ಸಿಬಿಎಸ್‌ಇ ಫ‌ಲಿತಾಂಶ ವಿಳಂಬ: ವಿದ್ಯಾರ್ಥಿಗಳಲ್ಲಿ ಆತಂಕ


Team Udayavani, May 25, 2018, 6:45 AM IST

cbse.jpg

ಬೆಂಗಳೂರು: ಕೇಂದ್ರೀಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್‌ಇ) 12ನೇ ತರಗತಿ ಫ‌ಲಿತಾಂಶ ವಿಳಂಬದಿಂದ ಕಂಗೆಟ್ಟಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು, ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫ‌ಲಿತಾಂಶವನ್ನು ಯಾವಾಗ ಪ್ರಕಟಿಸಬೇಕೆಂಬ ಜಿಜ್ಞಾಸೆಗೆ ಒಳಗಾಗಿದ್ದಾರೆ.

ಎಂಜಿನಿಯರಿಂಗ್‌ ಸೇರಿ ವಿವಿಧ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟಿಗೆ ಪ್ರಾಧಿಕಾರವು ಏ.18ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿತ್ತು. ಸಿಇಟಿ ಬರೆದ ಎಲ್ಲ ಅಭ್ಯರ್ಥಿಗಳ ಉತ್ತರ ಪತ್ರಿಕೆಯ ಮೌಲ್ಯಮಾಪನವೂ ಪೂರ್ಣಗೊಂಡಿದೆ. ಆದರೆ, ಸಿಬಿಎಸ್‌ಇ 12ನೇ ತರಗತಿ ಫ‌ಲಿತಾಂಶ ಪ್ರಕಟವಾಗದೇ ಇರುವುದರಿಂದ ಸಿಇಟಿ ಫ‌ಲಿತಾಂಶವೂ ವಿಳಂಬವಾಗುತ್ತಿದೆ.

ಸಿಬಿಎಸ್‌ಇ ಶಾಲೆಗಳಲ್ಲಿ 12ನೇ ತರಗತಿ ಓದಿದ ಸುಮಾರು 5 ಸಾವಿರ ವಿದ್ಯಾರ್ಥಿಗಳು ಈ ಬಾರಿ ಸರ್ಕಾರಿ ಕೋಟಾದ ಎಂಜಿನಿಯರಿಂಗ್‌ ಮೊದಲಾದ ವೃತ್ತಿಪರ ಕೋರ್ಸ್‌ನ ಸೀಟಿಗೆ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಆ ವಿದ್ಯಾರ್ಥಿಗಳ ಫ‌ಲಿತಾಂಶ ಹೊರಬೀಳದೆ ಪ್ರಾಧಿಕಾರಕ್ಕೆ ರ್‍ಯಾಂಕ್‌ ಪ್ರಕಟಿಸಲು ಸಾಧ್ಯವಾಗುತ್ತಿಲ್ಲ.

ಸಿಬಿಎಸ್‌ಇ ಫ‌ಲಿತಾಂಶ ಯಾವಾಗ ಪ್ರಕಟವಾಗುತ್ತದೆ ಎಂಬುದರ ಸ್ಪಷ್ಟ ಮಾಹಿತಿ ಅಧಿಕಾರಿಗಳಿಗೆ ಸಿಕ್ಕಿಲ್ಲ. ಮೇ 30ಕ್ಕೆ ಪ್ರಕಟವಾಗುವ ನಿರೀಕ್ಷೆಯಿದೆ. ಹೀಗಾಗಿ, ಜೂನ್‌ 1 ಅಥವಾ 2ರೊಳಗೆ ಸಿಇಟಿ ಫ‌ಲಿತಾಂಶ ಪ್ರಕಟಿಸಬೇಕೆಂಬ ನಿರ್ಧಾರಕ್ಕೆ ಪ್ರಾಧಿಕಾರದ ಅಧಿಕಾರಿಗಳು ಬಂದಿದ್ದಾರೆ.

ಒಂದು ವೇಳೆ, ಮೇ 30ಕ್ಕೆ ಸಿಬಿಎಸ್‌ಇ ಫ‌ಲಿತಾಂಶ ಪ್ರಕಟವಾಗದಿದ್ದರೆ ಸಿಬಿಎಸ್‌ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ರ್‍ಯಾಂಕ್‌ ಘೋಷಣೆ ಮಾಡಲಾಗುತ್ತದೆ. ಸಿಇಟಿ ರ್‍ಯಾಂಕ್‌ ಪಡೆದ ವಿದ್ಯಾರ್ಥಿಗಳು ಮತ್ತು ಸಿಬಿಎಸ್‌ಇ ವಿದ್ಯಾರ್ಥಿಗಳೆಂಬ ಎರಡು ವಿಭಾಗವಾಗಿ ರ್‍ಯಾಂಕ್‌ ಘೋಷಣೆ ಮಾಡಲಾಗುತ್ತದೆ.
ಪಿಯು ಫ‌ಲಿತಾಂಶ ಬಂದು 20ಕ್ಕೂ ಹೆಚ್ಚು ದಿನ ಕಳೆದಿದೆ. ಲಕ್ಷಾಂತರ ವಿದ್ಯಾರ್ಥಿಗಳು ಸಿಇಟಿ ಫ‌ಲಿತಾಂಶಕ್ಕಾಗಿ ಕಾದು ಕುಳಿತಿದ್ದಾರೆ. ಪಿಯು ನಂತರ ಬಿ.ಎ, ಬಿ.ಕಾಂ, ಬಿಬಿಎಂ, ಬಿಸಿಎ ಸೇರಿ ವಿವಿಧ ಪದವಿ ಕೋರ್ಸ್‌ ಸೇರುವ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಯಿಲ್ಲ. ಆದರೆ, ಎಂಜಿನಿಯರಿಂಗ್‌ ಸೇರಿ ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟು ಪಡೆದು ಕಾಲೇಜಿಗೆ ಸೇರಿಕೊಳ್ಳಬೇಕಾದ ವಿದ್ಯಾರ್ಥಿಗಳಿಗೆ ಸಿಇಟಿ ಕಡ್ಡಾಯ. ಹೀಗಾಗಿ ಅಂತಹ ವಿದ್ಯಾರ್ಥಿಗಳು ಅನಿವಾರ್ಯವಾಗಿ ಫ‌ಲಿತಾಂಶಕ್ಕೆ ಕಾಯಲೇಬೇಕು.

ನೀಟ್‌ ಫ‌ಲಿತಾಂಶವೂ ಅಗತ್ಯ:
ಸಿಇಟಿ ಬರೆದಿರುವ ಬಹುತೇಕ ವಿದ್ಯಾರ್ಥಿಗಳು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್‌) ಬರೆದಿದ್ದಾರೆ. ಕೆಲ ವಿದ್ಯಾರ್ಥಿಗಳು ನೀಟ್‌ ಮಾತ್ರ ಬರೆದಿದ್ದಾರೆ. ಮತ್ತೆ ಕೆಲವರು ಸಿಇಟಿಯನ್ನೂ ಬರೆದಿದ್ದಾರೆ. ಎರಡೂ ಪರೀಕ್ಷೆ ಬರೆದವರ ಅನುಕೂಲಕ್ಕಾಗಿ ನೀಟ್‌ ಫ‌ಲಿತಾಂಶವನ್ನು ಗಮನದಲ್ಲಿಟ್ಟುಕೊಂಡು ಸಿಟಿಇ ಫ‌ಲಿತಾಂಶ ಪ್ರಕಟಿಸಬೇಕಾಗುತ್ತದೆ.

ಅಭ್ಯರ್ಥಿಗಳಿಗೆ ಸೂಚನೆ:
ಸಿಬಿಎಸ್‌ಇ ಫ‌ಲಿತಾಂಶ ಪ್ರಕಟವಾದ ತಕ್ಷಣವೇ ಫ‌ಲಿತಾಂಶದ ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡುವಂತೆ ಸಿಇಟಿ ಬರೆದಿರುವ ವಿದ್ಯಾರ್ಥಿಗಳಿಗೆ ಪ್ರಾಧಿಕಾರದಿಂದ ಸೂಚಿಸಲಾಗಿದೆ. ವಿದ್ಯಾರ್ಥಿಗಳು ಫ‌ಲಿತಾಂಶದ ಮಾಹಿತಿಯನ್ನು ಅಪ್‌ಲೋಡ್‌ ಮಾಡಿದ ನಂತರವೇ ಫ‌ಲಿತಾಂಶ ಪ್ರಕಟಿಸಲು ಸಾಧ್ಯ. ಇಲ್ಲವಾದರೆ, ಸಿಬಿಎಸ್‌ಇ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಬೇರೆ ವಿದ್ಯಾರ್ಥಿಗಳ ಫ‌ಲಿತಾಂಶ ಮಾತ್ರ ಹೊರಬೀಳಲಿದೆ.

ಸಿಬಿಎಸ್‌ಇ ಫ‌ಲಿತಾಂಶ ಇನ್ನೂ ಹೊರಬೀಳದೆ ಇರುವುದರಿಂದ ತಕ್ಷಣ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಈ ಮಾಸಾಂತ್ಯದವರೆಗೂ ಕಾಯುತ್ತೇವೆ. ಅಷ್ಟರೊಳಗೆ ಸಿಬಿಎಸ್‌ಇ ಫ‌ಲಿತಾಂಶ ಪ್ರಕಟವಾಗದೆ ಇದ್ದರೆ ಜೂನ್‌ 1 ಅಥವಾ 2ಕ್ಕೆ ಸಿಇಟಿ ಫ‌ಲಿತಾಂಶ ಪ್ರಕಟಿಸುತ್ತೇವೆ.
– ಗಂಗಾಧರಯ್ಯ, ಆಡಳಿತಾಧಿಕಾರಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.