ಚಟುವಟಿಕೆಯ ಕೇಂದ್ರವಾದ ರಾಜಭವನ
Team Udayavani, May 17, 2018, 6:00 AM IST
ಬೆಂಗಳೂರು: ಅತಂತ್ರ ವಿಧಾನಸಭೆ ಹಿನ್ನೆಲೆಯಲ್ಲಿ ರಾಜಭವನ ಬುಧವಾರ ಇಡೀ ದಿನ ಬಿರುಸಿನ ರಾಜಕೀಯ ಚಟುವಟಿಕೆಯ ಕೇಂದ್ರವಾಗಿತ್ತು. ಬೆಳಗ್ಗೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಯಡಿಯೂರಪ್ಪ ನೇಮಕವಾದ ಬಳಿಕ, ರಾಜಭವನಕ್ಕೆ ಬಂದ ಕೇಂದ್ರ ಸಚಿವರಾದ ಅನಂತಕುಮಾರ್, ಪ್ರಕಾಶ್ ಜಾಬ್ಡೇಕರ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ವಾಲಾ ಅವರನ್ನು ಭೇಟಿ ಮಾಡಿ ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿತು. ಬಳಿಕ ಯಡಿಯೂರಪ್ಪ ಮಾತನಾಡಿ, ರಾಜ್ಯಪಾಲರು ಅವಕಾಶ ನೀಡುವ ನಿರೀಕ್ಷೆಯಿದ್ದು, ಸರ್ಕಾರ ರಚಿಸುವುದು ನಿಶ್ಚಿತ ಎಂದು ಹೇಳಿದರು.
ಮಧ್ಯಾಹ್ನದ ವೇಳೆಗೆ ಕೇಂದ್ರ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು ರಾಜಭವನಕ್ಕೆ ಭೇಟಿ ನೀಡಿದರು. ಸಂಜೆ ವೇಳೆಗೆ, ಕಾಂಗ್ರೆಸ್, ಜೆಡಿಎಸ್ ನಾಯಕರ ದಂಡು ರಾಜಭವನದತ್ತ ದೌಡಾಯಿಸಿತು. ಕುಮಾರಸ್ವಾಮಿ ನೇತೃತ್ವದಲ್ಲಿ ಸಾಕಷ್ಟು ಜೆಡಿಎಸ್ ಶಾಸಕರು ಸಂಜೆ 5 ಗಂಟೆ ಹೊತ್ತಿಗೆ ರಾಜಭವನಕ್ಕೆ ಬಂದು ಪರೇಡ್ಗೆ ಯತ್ನಿಸಿದರಾದರೂ ಕುಮಾರಸ್ವಾಮಿ, ವಿಧಾನ ಪರಿಷತ್ ಸದಸ್ಯ ರಮೇಶ್ಬಾಬು ಸೇರಿದಂತೆ 10 ಮಂದಿಗಷ್ಟೇ ರಾಜ್ಯಪಾಲರ ಭೇಟಿಗೆ ಅವಕಾಶ ನೀಡಲಾಯಿತು. ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಡಿ.ಕೆ. ಶಿವಕುಮಾರ್ ಇತರರು ರಾಜಭವನಕ್ಕೆ ಭೇಟಿ ನೀಡಿದರು. ಪರಮೇಶ್ವರ್, ಕೃಷ್ಣ ಬೈರೇಗೌಡ ಸೇರಿದಂತೆ 10 ಮಂದಿ ರಾಜ್ಯಪಾಲರನ್ನು ಭೇಟಿಯಾದರು.
ರಾಜ್ಯಪಾಲರ ಭೇಟಿ ಜಂಟಿ ಹೇಳಿಕೆ ನೀಡಿದ ಡಾ.ಜಿ.ಪರಮೇಶ್ವರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಎಸ್ ಬೆಂಬಲಿಸಲು ನಿರ್ಣಯ
ಕೈಗೊಳ್ಳಲಾಗಿದ್ದು, ಈ ಸಂಬಂಧ ಸರ್ಕಾರ ರಚನೆಗೆ ಅವಕಾಶ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದರು. ಇದೇ ವೇಳೆ, ರಾಜಭವನದ ಎದುರು ಜಮಾಯಿಸಿದ್ದ ಜೆಡಿಎಸ್ ಕಾರ್ಯಕರ್ತರು, ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ