ಮೋದಿ ಜಲಾಸ್ತ್ರ ಪ್ರಯೋಗ​​​​​​​


Team Udayavani, May 6, 2018, 6:00 AM IST

5BNP-(20).jpg

ಗದಗ: “ಅಹಿಂದ’ದ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಈಗ “ಜಲಾಸ್ತ್ರ’ ಪ್ರಯೋಗಿಸಿದ್ದಾರೆ. ಉತ್ತರ ಕರ್ನಾಟಕ ಭಾಗದ ಮೂರುವರೆ ದಶಕಗಳ ಮಹದಾಯಿ ವಿವಾದವನ್ನು ಸೌಹಾರ್ದಯುತವಾಗಿ ಚರ್ಚೆ ಮೂಲಕ ಬಗೆಹರಿಸಲು ಬಿಜೆಪಿ ಸಿದ್ಧವಿದೆ ಎಂದಿದ್ದಾರೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ ಅವರಿಗೆ ಮಹದಾಯಿ ವಿವಾದದ ಇತಿಹಾಸವೇ ಗೊತ್ತಿಲ್ಲ ಎಂದು ಆರೋಪಿಸಿದ್ದಾರೆ.

ಗದಗ-ಹಾವೇರಿ ಜಿಲ್ಲಾ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳ ಪರ, ನಗರ ಹೊರವಲಯದ ಮುಂಡರಗಿಯಲ್ಲಿ ಶನಿವಾರ ಆಯೋಜಿಸಿದ್ದ ಬೃಹತ್‌ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, “”ದೇಶದ ನೀರಿನಲ್ಲಿ ಪ್ರತಿಯೊಬ್ಬರಿಗೆ ಅಧಿಕಾರ ಮತ್ತು ಹಕ್ಕಿದೆ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಕಾಂಗ್ರೆಸ್ಸಿಗರು ಮಹದಾಯಿ ವಿಚಾರದಲ್ಲಿ ರಾಜ್ಯದ ಜನತೆಯ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡುತ್ತಿದ್ದಾರೆ. ಆದರೆ, ಈ ವಿವಾದವನ್ನು ಸೌಹಾರ್ದಯುತವಾಗಿ ಚರ್ಚೆ ಮೂಲಕ ಬಗೆಹರಿಸಲು ಬಿಜೆಪಿ ಸಿದ್ಧವಿದೆ. ನಾವು ರಾಜಕೀಯ ಬೆರೆಸದೇ ಸಮಸ್ಯೆ ಬಗೆಹರಿಸುತ್ತೇವೆ” ಎಂದು ಹೇಳಿದರು.

ಮಹದಾಯಿ ಇತಿಹಾಸವೇ ಗೊತ್ತಿಲ್ಲ:
“”ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಹದಾಯಿ ವಿವಾದದ ಇತಿಹಾಸವೇ ಗೊತ್ತಿಲ್ಲ. 2007ರ ಗೋವಾ ವಿಧಾನಸಭಾ ಚುನಾವಣೆ ವೇಳೆ ಮಹದಾಯಿ ನದಿಯಿಂದ ಕರ್ನಾಟಕಕ್ಕೆ ಒಂದು ಹನಿ ನೀರನ್ನೂ ಕೊಡುವುದಿಲ್ಲ ಎಂದು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದರು. ನಂತರ ಗೋವಾದಲ್ಲಿ ಕಾಂಗ್ರೆಸ್‌ ಅಧಿಕಾರ ಕಳೆದುಕೊಂಡಿದ್ದು, ಇದೀಗ ಮಹದಾಯಿ ಹೆಸರಲ್ಲಿ ಕನ್ನಡಿಗರನ್ನು ಎತ್ತಿಕಟ್ಟಿ ರಾಜ್ಯದಲ್ಲಿ ಅಧಿಕಾರ ಉಳಿಸಿಕೊಳ್ಳುವ ಪ್ರಯಾಸ ನಡೆಸಿದೆ” ಎಂದರು.

“”2007ರಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರಲಿಲ್ಲ. ಕಾಂಗ್ರೆಸ್‌ ಪಕ್ಷದಲ್ಲೇ ಇರಲಿಲ್ಲ. ಆಗ ಅವರು ಜನತಾದಳದಲ್ಲಿದ್ದರು. ಹೀಗಾಗಿ ಮಹದಾಯಿ ವಿಚಾರದ ಕಾಂಗ್ರೆಸ್‌ ನಿಲುವಿನ ಬಗ್ಗೆ ಸಿದ್ದರಾಮಯ್ಯಗೆ ಮಾಹಿತಿಯೇ ಇಲ್ಲ. ಮೊದಲು ಈ ಕುರಿತು ತಮ್ಮ ಪಕ್ಷದ ವರಿಷ್ಠರಿಂದ ಇದನ್ನು ಸ್ಪಷ್ಟಪಡಿಸಿಕೊಳ್ಳಬೇಕು. ತಮ್ಮ ಸ್ವಾರ್ಥ ರಾಜಕಾರಣಕ್ಕಾಗಿ ಮಹದಾಯಿ ವಿಚಾರವಾಗಿ ನ್ಯಾಯಾ ಧಿಕರಣ ರಚಿಸುವ ಮೂಲಕ ಈ ಭಾಗದ ಮಹತ್ವದ ವಿಷಯನ್ನು ಜೀವಂತವಾಗಿಟ್ಟಿದೆ. ಯಾವುದೇ ವಿಷಯವನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್‌ ಪರಿಹರಿಸಲ್ಲ. ಇದು  ಅಟಖಾನಾ (ಸಿಲುಕಿಸುವುದು), ಬಟಖಾನಾ(ಉದ್ರೇಕಿಸುವುದು) ಕಾಂಗ್ರೆಸ್‌ ಪರಿಪಾಠ” ಎಂದು ಹೇಳಿದರು.

ಟ್ಯಾಂಕ್‌ ಉಳಿಸಲು ಹರಸಾಹಸ:
ದೇಶದ ಬಹುತೇಕ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್‌ಗೆ ಇದೀಗ ಕರ್ನಾಟಕದ ಭೀತಿ ಶುರುವಾಗಿದೆ. ಕಾಂಗ್ರೆಸ್‌ ಮಂತ್ರಿಗಳು, ನಾಯಕರು ಒಂದು ಟ್ಯಾಂಕ್‌ ಮಾಡಿದ್ದಾರೆ. ತಮ್ಮ ಅಕ್ರಮ ಸಂಪಾದನೆಯಲ್ಲಿ ಒಂದಿಷ್ಟು ಭಾಗವನ್ನು ಈ ಟ್ಯಾಂಕ್‌ನಲ್ಲಿ ಹಾಕುತ್ತಾರೆ. ಅದು ನೇರವಾಗಿ ದೆಹಲಿಯ ಕಾಂಗ್ರೆಸ್‌ ವರಿಷ್ಠರಿಗೆ ಸಲುತ್ತದೆ ಎಂದು ಮೋದಿ ಆರೋಪಿಸಿದರು.

ತಮ್ಮ ಭಾಷಣದ ಮಧ್ಯೆ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆಯನ್ನು ವಿಡಂಬನಾತ್ಮಕವಾಗಿ ವರ್ಣಿಸಿದರು. ರಾಜ್ಯದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಳನ್ನು ಆಂತರಿಕವಾಗಿ ಟೆಂಡರ್‌ ಹಾಕಲಾಗಿತ್ತು. ಹೆಚ್ಚು ಹಣ ಕೊಟ್ಟವರಿಗೆ ಟಿಕೆಟ್‌ ಸಿಕ್ಕಿದೆ. ಅದರಂತೆ ಆಕಸ್ಮಿಕವಾಗಿ ಕಾಂಗ್ರೆಸ್‌ ಅ ಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಹುದ್ದೆಯನ್ನೂ ಟೆಂಡರ್‌ ಹಾಕುತ್ತಾರೆ. ಈ ಹಿನ್ನೆಲೆಯಲ್ಲಿ ಈ ಭಾಗದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕು ಎಂದು ಮನವಿ ಮಾಡಿದ ಅವರು, ಈಗಾಗಲೇ ಸೋಲಿನ ಮುನ್ಸೂಚನೆ ಅರಿತಿರುವ ಕಾಂಗ್ರೆಸ್‌ ನಾಯಕರು ವಿಲವಿಲನೆ ಒದ್ದಾಡುತ್ತಿದ್ದಾರೆ ಎಂದರು.

ಹೇಮಾವತಿ-ನೇತ್ರಾವತಿ ಜೋಡಣೆಗೆ ಕ್ರಮ
“ರಾಜ್ಯದ ಎರಡು ಪ್ರಮುಖ ನದಿಗಳಾದ ಹೇಮಾವತಿ ಮತ್ತು ನೇತ್ರಾವತಿ ನದಿ ಜೋಡಣೆ ಕೆಲಸವನ್ನು ಕೈಗೆತ್ತಿಕೊಳ್ಳಲಾಗುವುದು” ಎಂದಿದ್ದಾರೆ. ತುಮಕೂರಿನಲ್ಲಿ ಶನಿವಾರ ಪ್ರಚಾರ ಭಾಷಣ ಮಾಡಿದ ಅವರು, “ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರು ದೇಶದ ನದಿಗಳ ಜೋಡಣೆಯ ಕನಸನ್ನು ಕಂಡಿದ್ದರು. ಅದನ್ನು ನಮ್ಮ ಸರ್ಕಾರ ಸಾಕಾರಗೊಳಿಸುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದ ಹೇಮಾವತಿ ಮತ್ತು ನೇತ್ರಾವತಿ ನದಿ ಜೋಡಣೆ ಕೆಲಸವನ್ನು ಕೈಗೆತ್ತಿಕೊಳ್ಳುತ್ತೇವೆ” ಎಂದು ಹೇಳಿದರು.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.