ಶಾಮನೂರುಗೆ ಡಿಸಿಎಂ ಹುದ್ದೆ ನೀಡಲು ದಿಂಗಾಲೇಶ್ವರ ಶ್ರೀ ಒತ್ತಾಯ
Team Udayavani, May 22, 2018, 7:20 AM IST
ಲಕ್ಷ್ಮೇಶ್ವರ: “ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು, ವೀರಶೈವ ಮಹಾಸಭಾ ಅಧ್ಯಕ್ಷರೂ ಆದ ಶಾಮನೂರ ಶಿವಶಂಕರಪ್ಪನವರಿಗೆ ಮೈತ್ರಿಕೂಟದ ಹೊಸ ಸರ್ಕಾರದಲ್ಲಿ ಡಿಸಿಎಂ ಹುದ್ದೆ ಕೊಡಲೇಬೇಕು’ ಎಂದು ಬಾಲೆಹೊಸೂರು ಶ್ರೀ ದಿಂಗಾಲೇಶ್ವರ ಸ್ವಾಮಿಗಳು ಒತ್ತಾಯಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿದ ಅವರು, ಶಾಮನೂರ ಶಿವಶಂಕರಪ್ಪನವರು ಕಾಂಗ್ರೆಸ್ ಪಕ್ಷಕ್ಕೆ ನಿಷ್ಠರಾಗಿ ಇರುವುದರೊಂದಿಗೆ ವೀರಶೈವ ಲಿಂಗಾಯತ ಹೆಚ್ಚಿನ ಸಂಖ್ಯೆಯಲ್ಲಿ ಶಾಸಕರಾಗುವಲ್ಲಿ ಶ್ರಮಿಸಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಸರಕಾರದಲ್ಲಿ 20 ಜನ ವೀರಶೈವ ಲಿಂಗಾಯತ ಶಾಸಕರು ಆಯ್ಕೆಯಾಗಿದ್ದು, ಮೈತ್ರಿಕೂಟ ಸರಕಾರದ ರಚನೆಯಲ್ಲಿ ಈ ಶಾಸಕರ ಪಾತ್ರ ಮಹತ್ವದ್ದಾಗಿದೆ. ವೀರಶೈವ ಲಿಂಗಾಯತ ಸಮಾಜಕ್ಕೆ ಉತ್ತಮ ಸಂದೇಶ ಮತ್ತು ಅವಕಾಶ ನೀಡುವ ನಿಟ್ಟಿನಲ್ಲಿ ಅವರಿಗೆ ಡಿಸಿಎಂ ಸ್ಥಾನ ನೀಡಬೇಕು. ಅಲ್ಲದೇ ಮೈತ್ರಿಕೂಟದ ಸರಕಾರದಲ್ಲಿ ಕನಿಷ್ಠ 5 ಜನ ವೀರಶೈವ ಲಿಂಗಾಯತ ಶಾಸಕರಿಗೆ ಸಚಿವ ಸ್ಥಾನ ನೀಡುವ ಮೂಲಕ ಭವಿಷ್ಯದಲ್ಲಿ ಪಕ್ಷದ ಅಸ್ತಿತ್ವ-ಸಂಘಟನೆಗೆ ಮುಂದಾಗಬೇಕು ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ