ಬಾದಾಮಿ:ಅಧಿಕಾರಿಗಳ ದಾಳಿ;ಹಣ ಬಿಟ್ಟು ಹಂಚುತ್ತಿದ್ದವರು ಪರಾರಿ!
Team Udayavani, May 11, 2018, 4:18 PM IST
ಬಾದಾಮಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ಸಂಸದ ಶ್ರೀರಾಮುಲು ಸ್ಪರ್ಧಿಸಿರುವ ಬಾದಾಮಿ ಕ್ಷೇತ್ರದಲ್ಲಿ ಮತದಾರರಿಗೆ ಮತದಾನದ ಮುನ್ನಾ ದಿನ ಹಣ ಹಂಚುವ ಕಾರ್ಯ ಜೋರಾಗಿದ್ದು, ಅಧಿಕಾರಿಗಳ ದಾಳಿ ವೇಳೆ ಹಣ ಹಂಚುತ್ತಿದ್ದವರು ದಿಕ್ಕಾಪಾಲಾಗಿ ಓಡಿದ್ದಾರೆ.
ಹೊಸೂರು ಎಂಬಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ 2.96 ಲಕ್ಷ ನಗದು ಜಪ್ತಿ ಮಾಡಿದ್ದಾರೆ.
ಹಣ ಹಂಚುತ್ತಿದ್ದವರು ಅಧಿಕಾರಿಗಳನ್ನು ಕಂಡೊಡನೆ ಹಣವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಪತ್ತೆಯಾದ ಹಣದಲ್ಲಿ 500 , 200, 100 ಮತ್ತು 20 ರೂಪಾಯಿ ನೋಟುಗಳ ಕಟ್ಟುಗಳು ಪತ್ತೆಯಾಗಿವೆ.
ಮುದ್ದೇಬಿಹಾಳದಲ್ಲಿ 15 ಲಕ್ಷ ಜಪ್ತಿ
ವಿಜಯನಗರದ ಮುದ್ದೇಬಿಹಾಳದಲ್ಲಿ ದಾಖಲೆಯಿಲ್ಲದ 15 ಲಕ್ಷ ರೂಪಾಯಿ ಹಣ ಪತ್ತೆಯಾಗಿದ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಕೂಡ್ಲಿಗಿಯಲ್ಲಿ 27 ಲಕ್ಷ ರೂ ಜಪ್ತಿ
ಬಳ್ಳಾರಿಯ ಕೂಡ್ಲಿಗಿಯಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 27 ಲಕ್ಷ ರೂಪಾಯಿ ಹಣ ಜಪ್ತಿ ಮಾಡಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ಬಳಿ ಬಿಜೆಪಿ ಬಾವುಟ, ಕರಪತ್ರಗಳು ಪತ್ತೆಯಾಗಿವೆ. ಇನ್ನಿಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು