ಬಿಜೆಪಿಗೂ ಐಟಿ ಶಾಕ್!: ಶ್ರೀರಾಮುಲು,ಆಪ್ತರು ಟಾರ್ಗೆಟ್
Team Udayavani, May 9, 2018, 9:46 AM IST
ಮೊಳಕಾಲ್ಮೂರು: ಬಾದಾಮಿಯಲ್ಲಿ ಕಾಂಗ್ರೆಸ್ ಬೆಂಬಲಿತರ ರೆಸಾರ್ಟ್ ಮತ್ತು ಹೊಟೇಲ್ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಬಿಜೆಪಿಗೂ ಶಾಕ್ ನೀಡಿ ಟೀಕಾಕಾರರ ಬಾಯಿ ಮುಚ್ಚಿಸಲು ಮುಂದಾಗಿದ್ದಾರೆ.
ಸಂಸದ, ಬಿಜೆಪಿಯ ಅಭ್ಯರ್ಥಿ ಶ್ರೀರಾಮುಲು ಅವರು ತಂಗಿದ್ದ ಬಾದಾಮಿ ಯ ಹೊಟೇಲ್ ಮತ್ತು ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ಮಂಗಳವಾರ ತಡರಾತ್ರಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ರಾಮುಲು ಆಪ್ತ ಮೊಳಕಾಲ್ಮೂರು ತಾಲೂಕು ಬಿಜೆಪಿ ಅಧ್ಯಕ್ಷ ಟಿ.ರೇವಣ್ಣ ಅವರ ತೋಟದ ಮನೆ , ಧನಂಜಯ ರೆಡ್ಡಿ ಎನ್ನುವವರ ದೊಡ್ಡ ಉಳ್ಳಾರ್ತಿಯಲ್ಲಿರುವ ಮನೆಯ ಮೇಲೂ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಮಾಡಾಳ್ ವಿರೂಪಾಕ್ಷ ಮನೆಯ ಮೇಲೂ ದಾಳಿ
ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಡಾಳ್ ವಿರೂಪಾಕ್ಷಪ್ಪ ಅವರ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಐಟಿ ದಾಳಿ ನಡೆಯುತ್ತಿದ್ದಂತೆ ಬೆಂಬಲಿಗರು ಮನೆಯ ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಸಿಎಂ ಸವಾಲಿನ ಬೆನ್ನಲ್ಲೆ ಬಿಜೆಪಿಗರ ಮೇಲೆ ದಾಳಿ !
ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರು ಸೋಲಿನ ಭೀತಿಯಿಂದ ಚುನಾವಣೆ ವೇಳೆ ದ್ವೇಷದಿಂದ ಐಟಿ ದಾಳಿ ಮಾಡುತ್ತಿದ್ದಾರೆ. ಸಾಧ್ಯವಿದ್ದರೆ ಬಿಜೆಪಿಗರ ಮೇಲೆ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದ್ದರು. ಸವಾಲಿನ ಬೆನ್ನಲ್ಲೇ ಬಿಜೆಪಿಗರ ಮೇಲೆ ಐಟಿ ದಾಳಿ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ