ಶಿರಾ ಲಾರಿ -ಬಸ್ಸು ಭೀಕರ ರಸ್ತೆ ಅಪಘಾತ 7 ಮಂದಿ ದುರ್ಮರಣ
Team Udayavani, May 21, 2018, 7:52 AM IST
ತುಮಕೂರು : ಲಾರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 7 ಮಂದಿ ಸಾವನ್ನಪ್ಪಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ರವಿವಾರ ಮಧ್ಯರಾತ್ರಿ ಸಂಭವಿಸಿದೆ.
ಅನುಷಾ (7) ಸವಿತಾ (20) ರತ್ನಮ್ಮ (38) ಶಂಕರ (35) ಅಶ್ವಥನಾರಾಯಣ (50) ಸುಮಲತಾ (21) ಗಿರಿಜಮ್ಮ (50) ಮೃತರು ಶಿರಾ ಪಟ್ಟಣ, ಪಟ್ಟನಾಯಕನ ಹಳ್ಳಿ ನಿವಾಸಿಗಳೆಂದು ತಿಳಿದು ಬಂದಿದೆ.
ಬಸ್ಸಿನಲ್ಲಿ ಸುಮಾರು 60ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿದ್ದು ಸಿಗಂದೂರಿನಿಂದ ಶಿರಾ ಕಡೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಗಾಯಾಳುಗಳನ್ನು ಶಿರಾ ಹಾಗೂ ತುಮಕೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು ಶಿರಾ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.