ಬಿಜೆಪಿಗೆ ಅವಕಾಶ ನೀಡಿದರೆ ಭಾರೀ ಪ್ರತಿಭಟನೆ; ರಾಜ್ಯಪಾಲರಿಗೆ ಒತ್ತಡ ?
Team Udayavani, May 16, 2018, 3:49 PM IST
ಬೆಂಗಳೂರು: ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲೇಬೇಕು ಎನ್ನುವ ಉದ್ದೇಶದೊಂದಿಗೆ ಕಾಂಗ್ರೆಸ್ ಮತ್ತು ಇತರ ಸಮಾನ ಮನಸ್ಕ ಪಕ್ಷಗಳು ಒಂದಾಗಿವೆ. ಸರ್ಕಾರ ರಚನೆಗೆ ಬಹುಮತ ಇರದ ಬಿಜೆಪಿಗೆ ರಾಜ್ಯಪಾಲರು ಅವಕಾಶ ನೀಡಿದರೆ ಬೃಹತ್ ಪ್ರತಿಭಟನೆ ನಡೆಸುವ ಮುನ್ಸೂಚನೆ ನೀಡಿ ಒತ್ತಡ ಹೇರಲು ಮುಂದಾಗಿವೆ.
104 ಸ್ಥಾನ ಹೊಂದಿರುವ ಬಿಜೆಪಿಗೆ ಬಹುಮತ ಇಲ್ಲ. ಅವರಿಗೆ ಅವಕಾಶ ನೀಡುವುದು ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ಸಾಧ್ಯವಿಲ್ಲ, ಇದು ಕಾನೂನು ಬಾಹಿರವಾಗುತ್ತದೆ ಎಂದು ಕಾಂಗ್ರೆಸ್ ಹೇಳಿದೆ.
ಎಲ್ಲಿಯಾದರೂ ರಾಜ್ಯಪಾಲರು ಬಿಜೆಪಿ ಅವಕಾಶ ನೀಡಿದರೆ ಕಾಂಗ್ರೆಸ್ ಶಾಸಕರು, ಸಂಸದರು, ರಾಷ್ಟ್ರೀಯ ನಾಯಕರು, ಜೆಡಿಎಸ್ ಶಾಸಕರು, ಮುಖಂಡರು , ಇತರ ಕೆಲ ಪ್ರಾದೇಶಿಕ ಪಕ್ಷಗಳ ನಾಯಕರು ಆಹೋರಾತ್ರಿ ಧರಣಿ ನಡೆಸುವ ಮುನ್ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.
ಈಗಾಗಲೇ ಬಿಜೆಪಿಯು ರಾಜ್ಯಪಾಲರನ್ನು ಭೇಟಿಯಾಗಿ ಸರ್ಕಾರ ರಚನೆಯ ಹಕ್ಕು ಮಂಡಿಸಿದೆ. ಇನ್ನೊಂದೆಡೆ ಕಾಂಗ್ರೆಸ್ ಮೂರನೇ ಮತ್ತು ಜೆಡಿಎಸ್ ಸರಕಾರ ರಚಿಸುವುದಕ್ಕೆ ಬೇಷರತ್ ಬೆಂಬಲ ಘೋಷಿಸಿ ರಾಜ್ಯಪಾಲರಿಗೆ ಪತ್ರ ನೀಡಿದೆ. ಇದರ ಆಧಾರದ ಮೇಲೆ ಕಾಂಗ್ರೆಸ್ ಜತೆ ಮೈತ್ರಿ ಸರಕಾರ ರಚಿಸಲು ಅವಕಾಶ ಕೋರಿ ಜೆಡಿಎಸ್ ಕೂಡ ರಾಜ್ಯಪಾಲರ ಮುಂದೆ ಹಕ್ಕು ಪ್ರತಿಪಾದಿಸಿದೆ.
ಈಗ ಚೆಂಡು ರಾಜ್ಯಪಾಲರ ಅಂಗಣದಲ್ಲಿದ್ದು, ಬಿಜೆಪಿಗೆ ಅವಕಾಶ ನೀಡುತ್ತಾರೋ, ಜೆಡಿಎಸ್ -ಕಾಂಗ್ರೆಸ್ ಸರ್ಕಾರ ರಚಿಸಲು ಅವಕಾಶ ಮಾಡಿ ಕೊಡುತ್ತಾರೋ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!