HDK ಪ್ರಮಾಣವಚನ; ನಾಳೆ ಬಿಜೆಪಿಯಿಂದ ರಾಜ್ಯಾದ್ಯಂತ ಕರಾಳ ದಿನಾಚರಣೆ
Team Udayavani, May 22, 2018, 4:26 PM IST
ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಮಾರಂಭಕ್ಕೆ ಬಿಜೆಪಿ ಶಾಸಕರು ಗೈರು ಹಾಜರಾಗಲು ನಿರ್ಧರಿಸಿದ ಬೆನ್ನಲ್ಲೇ ನಾಳೆ ರಾಜ್ಯಾದ್ಯಂತ ಕರಾಳ ದಿನ ಆಚರಣೆಗೆ ಬಿಜೆಪಿ ನಿರ್ಧರಿಸಿದೆ.
ನಾಳೆ ರಾಜ್ಯಾದ್ಯಂತ ಬಿಜೆಪಿ ಕರಾಳ ದಿನಾಚರಣೆ ಆಚರಿಸಲಿದ್ದು, ಬೆಂಗಳೂರಿನಲ್ಲಿ ಬಿಎಸ್ ಯಡಿಯೂರಪ್ಪ ಕರಾಳ ದಿನಾಚರಣೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಬುಧವಾರ ಸಂಜೆ 4.30ಕ್ಕೆ ಎಚ್.ಡಿ.ಕುಮಾರಸ್ವಾಮಿ ವಿಧಾನಸೌಧದ ಮುಂದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಕಲ ಸಿದ್ಧತೆ ನಡೆದಿದೆ.