ವಿಧಾನಸಭೆಯಲ್ಲಿ ಪಕ್ಷಕ್ಕಿಂತ ಸಮುದಾಯದ ಬಲ ಹೆಚ್ಚು 


Team Udayavani, May 22, 2018, 6:35 AM IST

con-bjp-jds-aa.jpg

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾಗಿರುವ 222 ಶಾಸಕರ ಪೈಕಿ 105 ಶಾಸಕರು ಒಕ್ಕಲಿಗ ಹಾಗೂ ಲಿಂಗಾಯಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಚುನಾಯಿತ ಜನಪ್ರತಿನಿಧಿಗಳಲ್ಲಿ ಅತಿದೊಡ್ಡ ಪಾಲು ಹೊಂದಿರುವುದು ಲಿಂಗಾಯತ ಸಮುದಾಯ. ಈ ಸಮುದಾಯದ 62 ಮಂದಿ ಶಾಸಕರಾಗಿದ್ದಾರೆ. ಎರಡನೇ ಅತಿದೊಡ್ಡ ಸಂಖ್ಯೆಯಲ್ಲಿ ಒಕ್ಕಲಿಗರಿದ್ದು, ಒಟ್ಟಾರೆ 45 ಶಾಸಕರು ಚುನಾಯಿತರಾಗಿದ್ದಾರೆ.

ಉಳಿದಂತೆ, ಪರಿಶಿಷ್ಟ ಜಾತಿಯ 28, ಪರಿಶಿಷ್ಟ ಪಂಗಡದ 17, ಕುರುಬ ಸಮುದಾಯದ 12, ರೆಡ್ಡಿ  ಹಾಗೂ ಬ್ರಾಹ್ಮಣರು ತಲಾ 9, ಮುಸ್ಲಿಮರು 7, ಈಡಿಗ ಹಾಗೂ ಬಂಟರು ತಲಾ 5, ಮರಾಠರು 3, ರಜಪೂತ, ಕೊಡವ ಹಾಗೂ ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದ ಇಬ್ಬರು, ಮೊಗವೀರ, ಕ್ರಿಶ್ಚಿಯನ್‌, ನಾಮಧಾರಿ, ಗಾಣಿಗ ಶೆಟ್ಟಿ, ಕೊಂಕಣಿ ಮರಾಠ, ಜೈನ, ಯಾದವ, ಉಪ್ಪಾರ ಪಂಗಡದ ತಲಾ ಒಬ್ಬರು ಆಯ್ಕೆಯಾಗಿದ್ದಾರೆ.

ಪಕ್ಷಾವಾರು ಲೆಕ್ಕ
ಲಿಂಗಾಯತ ಸಮುದಾಯದ ಗರಿಷ್ಠ 39 ಶಾಸಕರನ್ನು ಬಿಜೆಪಿ ಹೊಂದಿದೆ. ಆಡಳಿತರೂಢ ಪಕ್ಷಗಳಾದ ಕಾಂಗ್ರೆಸ್‌ ಮತ್ತು ಜೆಡಿಎಸ್‌ನಲ್ಲಿ ಕ್ರಮವಾಗಿ 18 ಮಂದಿ ಐವರು ಲಿಂಗಾಯತ ಶಾಸಕರಿದ್ದಾರೆ.

ಒಕ್ಕಲಿಗರು ದೊಡ್ಡ ಸಂಖ್ಯೆಯಲ್ಲಿ ಜೆಡಿಎಸ್‌ನಲ್ಲಿದ್ದು, 21 ಮಂದಿ ಆಯ್ಕೆಯಾಗಿದ್ದಾರೆ. ಇದೇ ವೇಳೆ ಕಾಂಗ್ರೆಸ್‌ನಿಂದ 15 ಮತ್ತು ಬಿಜೆಪಿಯಿಂದ 9 ಮಂದಿ ಒಕ್ಕಲಿಗರು ಆಯ್ಕೆಯಾಗಿದ್ದಾರೆ.

ಪರಿಶಿಷ್ಟ ಜಾತಿಯ ಶಾಸಕರು ಬಿಜೆಪಿಯಲ್ಲಿ ಗರಿಷ್ಠ ಸಂಖ್ಯೆಯಲ್ಲಿದ್ದು, 17 ಮಂದಿ ಚುನಾಯಿತರಾಗಿದ್ದಾರೆ. ಕಾಂಗ್ರೆಸ್‌ನಿಂದ 12 ಹಾಗೂ ಜೆಡಿಎಸ್‌ನಿಂದ 6 ಮಂದಿ ಗೆದ್ದಿದ್ದಾರೆ. ಜತೆಗೆ ಬಿಎಸ್‌ಪಿ ಹಾಗೂ ಪಕ್ಷೇತರರು ತಲಾ ಒಬ್ಬರಿದ್ದಾರೆ.  ಪರಿಶಿಷ್ಟ ಪಂಗಡದ ಶಾಸಕರು ಕಾಂಗ್ರೆಸ್‌ನಿಂದ ಗರಿಷ್ಠ 10 ಮಂದಿ ಇದ್ದು, ಬಿಜೆಪಿಯಿಂದ 7 ಮಂದಿ ಗೆಲುವು ಸಾಧಿಸಿದ್ದಾರೆ.

ರೆಡ್ಡಿ ಸಮುದಾಯದ ಬಿಜೆಪಿಯಿಂದ ಗರಿಷ್ಠ ಐವರು, ಕಾಂಗ್ರೆಸ್‌ನಿಂದ ಮೂವರು ಹಾಗೂ ಜೆಡಿಎಸ್‌ನಿಂದ ಒಬ್ಬರು ಗೆದ್ದಿದ್ದಾರೆ. ಕುರುಬ ಸಮುದಾಯದಿಂದ ಕಾಂಗ್ರೆಸ್‌ನಲ್ಲಿ 8 ಮಂದಿ, ಜೆಡಿಎಸ್‌ನಲ್ಲಿ ಇಬ್ಬರು, ಬಿಜೆಪಿ ಹಾಗೂ ಕೆಪಿಜೆಪಿಯಿಂದ ತಲಾ ಒಬ್ಬರು ಜಯ ಪಡೆದಿದ್ದಾರೆ. ಮರಾಠ ಸಮುದಾಯದಿಂದ ಬಿಜೆಪಿ 1 ಹಾಗೂ ಕಾಂಗ್ರೆಸ್‌ನಿಂದ ಇಬ್ಬರು ಗೆದ್ದಿದ್ದಾರೆ. ಮುಸ್ಲಿಂ ಸಮುದಾಯದಿಂದ ಕಾಂಗ್ರೆಸ್‌ನಲ್ಲಿ 7 ಮಂದಿ ಗೆದ್ದಿ ದ್ದಾರೆ. ಬಿಜೆಪಿಯಲ್ಲಿ ಬ್ರಾಹ್ಮಣ ಸಮುದಾಯದ 8, ಬಂಟ ಸಮುದಾಯದ 5, ಈಡಿಗ ಸಮುದಾಯದ ಐವರು, ಇಬ್ಬರು ಕೊಡವರು ಆಯ್ಕೆಯಾಗಿದ್ದರೆ, ಮೊಗವೀರ, ಗೌಡ ಸಾರಸ್ವತ, ನಾಮಧಾರಿ, ಗಾಣಿಗ ಶೆಟ್ಟಿ, ಕೊಂಕಣಿ ಮರಾಠ, ಜೈನ, ಯಾದವ ಸಮುದಾಯದಿಂದ ತಲಾ ಒಬ್ಬರು ಆಯ್ಕೆಯಾಗಿದ್ದಾರೆ. ಅದೇ ರೀತಿ ಕಾಂಗ್ರೆಸ್‌ನಿಂದ ರಜಪೂತ ಸಮುದಾಯದಿಂದ ಇಬ್ಬರು, ಕ್ರಿಶ್ಚಿಯನ್‌ ಸಮುದಾಯ ಮತ್ತು ಉಪ್ಪಾರ, ಬ್ರಾಹ್ಮಣ, ಗೌಡ ಸಾರಸ್ವತ ಬ್ರಾಹ್ಮಣ ಸಮುದಾಯದಿಂದ ತಲಾ ಒಬ್ಬರು ಗೆದ್ದು ಬಂದಿದ್ದಾರೆ.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.