ಭೀಕರ ರಸ್ತೆ ಅಪಘಾತ 3 ಪೊಲೀಸ್ ಅಧಿಕಾರಿಗಳ ದುರ್ಮರಣ
Team Udayavani, May 10, 2018, 8:27 AM IST
ಬಾಗಲಕೋಟೆ : ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಪೊಲೀಸ್ ಅಧಿಕಾರಿಗಳ ಜೀಪಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿರುವ ಭೀಕರ ಅಪಘಾತ ಬಾಗಲಕೋಟೆ ಜಿಲ್ಲೆಯ ಸಂಗಮ ಕ್ರಾಸ್ ಬಳಿ ಬುಧವಾರ ತಡರಾತ್ರಿ ಸಂಭವಿಸಿದೆ.
ಮೃತ ದುರ್ದೈವಿಗಳು ಬೆಂಗಳೂರು ಸಿ.ಐ.ಡಿ. ಡಿ.ವೈ.ಎಸ್.ಪಿ. ಬಾಳೇಗೌಡ(55), ಸಿ.ಪಿ.ಐ. ಶಿವಸ್ವಾಮಿ(55), ಚಾಲಕ ವೇಣುಗೋಪಾಲ್(25) ಎನ್ನುವವರಾಗಿದ್ದಾರೆ.
ಬುಧವಾರ ತಡರಾತ್ರಿ 12 ಗಂಟೆಯ ಸುಮಾರಿಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಬಾಗಲಕೋಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.