ಆರು ತಿಂಗಳುಗಳಲ್ಲಿ ಮಹಾದಾಯಿ ಇತ್ಯರ್ಥ: ಶಾ
Team Udayavani, May 7, 2018, 7:40 AM IST
ರಾಮದುರ್ಗ: ಯಡಿಯೂರಪ್ಪ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ 6 ತಿಂಗಳುಗಳಲ್ಲಿ ಮಹಾದಾಯಿ ವಿವಾದ ಇತ್ಯರ್ಥ ಗೊಳಿಸಿ ಈ ಭಾಗದ ರೈತರ ಬಹುದಿನಗಳ ಸಮಸ್ಯೆ ಬಗೆಹರಿಸಲಾಗುವುದು ಎಂದು ಅಮಿತ್ ಶಾ ಭರವಸೆ ನೀಡಿದರು.
ಬಿಜೆಪಿ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮಹಾದಾಯಿ ವಿಷಯದಲ್ಲಿ ಸಿದ್ದರಾಮಯ್ಯ ಸರಕಾರ ಆಸಕ್ತಿ ವಹಿಸದ ಕಾರಣ ನನೆಗುದಿಗೆ ಬಿದ್ದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಪಾಕಿಸ್ಥಾನದ ವಿಚಾರಗಳು ಒಂದೇ ಆಗಿವೆ. ರಾಜ್ಯದ ಮಹಾನ್ ವ್ಯಕ್ತಿಗಳ ಜಯಂತಿಗಳನ್ನು ಆಚರಣೆ ಮಾಡದ ಸಿದ್ದರಾಮಯ್ಯ ಸರಕಾರ ಟಿಪ್ಪು ಜಯಂತಿ ಆಚರಣೆ ಮಾಡಿ ಪಾಕಿಸ್ಥಾನದಿಂದ ಅಭಿನಂದನಾ ಟ್ವೀಟ್ಗಳನ್ನು ಪಡೆಯುತ್ತಿದೆ. ರಾಜ್ಯದಲ್ಲಿ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರನ್ನು ಗೆಲ್ಲಿಸುತ್ತೇನೆಂದು ಹೇಳಿಕೊಳ್ಳುತ್ತ ತಿರುಗುತ್ತಿದ್ದಾರೆ. ಚುನಾವಣೆ ಅಂಗಳ ದಿಂದ ಓಡಿ ಹೋದವರು ಯಾರನ್ನು ಗೆಲ್ಲಿಸಲು ಸಾಧ್ಯ? ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲು ಖಚಿತ ಎಂಬ ಭೀತಿಯಲ್ಲಿ ಬಾದಾಮಿಗೆ ಬಂದಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ