“ಸಿಎಂಗೆ ದುಬಾರಿ ಗಿಫ್ಟ್ ‘
Team Udayavani, May 7, 2018, 7:45 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲೆಮರೆಸಿಕೊಂಡಿರುವ ಉದ್ಯಮಿಯನ್ನು ಭೇಟಿ ಮಾಡಿ ದುಬಾರಿ ಉಡುಗೊರೆ ಪಡೆದಿರುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಡಾ| ಸಂಬೀತ್ ಪಾತ್ರ ಆರೋಪಿಸಿದ್ದಾರೆ.
2013ರ ಆಗಸ್ಟ್ 13ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚೀನ ಪ್ರವಾಸಕ್ಕೆ ಹೋಗಿದ್ದ ಸಂದರ್ಭದಲ್ಲಿ ತಲೆಮರೆಸಿಕೊಂಡಿರುವ ಕ್ಯೂಐ ಕಂಪೆನಿಯ ಉದ್ಯಮಿ ವಿಜಯ್ ಈಶ್ವರನ್ ಅವನ್ನು ಭೇಟಿಯಾಗಿದ್ದಾರೆ. ಕರ್ನಾಟಕದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮ್ಮೇಳನಕ್ಕೆ ಬರುವಂತೆ ವಿಜಯ್ ಈಶ್ವರನ್ ಅವರಿಗೆ ಆಹ್ವಾನ ನೀಡಿದ್ದರು ಎಂದವರು ಪತ್ರಿಕಾಗೋಷ್ಠಿಯಲ್ಲಿ ದಾಖಲೆ ಸಹಿತ ವಿವರಿಸಿದರು.
ವಿಜಯ್ ಈಶ್ವರನ್ ಅವರು ಚೆನ್ನೈ ಮತ್ತು ಮುಂಬಯಿಯಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೆ ಒಳಪಟ್ಟಿದ್ದರು. ಎಸ್ಎಫ್ಐಯಿಂದ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಘೋಷಿಸಲ್ಪಟ್ಟಿದ್ದ ಎಂಎಲ್ಎಂ ಉದ್ಯಮ ಹೊಂದಿದ್ದ ವಿಜಯ್ ಈಶ್ವರನ್, 2009ರಿಂದ ಪರಾರಿಯಾಗಿದ್ದಾರೆ.
ಚೀನದ ಭೇಟಿ ವೇಳೆ ಉದ್ಯಮಿ ವಿಜಯ್ ಈಶ್ವರನ್ ಅವರನ್ನು ಭೇಟಿ ಮಾಡಿದ್ದು ಏಕೆ ಎಂದು ಪ್ರಶ್ನಿಸಿದ ಪಾತ್ರ, ನಿಮಗೆ ಅವರು ಹೇಗೆ ಗೊತ್ತು? ಭೇಟಿಯ ಸಂದರ್ಭದಲ್ಲಿ ಏನಾದರೂ ಗಿಫ್ಟ್ ನೀಡಿದ್ದರೇ? ಅದು ಏನು? ಅದೇ ನಿಮ್ಮ ಹ್ಯುಬ್ಲೊಟ್ ಕೈಗಡಿಯಾರವೇ? ಇದನ್ನು ನಿಮ್ಮ ಆಸ್ತಿ ವಿವರದಲ್ಲಿ ಉಲ್ಲೇಖೀಸಿದ್ದಿರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್