ಕಾಂಗ್ರೆಸ್ ನಾಯಕರಲ್ಲಿ ಆಪರೇಷನ್ ಗುಮಾನಿ
Team Udayavani, May 18, 2018, 7:00 AM IST
ಬೆಂಗಳೂರು: ಆಪರೇಷನ್ ಕಮಲದ ಭೀತಿ ಕಾಂಗ್ರೆಸ್ ನಾಯಕರಲ್ಲಿ ಮನೆ ಮಾಡಿದ್ದು, ಪಕ್ಷದ ಬಹುತೇಕ ಶಾಸಕರ
ನಡೆಯ ಬಗ್ಗೆ ಅನುಮಾನದಿಂದ ನೋಡುವಂತಾಗಿದೆ.
ವಿಶೇಷವಾಗಿ ಲಿಂಗಾಯತ ಸಮುದಾಯದ ಶಾಸಕರನ್ನು ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ಅಮರೇಗೌಡ
ಬಯ್ನಾಪುರ, ರಾಜಶೇಖರ ಪಾಟೀಲ್ ಹುಮನಾಬಾದ್, ಪ್ರತಾಪ್ಗೌಡ ಪಾಟೀಲ್, ಮಹೇಶ್ ಕುಮಟಳ್ಳಿ ಸೇರಿ ಎಂಟಕ್ಕೂ ಹೆಚ್ಚು ಶಾಸಕರೊಂದಿಗೆ ಬಿಜೆಪಿ ನಾಯಕರು ಸಂಪರ್ಕದಲ್ಲಿದ್ದಾರೆ. ಉತ್ತರ ಕರ್ನಾಟಕ ಭಾಗದ ಲಿಂಗಾಯತ ಶಾಸಕರನ್ನು ಸೆಳೆಯಲು ಬಸನಗೌಡ ಪಾಟೀಲ್ ಯತ್ನಾಳ್, ವೀರಣ್ಣ ಚರಂತಿಮs…, ಉಮೇಶ್ ಕತ್ತಿ ಅವರಿಗೆ ಹೊಣೆಗಾರಿಕೆ ನೀಡಿ 3 ದಿನಗಳ ಕಾಲಾವಕಾಶ ನೀಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ದೇಶಪಾಂಡೆಗೂ ಗಾಳ?: ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆಗೂ ಬಿಜೆಪಿ ನಾಯಕರು ಆಹ್ವಾನ
ನೀಡಿದ್ದು, ಡಿಸಿಎಂ ಮಾಡುವ ಆಮಿಷ ಒಡ್ಡಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ.
ಇನ್ನೊಂದು ಮೂಲಗಳ ಪ್ರಕಾರ ಸಿದ್ದರಾಮಯ್ಯ ವಿರುದ್ಧ ಮುನಿಸಿಕೊಂಡಿದ್ದ ಸತೀಶ್ ಜಾರಕಿಹೊಳಿಯವರನ್ನೂ
ಸಂಪರ್ಕಿಸಿದ್ದಾರೆ. ಅವರೊಂದಿಗೆ ಏಳೆಂಟು ಶಾಸಕರನ್ನು ಕರೆದುಕೊಂಡು ಬರುವಂತೆ ಹೇಳಿದ್ದಾರೆಂಬ ಮಾತುಗಳು
ಕೇಳಿ ಬರುತ್ತಿವೆ. ಈ ರೀತಿ ಹೆಸರು ಕೇಳಿ ಬರುತ್ತಿರುವುದರಿಂದ ಜನತೆ, ಮಾಧ್ಯಮದವರಿಗೆ ವಿವರಣೆ ನೀಡುವುದೇ
ಕಷ್ಟವಾಗುತ್ತಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ