ನೋವಿನಿಂದ ಅಧಿಕಾರ ಸ್ವೀಕಾರ, ಅಚ್ಚರಿಯ ರಾಜಕೀಯ ಬೆಳವಣಿಗೆ; HDK
Team Udayavani, May 23, 2018, 11:31 AM IST
ಮೈಸೂರು:ಸಾಲಮನ್ನಾ ವಿಚಾರದಲ್ಲಿ ನಾನು ಯೂಟರ್ನ್ ತೆಗೆದುಕೊಂಡಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ನನ್ನ ಕಲ್ಪನೆಗಳ ಜತೆ ಯಾವುದೇ ರಾಜೀ ಆಗಲ್ಲ. ಈ ಬಗ್ಗೆ ಯಾವುದೇ ಅನುಮಾನ ಇಟ್ಟುಕೊಳ್ಳಬೇಡಿ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.
ಬುಧವಾರ ಪತ್ನಿ ಅನಿತಾಕುಮಾರಸ್ವಾಮಿ ಜತೆ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದರು.
ಮನಸ್ಸಿನಲ್ಲಿ ಒಂದಷ್ಟು ನೋವು ತುಂಬಿಕೊಂಡೇ ಅಧಿಕಾರ ಸ್ವೀಕರಿಸುತ್ತಿದ್ದೇನೆ. ಜನರ ಸಂಪೂರ್ಣ ಆಶೀರ್ವಾದದೊಂದಿಗೆ ಮುಖ್ಯಮಂತ್ರಿ ಆಗಬೇಕು ಎಂದು ನಿರೀಕ್ಷಿಸಿದ್ದೆ. ಆದರೆ ಜನರು ಅದಕ್ಕೆ ಸಹಕಾರ ನೀಡಲಿಲ್ಲ. ಯಾರೂ ಊಹಿಸದ ಅಚ್ಚರಿಯ ರಾಜಕೀಯ ಬೆಳವಣಿಗೆ ಇದು ಎಂದರು.
ನಾನೀಗ ಸಮ್ಮಿಶ್ರ ಸರ್ಕಾರದಲ್ಲಿ ಇದ್ದೇನೆ. ಕಾಂಗ್ರೆಸ್ ಪಕ್ಷ ಕೂಡಾ ಪ್ರಣಾಳಿಕೆಯಲ್ಲಿ ಹಲವು ಭರವಸೆ ಕೊಟ್ಟಿದೆ. ಹೀಗಾಗಿ ಕಾಂಗ್ರೆಸ್ ಜತೆ ಚರ್ಚಿಸಿ ನಮ್ಮ ಭರವಸೆಗಳ ಈಡೇರಿಸಬೇಕಾಗುತ್ತದೆ. ಹಾಗೂ ಆರ್ಥಿಕ ಪರಿಸ್ಥಿತಿಗೆ ಧಕ್ಕೆಯಾಗದಂತೆ ಸಾಲಮನ್ನಾ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ರಾಜ್ಯದಲ್ಲಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇತ್ತು ಆದರೆ ಈ ರೀತಿ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇರಲಿಲ್ಲ ಎಂದು ಹೇಳಿದರು.
ಜಾತಿಯ ವ್ಯಾಮೋಹ ಬಿಡಿ ಎಂದು ಹೇಳಿರುವ ಕುಮಾರಸ್ವಾಮಿ, ನಾನು ಒಂದು ವರ್ಗಕ್ಕೆ ಸೀಮಿತವಾದ ಮುಖ್ಯಮಂತ್ರಿ ಆಗಿರಲ್ಲ. ರಾಜ್ಯದ ಆರೂವರೆ ಕೋಟಿ ಜನರ ಜನಸೇವಕ ನಾನು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ