ಡಿಕೆಶಿ ಸಮಾಧಾನ ಮಾಡಿದ ಸೋನಿಯಾ


Team Udayavani, May 24, 2018, 7:00 AM IST

sonia.jpg

ಬೆಂಗಳೂರು: ಹೈಕಮಾಂಡ್‌ ಮುಂದೆ ಉಪ ಮುಖ್ಯಮಂತ್ರಿ ಸ್ಥಾನದ ಬೇಡಿಕೆಯಿಟ್ಟು ಅವಕಾಶ ಸಿಗದೆ ಬೇಸರಗೊಂಡಿದ್ದ ಡಿ.ಕೆ.  ಶಿವಕುಮಾರ್‌ ಅವರನ್ನು ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಸಮಾಧಾನ ಮಾಡಿದ್ದಾರೆ.

ದೆಹಲಿಯಿಂದ ನೇರವಾಗಿ ಕಾಂಗ್ರೆಸ್‌ ಶಾಸಕರು ವಾಸ್ತವ್ಯ ಹೂಡಿದ್ದ ಖಾಸಗಿ ಹೊಟೆಲ್‌ಗೆ ತೆರಳಿದ ರಾಹುಲ್‌ ಗಾಂಧಿ ಮತ್ತು ಸೋನಿಯಾ ಗಾಂಧಿ ಶಾಸಕರಿಗೆ ಒಗ್ಗಟ್ಟಿನ ಮಂತ್ರ ಹೇಳಿ ನಂತರ ಮುನಿಸಿಕೊಂಡಿರುವ ಡಿ.ಕೆ. ಶಿವಕುಮಾರ್‌ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದರು.

ಪಕ್ಷದ ಸಂಘಟನೆಗೆ ನೀವು ನೀಡಿರುವ ಕೊಡುಗೆ ಶ್ಲಾಘನೀಯ. ಪಕ್ಷ ನಿಮಗೆ ಮುಂದೆ ಸೂಕ್ತ ಸ್ಥಾನ ಮಾ® ನೀಡಲಿದೆ ಎಂದು ಹೇಳಿದರು ಂದು ಹೇಳಲಾಗಿದೆ.  ಮೂಲಗಳ ಪ್ರಕಾರ ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವ ಭರವಸೆಯೂ ದೊರೆತಿದೆ ಎಂದು ಹೇಳಲಾಗಿದೆ.

ಈಮಧ್ಯೆ, ಡಿ.ಕೆ.ಶಿವಕುಮಾರ್‌ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡದ ಹಿನ್ನೆಲೆಯಲ್ಲಿ ಅವರ ಸಹೋದರ ಸಂಸದ ಡಿ.ಕೆ. ಸುರೇಶ್‌ ಪಕ್ಷದ ಹೈ ಕಮಾಂಡ್‌ ಮೇಲೆ ಮುನಿಸಿಕೊಂಡು ಮಂಗಳವಾರ ರಾತ್ರಿಯೇ ಕಾಂಗ್ರೆಸ್‌ ಶಾಸಕರು ವಾಸವಿರುವ ಖಾಸಗಿ ಹೊಟೆಲ್‌ನಿಂದ ತೆರಳಿದ್ದರು.ಚುನಾವಣೆ ಫ‌ಲಿತಾಂಶ ಬಂದಾಗಿನಿಂದಲೂ ಶಾಸಕರನ್ನು ಒಂದೆಡೆ ಕೂಡಿಸಿಟ್ಟುಕೊಳ್ಳುವ ಜವಾಬ್ದಾರಿಯನ್ನು  ಪಕ್ಷದ ಸೂಚನೆ ಮೇರೆಗೆ ನಿಭಾಯಿಸಿದ್ದೇವೆ. ಆದರೆ, ಉಪ ಮುಖ್ಯಮಂತ್ರಿ ಹುದ್ದೆ ಪರಮೇಶ್ವರ್‌ಗೆ ನೀಡಿ, ಡಿ.ಕೆ.ಶಿವಕುಮಾರನ್ನು ಪಕ್ಷ ಕಡೆಗಣಿಸಿದೆ ಎಂದು ಹೊಟೆಲ್‌ನಲ್ಲಿ ಶಾಸಕರ ಬಳಿಯೆ ಡಿ.ಕೆ. ಸುರೇಶ್‌ ಅಸಮಾಧಾನ ಹೊರ ಹಾಕಿದ್ದರು. ಕೆಲಸ ಮಾಡಲು ಮಾತ್ರ ನಾವು ಬೇಕು. ಅಧಿಕಾರಕ್ಕೆ ಮಾತ್ರ ಬೇರೆಯವರು ಬೇಕು. ತಮ್ಮದೊಂದು ಕ್ಷೇತ್ರ ಗೆದ್ದುಕೊಂಡು ಬಂದವರು ಉಪ ಮುಖ್ಯಮಂತ್ರಿಯಾಗುತ್ತಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷದ ಅನೇಕ ಶಾಸಕರ ಗೆಲುವಿಗೆ ಕಾರಣರಾದವರಿಗೆ ಯಾವುದೇ ಹುದ್ದೆಯಿಲ್ಲ ಎಂದಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಖುದ್ದು ಸೋನಿಯಾಗಾಂಧಿ-ರಾಹುಲ್‌ಗಾಂಧಿ ಹೋಟೆಲ್‌ಗೆ ಬಂದು ಶಾಸಕರಿಗೆ ಅಭಿನಂದನೆ ಸಲ್ಲಿಸಿದ ನಂತರ ಡಿ.ಕೆ.ಶಿವಕುಮಾರ್‌ ಅವರನ್ನು ಸಮಾಧಾನಪಡಿಸಿದರು ಎಂದು ಹೇಳಲಾಗಿದೆ.

ನಾನು  ಉಪ ಮುಖ್ಯಮಂತ್ರಿ ನೀಡುವಂತೆ ಯಾರಿಗೂ ಅರ್ಜಿ ಹಾಕಿಲ್ಲ. ನನಗೆ ಅಗತ್ಯವೂ ಇಲ್ಲ. ಪಕ್ಷ ಯಾವ ಜವಾಬ್ದಾರಿ ನೀಡುತ್ತದೆಯೋ ಅದನ್ನು ನಾನು ನಿಭಾಯಿಸುತ್ತೇನೆ. ಪಕ್ಷದ ನಾಯಕರಲ್ಲಿ ಯಾವುದೇ ಗೊಂದಲ ಇಲ್ಲ. ಇಬ್ಬರು ನಾಯಕರ ಪ್ರಮಾಣ ವಚನಕ್ಕೆ ಅವಕಾಶ ನೀಡಿದ್ದಾರೆ. ಆ ಪ್ರಕಾರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ. ಇವತ್ತು ಇಡೀ ರಾಜ್ಯವೇ ಸಂಭ್ರಮಿಸುತ್ತಿದೆ. ಹುದ್ದೆಯ ಬಗ್ಗೆ ಯಾವುದೇ ಗೊಂದಲ ಸೃಷ್ಠಿಸುವ ಅಗತ್ಯವಿಲ್ಲ. ನಾನು ಕಳೆದ ಹದಿನೈದು ದಿನಗಳಿಂದ ಮನೆಗೆ ಹೋಗಿರಲಿಲ್ಲ. ಅದಕ್ಕೆ ಹೆಂಡತಿ ಮಕ್ಕಳನ್ನು ನೋಡಲು ಮನೆಗೆ ಹೋಗಿದ್ದೆ.
– ಡಿ.ಕೆ.ಶಿವಕುಮಾರ್‌

ಟಾಪ್ ನ್ಯೂಸ್

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Kadaba ರೆಂಜಿಲಾಡಿ: ಎಂಡೋ ಪೀಡಿತ ಯುವಕ ಸಾವು

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

Sullia: ಕೆಂಪು ಕಲ್ಲು ಸಾಗಾಟ ಲಾರಿ ಪಲ್ಟಿ

1-wqewqeqwe

Prajwal ಪೆನ್ ಡ್ರೈವ್ ಬಿಡುಗಡೆ ಮಾಡಿದ್ದ ದೇವರಾಜೇ ಗೌಡ ಅರೆಸ್ಟ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.