ಹೆಮ್ಮೆಯ ಪುತ್ರ. ಇವರಿಗೆ ಅವಮಾನ ಮಾಡುವ ಮಾತೇ ಇಲ್ಲ. ಇವರ ವಿಚಾರದಲ್ಲಿ ರಾಜಕೀಯ ಮಾಡದೆ, ಕರ್ನಾಟಕಕ್ಕಾಗಿ ನೀವು ಮಾಡಿರುವ 5 ಒಳ್ಳೆಯ ಕೆಲಸ ಪಟ್ಟಿ ಮಾಡುತ್ತೀರಾ?; 1. ನೀವು ಕನ್ನಡ ಧ್ವಜಕ್ಕೆ ಒಪ್ಪಿಗೆ ನೀಡುತ್ತೀರಾ? 2. ಬ್ಯಾಂಕಿಂಗ್‌ ಕ್ಷೇತ್ರದ ನೇಮಕಾತಿ ನಿಯಮ ಬದಲಿಸಿ ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡುತ್ತೀರಾ? 3. ಮಹದಾಯಿ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡುತ್ತೀರಾ? 4ಎಸ್‌ಡಿಆರ್‌ಎಫ್ ಅನುದಾನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ನ್ಯಾಯ ಒದಗಿಸುತ್ತೀರಾ?

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.