ರಾಜ್ಯ ವಾಣಿಜ್ಯ ತೆರಿಗೆ ಆದಾಯದಲ್ಲಿ ಶೇ.13ರಷ್ಟು ಹೆಚ್ಚಳ


Team Udayavani, May 29, 2018, 6:15 AM IST

gst-state.jpg

ಬೆಂಗಳೂರು: ದೇಶಾದ್ಯಂತ ಜುಲೈ 1ರಿಂದ ಜಿಎಸ್‌ಟಿ ಜಾರಿ ನಂತರ ತೆರಿಗೆ ಆದಾಯ ಇಳಿಕೆಯಾಗುವ ಆತಂಕದ ಹೊರತಾಗಿಯೂ ರಾಜ್ಯ ಸರ್ಕಾರದ ವಾಣಿಜ್ಯ ತೆರಿಗೆ ಆದಾಯ ಸಂಗ್ರಹದಲ್ಲಿ ಶೇ.13ರಷ್ಟು ಏರಿಕೆ ಕಂಡುಬಂದಿದೆ.

ರಾಜ್ಯ ಜಿಎಸ್‌ಟಿ ತೆರಿಗೆ ಆದಾಯದ ಜತೆಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರ ಮೊತ್ತ ಹಾಗೂ ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ತೈಲ ಉತ್ಪನ್ನಗಳ ಮೇಲಿನ ಮಾರಾಟ ತೆರಿಗೆ ಸಂಗ್ರಹಣೆಯಿಂದ ಹಿಂದಿನ ವರ್ಷಕ್ಕೆ ಹೋಲಿಸಿದರೆ 2017-18ನೇ ಸಾಲಿನಲ್ಲಿ ತೆರಿಗೆ ಸಂಗ್ರಹ ಪ್ರಮಾಣ ಉತ್ತಮವಾಗಿದೆ. ಜಿಎಸ್‌ಟಿ ಜಾರಿ ನಂತರವೂ ತೆರಿಗೆ ಆದಾಯವು ನಿರೀಕ್ಷಿತ ಶೇ.9ಕ್ಕಿಂತ ಶೇ.13ರಷ್ಟು ಹೆಚ್ಚಳವಾಗಿರುವುದು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಲ್ಲಿ ಸಂತಸ ಮೂಡಿಸಿದೆ.

ಹಿಂದೆ ಜಾರಿಯಲ್ಲಿದ್ದ ಮೌಲ್ಯವರ್ಧಿತ ತೆರಿಗೆ ಪದ್ಧತಿಯಲ್ಲಿ (ವ್ಯಾಟ್‌) ವಾಣಿಜ್ಯ ತೆರಿಗೆ ಇಲಾಖೆಗೆ ಉತ್ತಮ ತೆರಿಗೆ ಸಂಗ್ರಹವಾಗುತ್ತಿತ್ತು. ಪ್ರತಿ ತಿಂಗಳು ಸರಾಸರಿ 4,000 ಕೋಟಿ ರೂ. ನಿಂದ 4,200 ಕೋಟಿ ರೂ.ವರೆಗೆ ತೆರಿಗೆ ಸಂಗ್ರಹವಾಗುತ್ತಿತ್ತು. ಈ ನಡುವೆ ದೇಶಾದ್ಯಂತ ನೂತನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಜುಲೈ 1ರಿಂದ ಜಾರಿಯಾದಾಗ ವ್ಯಾಟ್‌ ಪದ್ಧತಿ ರದ್ಧಾಗಿ ಜಿಎಸ್‌ಟಿ ಅನುಷ್ಠಾನಕ್ಕೆ ಬಂದಿತು. ಆಗ ಸಹಜವಾಗಿಯೇ ತೆರಿಗೆ ಸಂಗ್ರಹದಲ್ಲಿ ಏರುಪೇರಾಗುವ ಆತಂಕ ಎದುರಾಗಿತ್ತು.

ತೆರಿಗೆ ಸಂಗ್ರಹ ಉತ್ತಮ
ವ್ಯಾಟ್‌ ಪದ್ಧತಿಯಡಿ ತೆರಿಗೆ ಸಂಗ್ರಹ ಪದ್ದತಿ ಜಾರಿಯಲ್ಲಿದ್ದಾಗಲೇ ವಾಣಿಜ್ಯ ತೆರಿಗೆ ಇಲಾಖೆ ಸೂಕ್ತ ವ್ಯವಸ್ಥೆ ಕಲ್ಪಿಸಿತ್ತು. ಹಾಗಾಗಿ ವಾಣಿಜ್ಯ ತೆರಿಗೆ ಸಂಗ್ರಹಣೆಯಲ್ಲಿ ರಾಜ್ಯ ಮೊದಲಿನಿಂದಲೂ ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಜಿಎಸ್‌ಟಿ ಜಾರಿ ಬಳಿಕ ತೆರಿಗೆ ಸಂಗ್ರಹ ಪ್ರಮಾಣದಲ್ಲೂ ಏರಿಕೆಯಾಗುವ ಆತಂಕ ಸೃಷ್ಟಿಯಾಗಿತ್ತು. ಅಲ್ಲದೇ ಸಾರ್ವಜನಿಕರು, ವ್ಯಾಪಾರ- ವಹಿವಾಟುದಾರರ ಆಕ್ಷೇಪಣೆ ಹಿನ್ನೆಲೆಯಲ್ಲಿ ತೆರಿಗೆ ಪ್ರಮಾಣವೂ ಇಳಿಕೆಯಾಗಿದ್ದರಿಂದ ತೆರಿಗೆ ಹೆಚ್ಚಳವಿರಲಿ ನಿರೀಕ್ಷಿತ ತೆರಿಗೆ ಆದಾಯ ಸಂಗ್ರಹದ ಬಗ್ಗೆಯೂ ಅನುಮಾನ ಮೂಡಿತ್ತು. ಆದರೆ ನಿರೀಕ್ಷೆಗೂ ಮೀರಿ ಎಂಬಂತೆ ತೆರಿಗೆ ಆದಾಯ ಹೆಚ್ಚಾಗಿದೆ.

27,567 ಕೋಟಿ ರೂ. ಸಂಗ್ರಹ
ಕಳೆದ 2017ರ ಜುಲೈನಿಂದ 2018ರ ಮಾರ್ಚ್‌ವರೆಗೆ ಎಸ್‌ಜಿಎಸ್‌ಟಿಯಡಿ 27,567 ಕೋಟಿ ರೂ. ಸಂಗ್ರಹವಾಗಿದೆ. ರಾಜ್ಯ ಸರ್ಕಾರಗಳು 2015-16ನೇ ಸಾಲಿನಲ್ಲಿ ಪಡೆದ ತೆರಿಗೆ ಪ್ರಮಾಣಕ್ಕೆ  ಶೇ.14 ರಷ್ಟು ಹೆಚ್ಚಳ ಮಾಡಿ ಆ ಮೊತ್ತದಲ್ಲಿ ಕಡಿಮೆಯಾದರೆ ವ್ಯತ್ಯಾಸ ಮೊತ್ತವನ್ನು ಭರಿಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿತ್ತು. ಅದರಂತೆ ಜುಲೈನಿಂದ ಫೆಬ್ರುವರಿವರೆಗೆ 6245 ಕೋಟಿ ರೂ. ಪರಿಹಾರ ಮೊತ್ತವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಇದರಿಂದ ತೆರಿಗೆ ಆದಾಯ 33,812 ಕೋಟಿ ರೂ. ಮೀರುತ್ತದೆ. ಜತೆಗೆ ಐಜಿಎಸ್‌ಟಿ ಹಾಗೂ ತೈಲ ಉತ್ಪನ್ನಗಳಿಗೆ ವಿಧಿಸುವ ಮಾರಾಟ ತೆರಿಗೆಯಿಂದಲೂ ಉತ್ತಮ ಆದಾಯ ಸಂಗ್ರಹವಾಗಿದೆ.

ಹೆಚ್ಚಳಕ್ಕೆ ಕಾರಣವಾದ ಅಂಶಗಳು
ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆಯಲ್ಲಿ ಹಿಂದಿನಿಂದಲೂ ಒಂದಷ್ಟು ಶಿಸ್ತು ಪಾಲಿಸಿಕೊಂಡು ಬರಲಾಗಿದೆ. ಜತೆಗೆ ವ್ಯಾಟ್‌ ಪದ್ಧತಿಯಲ್ಲಿದ್ದ ಬಹುತೇಕ ಅರ್ಹ ವ್ಯಾಪಾರ- ವಹಿವಾಟುದಾರರು ಜಿಎಸ್‌ಟಿಗೆ ವರ್ಗಾವಣೆಯಾಗಿದ್ದು, ತೆರಿಗೆ ಪಾವತಿಯೂ ಉತ್ತಮವಾಗಿದೆ. ಅರ್ಹ ವ್ಯಾಪಾರ- ವ್ಯವಹಾರಸ್ಥರ ಪೈಕಿ ಬಹುತೇಕರು ತೆರಿಗೆ ವ್ಯಾಪ್ತಿಯಲ್ಲಿರುವುದರಿಂದ ಆದಾಯ ಸಂಗ್ರಹ ಹೆಚ್ಚಾಗಿರಬಹುದು. ಜಿಎಸ್‌ಟಿಯಡಿ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಆರಂಭದಲ್ಲಿ ತಲೆದೋರಿದ್ದ ತಾಂತ್ರಿಕ ಅಡಚಣೆಗಳು ಕ್ರಮೇಣ ನಿವಾರಣೆಯಾಗಿದ್ದು ಸಹ ವ್ಯಾಪಾರ- ವಹಿವಾಟು ಪ್ರಗತಿಗೆR  ಕಾರಣವಾಗಿರಬಹುದು ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದಲ್ಲಿ ಮಾರಾಟವಾಗುವ ಪ್ರತಿ ಲೀಟರ್‌ ಪೆಟ್ರೋಲ್‌ ಮೇಲೆ ಶೇ.30 ಹಾಗೂ ಡೀಸೆಲ್‌ ಮೇಲೆ ಶೇ.20ರಷ್ಟು ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ವಿಧಿಸುತ್ತದೆ. ಕಳೆದ ವರ್ಷದಿಂದೀಚೆಗೆ ಪೆಟ್ರೋಲ್‌, ಡೀಸೆಲ್‌ ದರ ನಿರಂತರವಾಗಿ ಏರಿಕೆಯಾಗುತ್ತಿರುವುದರಿಂದ ತೆರಿಗೆ ಸಂಗ್ರಹವೂ ಹೆಚ್ಚಾಗಿದೆ. ಜಿಎಸ್‌ಟಿ ಜಾರಿಯಾದ ಸಂದರ್ಭದಲ್ಲಿ ಆಯ್ದ ಸರಕುಗಳ ಮೇಲಿ ವಿಧಿಸಲಾಗಿದ್ದ ತೆರಿಗೆ ಪ್ರಮಾಣ ನಂತರ ಕಡಿಮೆಯಾಯಿತು. ಶೇ.28ರಿಂದ ಶೇ.18, ಶೇ.18ರಿಂದ ಶೇ.12 ಹಾಗೂ ಶೇ.12ರಿಂದ ಶೇ.5ಕ್ಕೆ ತೆರಿಗೆ ದರ ಇಳಿಕೆಯಾಗಿದ್ದರಿಂದ ವ್ಯಾಪಾರ- ವಹಿವಾಟು ವೃದ್ಧಿಸಿ ಆದಾಯ ಹೆಚ್ಚಾಗಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಶೇ.13ರಷ್ಟು ಹೆಚ್ಚಳ
2017ರ ಜುಲೈನಿಂದ ಮಾರ್ಚ್‌ವರೆಗೆ ಎಸ್‌ಜಿಎಸ್‌ಟಿಯಡಿ 27,567 ಕೋಟಿ ರೂ. ತೆರಿಗೆ ಜತೆಗೆ ಕೇಂದ್ರ ಸರ್ಕಾರದಿಂದ 6245 ಕೋಟಿ ರೂ. ಪರಿಹಾರ ಬಿಡುಗಡೆಯಾಗಿದೆ. ಪೆಟ್ರೋಲ್‌, ಡೀಸೆಲ್‌ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ಮೇಲೆಯೂ ರಾಜ್ಯ ಸರ್ಕಾರ ಮಾರಾಟ ತೆರಿಗೆ ವಿಧಿಸುತ್ತಿದ್ದು, ಅದರಿಂದಲೂ ಮಾಸಿಕ 1,200 ಕೋಟಿ ರೂ.ವರೆಗೆ ತೆರಿಗೆ ಸಂಗ್ರಹವಾಗಲಿದೆ. ಸಾಮಾನ್ಯವಾಗಿ ವರ್ಷದಿಂದ ವರ್ಷಕ್ಕೆ ಶೇ.8ರಿಂದ ಶೇ.9ರಷ್ಟು ತೆರಿಗೆ ಹೆಚ್ಚಳ ನಿರೀಕ್ಷೆ ಇರುತ್ತದೆ. ಆದರೆ ಕಳೆದ ಹಣಕಾಸು ವರ್ಷದಲ್ಲಿ ಶೇ.13ರಷ್ಟು ತೆರಿಗೆ ಹೆಚ್ಚಳ ಕಂಡಿದೆ. ಕೇಂದ್ರ ಸರ್ಕಾರ ಪರಿಹಾರ ವಿತರಿಸಿರುವುದು ತೆರಿಗೆ ಹೆಚ್ಚಳಕ್ಕೆ ಸಹಕಾರಿಯಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆ ಉನ್ನತ ಮೂಲಗಳು ತಿಳಿಸಿವೆ.

ಎಸ್‌ಜಿಎಸ್‌ಟಿ ಸಂಗ್ರಹ ವಿವರ
ತಿಂಗಳು    ತೆರಿಗೆ ಪ್ರಮಾಣ (ಕೋಟಿ ರೂ.ಗಳಲ್ಲಿ)

ಜುಲೈ    3815
ಆಗಸ್ಟ್‌    2561
ಸೆಪ್ಟೆಂಬರ್‌    2868
ಅಕ್ಟೋಬರ್‌    2930
ನವೆಂಬರ್‌    2923
ಡಿಸೆಂಬರ್‌    2460
ಜನವರಿ    3007
ಫೆಬ್ರುವರಿ    4369
ಮಾರ್ಚ್‌        2634
ಒಟ್ಟು    27,567

– ಎಂ.ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.