ಮದಕರಿ ನಾಯಕ, ಓಬವ್ವಳನ್ನು ಮರೆತು ಸುಲ್ತಾನರ ಜಯಂತಿ ಮಾಡುತ್ತಾರೆ


Team Udayavani, May 6, 2018, 11:33 AM IST

narendra_modi_14112013.jpg

ಚಿತ್ರದುರ್ಗ: ‘ಯಾರು ನಾಡಿಗೆ ಕೊಡುಗೆ ನೀಡಿದ್ದಾರೊ, ಅಂತಹವರ ಜಯಂತಿಗಳನ್ನು ಆಚರಿಸಲು ಕಾಂಗ್ರೆಸ್‌ ಮರೆತಿದೆ. ವೀರ ಮದಕರಿ ನಾಯಕ, ಒನಕೆ ಓಬವ್ವಳನ್ನು ಮರೆತು ಸುಲ್ತಾನರ ಜಯಂತಿ ಆಚರಿಸುತ್ತಿದೆ’ ಎಂದು ಭಾವನಾತ್ಮಕ ವಿಚಾರಗಳನ್ನು ಪ್ರಸ್ತಾವಿಸಿ ಭಾನುವಾರ ಬೃಹತ್‌ ಸಮಾವೇಶದಲ್ಲಿ  ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಿದರು. 

‘ಕಾಂಗ್ರೆಸ್‌ ಕೇವಲ ವೋಟ್‌ ಬ್ಯಾಂಕ್‌ಗಾಗಿ ಮಾತ್ರ ಜಯಂತಿಗಳನ್ನು ಆಚರಿಸುತ್ತಿದೆ.ಮದಕರಿ ನಾಯಕ, ಓಬವ್ವಳನ್ನು ಕೊಂದವರ ಜಯಂತಿ ಆಚರಣೆ ಮಾಡಿ ಚಿತ್ರದುರ್ಗದ ಜನರಿಗೆ ಅವಮಾನ ಮಾಡಿದೆ’ ಎಂದರು. 

 ‘ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನೂ ಕಾಂಗ್ರೆಸ್‌ ಅವಮಾನ ಮಾಡಿತ್ತು. ಅಂಬೇಡ್ಕರ್‌ ಅವರು ನಮ್ಮನ್ನಗಲಿ ಎಷ್ಟೋ ವರ್ಷಗಳ ನಂತರ ವಾಜಪೇಯಿ ಅವರು ಅವರಿಗೆ ಭಾರತ ರತ್ನ ನೀಡಬೇಕಾಯಿತು, ಕಾಂಗ್ರೆಸ್‌ ಆ ಕೆಲಸ ಮಾಡಲಿಲ್ಲ’ ಎಂದರು.  

‘ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ , ದೊಡ್ಡ ನಾಯಕ ಎಸ್‌. ನಿಜಲಿಂಗಪ್ಪ ಅವರ ನ್ನು ಕಾಂಗ್ರೆಸ್‌ ನ ಪರಿವಾರ ಯಾವ ರೀತಿ ಅಪಮಾನ ಮಾಡಿದೆ ಎನ್ನುವುದನ್ನು ಯುವಕರು ನೆನಪಿಸಿಕೊಳ್ಳಬೇಕಾಗಿದೆ. ಯಾವುದೇ ಅವಕಾಶಗಳನ್ನು ನೀಡದೆ ಅವರನ್ನು  ಬದಿಗೆ ಸರಿಸಿದರು. ಅವರು ಮಾಡಿದ ತಪ್ಪು  ಯಾವುದು? ಬೇರೆ ಯಾವುದೂ ಅಲ್ಲ. ನೆಹರು ತಪ್ಪು ನೀತಿಗಳ ವಿರುದ್ಧ , ಆರ್ಥಿಕ ನೀತಿಗಳ ವಿರುದ್ಧ ಸವಾಲು ಎತ್ತಿದ್ದರು ಅದು ಮಾತ್ರ ಅವರ ತಪ್ಪು’ ಎಂದರು.

ನಾವು ಜಾತಿ ಧರ್ಮ ನೋಡುವುದಿಲ್ಲ,ಮಹಾನ್‌ ವಿಜ್ಞಾನಿ ಎಪಿಜೆ ಅಬ್ದುಲ್‌ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದೆವು. ನಾನು ಪ್ರಧಾನಿ ಅದ ಬಳಿಕ ಬಡ ದಲಿತ ಸಮುದಾಯದಲ್ಲಿ ಹುಟ್ಟಿದ ರಾಮ್‌ನಾಥ್‌ ಕೋವಿಂದ್‌ ಅವರನ್ನು ರಾಷ್ಟ್ರಪತಿ ಮಾಡಿ ನಮ್ಮ ಬದ್ಧತೆ ತೋರಿಸಿದ್ದೇವೆ. 

‘ಕಾಂಗ್ರೆಸ್‌ಗೆ ದಿಗಿಲಾಗಿದೆ,ಪ್ರಧಾನಿಯೂ ಬಡ ಸಣ್ಣ ಕುಟುಂಬದಿಂದ ಬಂದವರು, ರಾಷ್ಟ್ರಪತಿಯೂ ಬಡ ದಲಿತ ಸಮುದಾಯದಿಂದ ಬಂದವರು.ನಮ್ಮ ವೋಟ್‌ ಬ್ಯಾಂಕ್‌ ಭಂಗವಾಯಿತು ಎಂದು ಅವರಿಗೆ ಅರ್ಥವಾಗಿದೆ’ಎಂದರು.

‘ದಲಿತರ ನಡುವಿನಿಂದ ಬಂದವನು ನಾನು. ನಮಗೆ ಹಳ್ಳಿಗಳಲ್ಲಿ ಹೇಗೆ ದಲಿತರಿಗೆ ದೌರ್ಜನ್ಯ ನಡೆಯುತ್ತದೆ ಎನ್ನುವುದು ಗೊತ್ತು. ದಲಿತರ ವಿರುದ್ಧ ದೌರ್ಜನ್ಯ ನಡೆಯಬಾರದು ಎಂದು ನಾವು ಕಾನೂನನ್ನು ಇನ್ನಷ್ಟು ಕಠಿಣ ಮಾಡಿದ್ದೇವೆ’ ಎಂದರು. 

‘ನಾನು ದಲಿತ, ಶೋಷಿತ, ಬಡ ವರ್ಗದ ನಡುವಿನಿಂದ ಬಂದವನು. ನಮ್ಮ ಉದ್ದೇಶವೇ ನಿಮ್ಮ ಅಭಿವೃದ್ಧಿ , ನಮ್ಮ ಎಲ್ಲಾ ಯೋಜನೆಗಳು ನಿಮ್ಮ ಏಳಿಗೆಗಾಗಿ’ ಎಂದರು. 

‘ರಾಜ್ಯದಲ್ಲಿ ಮಂತ್ರಿಗಳು ಡೀಲ್‌ ಮಾಡುತ್ತಿದ್ದಾರೆ. ಈಗ ಕರ್ನಾಟಕದಲ್ಲಿರುವುದು ಡೀಲ್‌ ಸಕಾರ, ಕಾಂಗ್ರೆಸ್‌ಗೆ ದಿಲ್‌ ಇಲ್ಲ ಡೀಲ್‌ ಮಾತ್ರ . ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಟ್‌ಕೇಸ್‌ನಲ್ಲಿ  ಕ್ಯಾರೆಕ್ಟರ್‌ ಸರ್ಟಿಫಿಕೇಟ್‌ ಇಟ್ಟುಕೊಂಡು ತಿರುಗುತ್ತಾರೆ. ಯಾವುದಾದರು ಮಂತ್ರಿ ಮೇಲೆ ಆರೋಪ ಬಂದರೆ ಕೂಡಲೆ ಅವರ ಹೆಸರು ಬರೆದು ಸಾರ್ವಜನಿಕರಿಗೆ ನೀಡುತ್ತಾರೆ. ಆರೋಪಿತ ಮಂತ್ರಿಗಳಿಗೆ ಮುಖ್ಯಮಂತ್ರಿ  ಕ್ಲೀನ್‌ ಚಿಟ್‌ ನೀಡುತ್ತಾರೆ. ಈ ಬಾರಿ ಅವರನ್ನು ಕ್ಲೀನ್‌ ಸ್ವೀಪ್‌ ಮಾಡಿ’ ಎಂದರು. 

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.