ಇಂದು ಕುಮಾರ ಪದಗ್ರಹಣ ಪರಮೇಶ್ವರ್‌ ಕೂಡ ಪ್ರಮಾಣ


Team Udayavani, May 23, 2018, 6:00 AM IST

52.jpg

ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿ ಯಾಗಿ ಎಚ್‌.ಡಿ. ಕುಮಾರಸ್ವಾಮಿ ಬುಧವಾರ ಅಧಿಕಾರ ಸ್ವೀಕರಿಸಲಿದ್ದಾರೆ. ವಿಧಾನಸೌಧದ ಮುಂಭಾಗ ಸಂಜೆ 4.30ಕ್ಕೆ ರಾಜ್ಯಪಾಲ ವಜೂಭಾ ವಾಲಾ ಅವರು ಕುಮಾರಸ್ವಾಮಿ ಅವರಿಗೆ ಅಧಿಕಾರದ ಪ್ರಮಾಣವಚನ ಬೋಧಿಸಲಿದ್ದಾರೆ. ಇವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಾ| ಜಿ.ಪರಮೇಶ್ವರ್‌ ಅವರು ಕಾಂಗ್ರೆಸ್‌ ವತಿಯಿಂದ ಪ್ರಮಾಣ ವಚನ ಸ್ವೀಕರಿಸಲಿದ್ದು, ಅವರು ಉಪ ಮುಖ್ಯಮಂತ್ರಿಯಾಗಲಿದ್ದಾರೆ.

ಇದರೊಂದಿಗೆ 1 ವಾರದ ಅವಧಿಯಲ್ಲಿ ರಾಜ್ಯ 2ನೇ ಮುಖ್ಯಮಂತ್ರಿಯನ್ನು ಕಾಣುವಂತಾಗಿದೆ. 2006ರಲ್ಲಿ ಬಿಜೆಪಿ- ಜೆಡಿಎಸ್‌ ಮೈತ್ರಿ ಸರಕಾರದಲ್ಲಿ 20 ತಿಂಗಳು ಸಿಎಂ ಆಗಿದ್ದ ಕುಮಾರಸ್ವಾಮಿ ಈಗ ಎರಡನೇ ಬಾರಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಲಿದ್ದಾರೆ.

ಮೇ 17ರಂದು ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದ ಬಿಜೆಪಿಯ ಯಡಿಯೂರಪ್ಪ ಅವರು ಬಹುಮತದ ಕೊರತೆಯಿಂದ ಮೇ 19ರಂದು ರಾಜೀನಾಮೆ ನೀಡಿದ್ದರು. ಅಂದೇ ರಾಜ್ಯಪಾಲರು ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರ ರಚಿಸುವಂತೆ ಕುಮಾರಸ್ವಾಮಿ ಅವರಿಗೆ ಆಹ್ವಾನ ನೀಡಿದ್ದು, ಅದರಂತೆ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಾರೆ. ಕುಮಾರಸ್ವಾಮಿ ಮಾತ್ರ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ಹೇಳಲಾಗುತ್ತಿದ್ದರೂ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರೂ ಆಗಮಿಸುತ್ತಿರುವುದರಿಂದ ಆ ಪಕ್ಷದಿಂದಲೂ ಒಬ್ಬರು ಪ್ರಮಾಣವಚನ ಸ್ವೀಕರಿಸಬೇಕು ಎಂದು ನಿರ್ಧರಿಸಿ ಪರಮೇಶ್ವರ್‌ ಹೆಸರನ್ನು ಅಂತಿಮಗೊಳಿಸಲಾಯಿತು ಎಂದು ಮೂಲಗಳು ಹೇಳಿವೆ.

ಬುಧವಾರದ ಕಾರ್ಯಕ್ರಮದ ಕುರಿತಂತೆ ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಗಳವಾರ ಸಂಜೆ ಕಾಂಗ್ರೆಸ್‌ ಮುಖಂಡರಾದ ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಡಾ|ಜಿ.ಪರಮೇಶ್ವರ್‌, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆಯ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತಿತರರೊಂದಿಗೆ ಸಭೆ ನಡೆಸಿದರು. ಅನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಮಾಣವಚನ ಸ್ವೀಕಾರ ಸಮಾರಂಭದ ಬಗ್ಗೆ ಮಾತ್ರ ಸಭೆಯಲ್ಲಿ ಚರ್ಚಿಸಲಾಗಿದೆ. ನಾನು ಮತ್ತು ಪರಮೇಶ್ವರ್‌ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದೇವೆ. ಸಚಿವ ಸಂಪುಟ ಬಗ್ಗೆ ಬಳಿಕ ಚರ್ಚಿಸಲಾಗುವುದು ಎಂದು ಹೇಳಿದರು. ಈ ಮಧ್ಯೆ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಬಿಜೆಪಿಯ ಯಾವುದೇ ಶಾಸಕರು ಭಾಗವಹಿಸದಂತೆ ಪಕ್ಷದ ವರಿಷ್ಠರು ಸೂಚಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಹಂಗಾಮಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈ ಸಂದೇಶವನ್ನು ಪಕ್ಷದ ಶಾಸಕರಿಗೆ ರವಾನೆ ಮಾಡಿದ್ದಾರೆ. ಅಲ್ಲದೆ, ರಾಜ್ಯಾದ್ಯಂತ ಬಿಜೆಪಿ ಜನವಿರೋಧಿ ದಿನ ಆಚರಿಸುತ್ತಿದೆ.

ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಎಚ್‌ಡಿಕೆ
ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಎಚ್‌. ಡಿ. ಕುಮಾರಸ್ವಾಮಿ ಅವರು ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ. ಬೆಳಗ್ಗೆ ಮೈಸೂರಿಗೆ ತೆರಳಲಿರುವ ಕುಮಾರಸ್ವಾಮಿ, ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯುತ್ತಾರೆ. ಬಳಿಕ ರಾಮನಗರಕ್ಕೆ ಬಂದು ಅಲ್ಲಿರುವ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಬೆಂಗಳೂರಿಗೆ ವಾಪಸಾಗಲಿದ್ದಾರೆ.

ಲಕ್ಷಕ್ಕೂ ಹೆಚ್ಚು  ಜನ  ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ವಿಧಾನಸೌಧದ ಮುಂಭಾಗ ಒಂದು ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆಯಿದೆ. ವೇದಿಕೆಯ ಅಕ್ಕಪಕ್ಕದಲ್ಲಿ ಗಣ್ಯರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ವಿಧಾನಸೌಧದ ಮುಭಾಗದ ರಸ್ತೆಯಲ್ಲಿ ಮಧ್ಯಾಹ್ನ 2 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ಇಂಡಿಯನ್‌ ಎಕ್ಸ್‌ ಪ್ರಸ್‌ ವೃತ್ತದಿಂದ ಕೆ.ಆರ್‌.ವೃತ್ತದವರೆಗೆ ಮತ್ತು ಲಾಲ್‌ಬಾಗ್‌ ಗೇಟ್‌ಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ರಮೇಶ್‌ಕುಮಾರ್‌ ಸ್ಪೀಕರ್‌
ವಿಧಾನಸಭೆ ಅಧ್ಯಕ್ಷರಾಗಿ ಕಾಂಗ್ರೆಸ್‌ನ ಹಿರಿಯ ಸದಸ್ಯ ಕೆ.ಆರ್‌. ರಮೇಶ್‌ಕುಮಾರ್‌ ಅವರನ್ನು ಆಯ್ಕೆ ಮಾಡಲು ತೀರ್ಮಾನಿಸಲಾಗಿದೆ. ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌, ವಿಧಾನಸಭೆ ಅಧ್ಯಕ್ಷರಾಗಿ ರಮೇಶ್‌ಕುಮಾರ್‌ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ. ಉಪಾಧ್ಯಕ್ಷ ಹುದ್ದೆಯನ್ನು ಜೆಡಿಎಸ್‌ಗೆ ಬಿಟ್ಟುಕೊಡಲಾಗಿದೆ. ಗುರುವಾರ ಬಹುಮತ ಸಾಬೀತಿಗೆ ಮುನ್ನ ಸ್ಪೀಕರ್‌ ನೇಮಕ ಪ್ರಕ್ರಿಯೆ ನಡೆಯಲಿದೆ.

ನಾಳೆ ಬಹುಮತ ಸಾಬೀತು
ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಎಚ್‌.ಡಿ.ಕುಮಾರಸ್ವಾಮಿ ಅವರು ಗುರುವಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿದ್ದಾರೆ. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ 24 ಗಂಟೆಗಳಲ್ಲಿ ಪ್ರಮಾಣವಚನ ಸ್ವೀಕರಿಸಲಾಗುವುದು ಎಂದು ಕುಮಾರಸ್ವಾಮಿ ಮೊದಲೇ ಹೇಳಿದ್ದರು. ಅದರಂತೆ ಗುರುವಾರ ಬಹುಮತ ಸಾಬೀತುಪಡಿಸಲು ಕಾಂಗ್ರೆಸ್‌ ನಾಯಕರು ಮತ್ತು ಕುಮಾರಸ್ವಾಮಿ ಮಧ್ಯೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಸೋನಿಯಾ, ರಾಹುಲ್‌ ಸೇರಿ ಹಲವು ಗಣ್ಯರು
ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿಯಾಗಿ ಪರಮೇಶ್ವರ್‌ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಹಿತ ನಾಲ್ವರು ಮುಖ್ಯಮಂತ್ರಿಗಳು ಹಾಗೂ ಇತರ ರಾಜಕೀಯ ನಾಯಕರು ಪಾಲ್ಗೊಳ್ಳಲಿದ್ದಾರೆ.

ಸೋನಿಯಾ, ರಾಹುಲ್‌ ಅವರಲ್ಲದೆ, ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌, ಪಶ್ಚಿಮ ಬಂಗಾಲದ ಸಿಎಂ ಮಮತಾ ಬ್ಯಾನರ್ಜಿ, ಕೇರಳ ಸಿಎಂ ಪಿಣರಾಯಿ ವಿಜಯನ್‌, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು, ಬಿಎಸ್‌ಪಿ ನಾಯಕಿ ಮಾಯಾವತಿ, ಉತ್ತರ ಪ್ರದೇಶದ ಮಾಜಿ ಸಿಎಂ ಅಖೀಲೇಶ್‌ ಯಾದವ್‌, ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್‌ ಪುತ್ರ ತೇಜಸ್ವಿ ಯಾದವ್‌, ಕೇಂದ್ರದ ಮಾಜಿ ಸಚಿವ ಅಜಿತ್‌ ಸಿಂಗ್‌, ನಟ ಕಮಲ್‌ಹಾಸನ್‌ ಆಗಮಿಸುತ್ತಿದ್ದಾರೆ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.