ಚಾಮುಂಡೇಶ್ವರಿಯಲ್ಲಿ ಸಿಎಂ ಪರ ಕಿಚ್ಚ ಪ್ರಚಾರ,ಆದರೆ ಬಾದಾಮಿಯಲ್ಲಿ ಇಲ್ಲ
Team Udayavani, May 4, 2018, 1:18 PM IST
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಅಭಿಮಾನದಿಂದ ಚಾಮುಂಡೇಶ್ವರಿಯಲ್ಲಿ ಪ್ರಚಾರ ನಡೆಸಲಿದ್ದಾರೆ ಆದರೆ ಬಾದಾಮಿಯಲ್ಲಿ ಪ್ರಚಾರ ನಡೆಸುವುದಿಲ್ಲ ಎಂದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ನನಗೆ ಬಹಳ ಆತ್ಮೀಯರು,ಅವರು ಸಿಎಂ ಆಗುವ ಮುನ್ನ ನಮ್ಮೊಂದಿಗೆ ಹೇಗಿದ್ದರೋ ಈಗಲೂ ಹಾಗೇ ಇದ್ದಾರೆ. ಅವರ ಪರ ಚಾಮುಂಡೇಶ್ವರಿಯಲ್ಲಿ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ.
ನಾನು ನಟ, ನಟನಾಗಿಯೇ ಇರುತ್ತೇನೆ. ಯಾವುದೇ ಪಕ್ಷದ ಪರ ಇಲ್ಲ. ಕೇವಲ ಅಭಿಮಾನದಿಂದ ಪ್ರಚಾರ ಮಾಡುತ್ತಿದ್ದೇನೆ ಎಂದು ಸುದೀಪ್ ಹೇಳಿದ್ದಾರೆ.
ತನ್ನದೇ ವಾಲ್ಮೀಕಿ ಸಮುದಾಯದ ನಾಯಕರಾದ ಶ್ರೀರಾಮುಲು ಅವರು ಬಾದಾಮಿಯಲ್ಲಿ ಸ್ಪರ್ಧಿಸುತ್ತಿರುವ ಕಾರಣ ಶ್ರೀರಾಮುಲು ಅವರು ಅಲ್ಲಿ ಸಿಎಂ ಪರ ಪ್ರಚಾರ ಮಾಡುವುದಿಲ್ಲ ಎಂದು ತಿಳಿದು ಬಂದಿದೆ.
ಸುರಪುರ ಬಿಜೆಪಿ ಶಾಸಕ ರಾಜು ಗೌಡ ಅವರ ಪರವೂ ಸುದೀಪ್ ಪ್ರಚಾರ ನಡೆಸಲಿದ್ದಾರೆ.