ಬೆಳ್ಳಂಬೆಳಗ್ಗೆ ಮಾಜಿ BBMP ಕಾರ್ಪೋರೇಟರ್ ಮೇಲೆ ದುಷ್ಕರ್ಮಿಗಳ ದಾಳಿ
Team Udayavani, May 14, 2018, 9:09 AM IST
ಬೆಂಗಳೂರು: ನಗರದ ಸಜ್ಜನ್ ರಾವ್ ಸರ್ಕಲ್ ಬಳಿ ಮಾಜಿ ಬಿಜೆಪಿ ಕಾರ್ಪೋರೇಟರ್ ವೇದವ್ಯಾಸ ಭಟ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಸೋಮವಾರ ಬೆಳಗಿನ ಜಾವ ನಡೆದಿದೆ.
ಹಿಂದಿನಿಂದಲೂ ಪತ್ರಿಕಾ ವಿತರಕರಾಗಿ ಕೆಲಸ ಮಾಡುತ್ತಿದ್ದ ಭಟ್ ಅವರು ಎಂದಿನಂತೆ ಇಂದು ಬೆಳಗ್ಗೆ ಹುಡುಗರಿಗೆ ಮಾರ್ಗದರ್ಶನ ನೀಡಲು ತೆರಳಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ನೆಲಕ್ಕೆ ಕೆಡವಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ದಾಳಿಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ಕಾಂಗ್ರೆಸ್ ಬೆಂಬಲಿತರು ಸೋಲಿನ ಹತಾಶೆಯಿಂದ ದಾಳಿ ನಡೆಸಿದ್ದಾರೆ ಎಂದು ವೇದವ್ಯಾಸ್ ಭಟ್ ಅವರ ಸಹೋದರಿ ಆರೋಪ ಮಾಡಿದ್ದಾರೆ.
ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸ್ಥಳದಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ