ಶಾಮನೂರುಗೆ ಡಿಸಿಎಂ ಹುದ್ದೆ ನೀಡಲು ದಿಂಗಾಲೇಶ್ವರ ಶ್ರೀ ಒತ್ತಾಯ
Team Udayavani, May 22, 2018, 7:20 AM IST
ಲಕ್ಷ್ಮೇಶ್ವರ: “ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ವೀರಶೈವ ಮಹಾಸಭಾ ಅಧ್ಯಕ್ಷರೂ ಆದ ಶಾಮನೂರ ಶಿವಶಂಕರಪ್ಪನವರಿಗೆ ಮೈತ್ರಿಕೂಟದ ಹೊಸ ಸರ್ಕಾರದಲ್ಲಿ ಡಿಸಿಎಂ ಹುದ್ದೆ ಕೊಡಲೇಬೇಕು’ ಎಂದು ಬಾಲೆಹೊಸೂರು ಶ್ರೀ ದಿಂಗಾಲೇಶ್ವರ ಸ್ವಾಮಿಗಳು ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು, ಶಾಮನೂರ ಶಿವಶಂಕರಪ್ಪನವರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿ ಇರುವುದರೊಂದಿಗೆ ವೀರಶೈವ ಲಿಂಗಾಯತ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರಾಗುವಲ್ಲಿ ಶ್ರಮಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರಕಾರದಲ್ಲಿ 20 ಜನ ವೀರಶೈವ ಲಿಂಗಾಯತ ಶಾಸಕರು ಆಯ್ಕೆಯಾಗಿದ್ದು, ಮೈತ್ರಿಕೂಟ ಸರಕಾರದ ರಚನೆಯಲ್ಲಿ ಈ ಶಾಸಕರ ಪಾತ್ರ ಮಹತ್ವದ್ದಾಗಿದೆ. ವೀರಶೈವ ಲಿಂಗಾಯತ ಸಮಾಜಕ್ಕೆ ಉತ್ತಮ ಸಂದೇಶ ಮತ್ತು ಅವಕಾಶ ನೀಡುವ ನಿಟ್ಟಿನಲ್ಲಿ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಅಲ್ಲದೇ ಮೈತ್ರಿಕೂಟದ ಸರಕಾರದಲ್ಲಿ ಕನಿಷ್ಠ 5 ಜನ ವೀರಶೈವ ಲಿಂಗಾಯತ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಭವಿಷ್ಯದಲ್ಲಿ ಪಕ್ಷದ ಅಸ್ತಿತ್ವ-ಸಂಘಟನೆಗೆ ಮುಂದಾಗಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ