ಮೋದಿ,ರಾಹುಲ್ ಗಾಂಧಿ ವಿದೂಷಕರಿದ್ದಂತೆ:ಎಚ್ಡಿಕೆ
Team Udayavani, May 6, 2018, 7:15 AM IST
ಕೊಪ್ಪಳ: “ಪ್ರಧಾನಿ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಪದೇಪದೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರೆಲ್ಲ ವಿದೂಷಕರಿದ್ದಂತೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಕುಟುಕಿದರು.
ಕುಕನೂರಿನಲ್ಲಿ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಇವರೆಲ್ಲ ರಾಜ್ಯಕ್ಕೆ ಬಂದು ನಾಲ್ಕಾರು ಇತಿಹಾಸಕಾರರ ಹೆಸರು ಹೇಳಿದ ತಕ್ಷಣ ಜನ ಇವರನ್ನು ಒಪ್ಪಲ್ಲ. ಇವರೆಲ್ಲ ಸೀಜನ್ ರಾಜಕಾರಣಿಗಳು. ಇಬ್ಬರೂ ವಿದೂಷಕ ರಂತಿ ದ್ದಾರೆ. ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಇವರಿಗೆ ಗೊತ್ತಿಲ್ಲ. ದೇವೇಗೌಡರನ್ನು ಹೊಗಳಿದ ಮೋದಿ, ಜೆಡಿಎಸ್ 3ನೇ ಸ್ಥಾನಕ್ಕೆ ಬರುತ್ತೆ ಮತ ಹಾಕಬೇಡಿ ಎಂದಿರುವ ಕುರಿತು ಅವರನ್ನೇ ಕೇಳಬೇಕು. ಮೇ 12ರಂದು ಮತದಾರ ಎಲ್ಲರ ಹಣೆಬರಹ ಬರೆಯಲಿದ್ದಾರೆ ಎಂದರು.
ಬಾದಾಮಿಯಲ್ಲಿ ಸಿದ್ದರಾಮಯ್ಯಗೆ ಸೋಲಿನ ಭಯ ಶುರುವಾಗಿದೆ. ಹಾಗಾಗಿ ಚಿತ್ರನಟರನ್ನು ಕರೆತಂದು ಪ್ರಚಾರ ಶುರು ಮಾಡಿದ್ದಾರೆ. ಚಿತ್ರನಟರು ದುಡ್ಡು ಕೊಟ್ಟರೆ ಯಾವ ಪಕ್ಷದ ಪರವಾದರೂ ಪ್ರಚಾರ ಮಾಡಬಲ್ಲರು. ಚಿತ್ರನಟರು ಪ್ರಚಾರ ಮಾಡಿದ ತಕ್ಷಣ ಯಾರೂ ಓಟು ಹಾಕಲ್ಲ. 2013ರ ಚುನಾವಣೆ ವೇಳೆ ನಟ ಚಿರಂಜೀವಿ ಕೆಲ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದರು. ಆದರೆ ಅಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆದ್ದಿದ್ದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ