ಮಂಡ್ಯ:ಮದುವೆ ದಿನವೇ ಪರೀಕ್ಷೆಗೆ ಹಾಜರಾದ ವಧು!
Team Udayavani, May 9, 2018, 3:46 PM IST
ಮಂಡ್ಯ: ಹೆಣ್ಣಿಗೆ ಮದುವೆ ಅನ್ನುವುದು ಮಹತ್ವದ ದಿನ ಆದಿನ ಮದುಮಗಳಾಗಿ ಹಸೆಮಣೆ ಏರುವ ಗಳಿಗೆ. ಬೇರೆ ಯಾವುದೇ ಕೆಲಸವು ಮದುಮಗಳಿಗಿಲ್ಲ. ಆದರೆ ಕೆ.ಆರ್.ಪೇಟೆಯಲ್ಲಿ ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಪರೀಕ್ಷೆ ಬರೆದು ಮದುವೆ ಮಂಟಪಕ್ಕೆ ತೆರಳಿ ಸುದ್ದಿಯಾಗಿದ್ದಾಳೆ.
ಕಾವ್ಯಾ ಎಂಬಾಕೆಗೆ ಲೋಹಿತ್ ಎನ್ನುವ ವರನೊಂದಿಗೆ ವಿವಾಹ ನಿಗದಿಯಾಗಿತ್ತು. ಆದರೆ ಇಂದೇ ಟ್ಯಾಕ್ಸೆಷನ್ ಪರೀಕ್ಷೆಯೂ ಇತ್ತು. 9.15 ರ ವೇಳೆ ಸಾಲಂಕೃತ ವಧುವಾಗಿ ಪರೀಕ್ಷಾ ಕೊಠಡಿಯಲ್ಲಿ ಹಾಜರಿದ್ದ ಕಾವ್ಯಾ, ಸಂಭ್ರಮದಲ್ಲಿಯೇ ಪರೀಕ್ಷೆ ಬರೆದು ಮಹೂರ್ತಕ್ಕೆ ಸರಿಯಾಗಿ ಮದುವೆ ಮಂಟಪಕ್ಕೆ ತೆರಳಿದ್ದಾರೆ.
ಪ್ರತಿಭಾವಂತೆಯಾಗಿರುವ ಕಾವ್ಯಾ ಈಗಾಗಲೇ ಬರೆದಿರುವ 3 ಸೆಮ್ಗಳಲ್ಲಿ 90% ಅಂಕ ಪಡೆದಿದ್ದರು. ಈ ಬಾರಿ ಪರೀಕ್ಷೆ ಬರೆಯಲಾಗದೆ ಉಳಿದುಹೋಗಬಾರದು ಎಂದು ಕಾವ್ಯಾ ಮನೆಯವರು ಮತ್ತು ಗಂಡನ ಮನೆಯವರು ಪರೀಕ್ಷೆ ಬರೆಯಲೇಬೇಕೆಂದು ಪ್ರೋತ್ಸಾಹ ನೀಡಿದ್ದಾರೆ. ಈ ನಿರ್ಧಾರಕ್ಕೆ ಸಾಮಾಜಿಕ ತಾಣಗಳು ಸೇರಿದಂತೆ ಎಲ್ಲೆಡೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಅದೇಷ್ಟೋ ಹೆಣ್ಣು ಮಕ್ಕಳು ಮದುವೆಗಾಗಿ ಶಿಕ್ಷಣವನ್ನೇ ಮೊಟಕುಗೊಳಿಸಿದ್ದು, ಪರೀಕ್ಷೆಗಳನ್ನು ತಪ್ಪಿಸಿಕೊಂಡಿದ್ದು ಇದೆ. ಅಂತಹದರಲ್ಲಿ ಈ ಘಟನೆ ಎಲ್ಲರಿಗೂ ಮಾದರಿ ಎನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!