ವಾರದಲ್ಲಿ ಸಾಲ ಮನ್ನಾ ಮಾಡದಿದ್ದರೆ ಹೋರಾಟ: ಯಡಿಯೂರಪ್ಪ


Team Udayavani, May 29, 2018, 6:20 AM IST

bsy-g-800.jpg

ಬೆಂಗಳೂರು: ರೈತರ ಸಾಲ ಮನ್ನಾಗೆ ಒತ್ತಾಯಿಸಿ ಬಿಜೆಪಿಯು ಬೆಂಗಳೂರು ಹೊರತುಪಡಿಸಿ ಸೋಮವಾರ ಕರೆ ನೀಡಿದ್ದ ಬಂದ್‌ ರಾಜ್ಯದೆಲ್ಲೆಡೆ ಯಶಸ್ವಿಯಾಗಿದೆ ಎಂದಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿಗಳು ಒಂದು ವಾರದಲ್ಲಿ ಸಾಲ ಮನ್ನಾ ಮಾಡದಿದ್ದರೆ ಮುಂದಿನ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಿಜೆಪಿ ಕಚೇರಿಯಲ್ಲಿ ಸೋಮವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ಹೊರತುಪಡಿಸಿ ಉಳಿದ 30 ಜಿಲ್ಲೆಗಳಲ್ಲಿ ಸ್ವಯಂ ಪ್ರೇರಿತ ಬಂದ್‌ ಯಶಸ್ವಿಯಾಗಿದೆ. ಎಲ್ಲಿಯೂ ಅಂಗಡಿ, ಮುಂಗಟ್ಟುಗಳನ್ನು ಒತ್ತಾಯಪೂರ್ವಕವಾಗಿ ಮುಚ್ಚಿಸಿಲ್ಲ. ಸಂಚಾರಕ್ಕೆ ಅಡ್ಡಿಪಡಿಸಿಲ್ಲ. ಸ್ವಯಂಪ್ರೇರಿತವಾಗಿ ಬಂದ್‌ ಮಾಡುವಂತೆ ಮನವಿ ಮಾಡಲಾಗಿತ್ತು. ಆದರೆ ರಾಜ್ಯ ಸರ್ಕಾರವು ಪೊಲೀಸ್‌ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ಪ್ರತಿಭಟನಾಕಾರರನ್ನು ಹತ್ತಿಕ್ಕಲು ಪ್ರಯತ್ನಿಸಿತು. ಅನಗತ್ಯವಾಗಿ ಸಂಸದರು ಸೇರಿದಂತೆ ಹಲವು ಜನಪ್ರತಿನಿಧಿಗಳನ್ನು ಬಂಧಿಸಿತು ಎಂದು ದೂರಿದರು.

ಒಂದು ವಾರದಲ್ಲಿ ರೈತರ ಸಾಲ ಮನ್ನಾ ಮಾಡದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಹಾಗಾಗಿ ಒಂದು ವಾರ ನಿರೀಕ್ಷಿಸಲಾಗುವುದು. ನಂತರವೂ ಸಾಲ ಮನ್ನಾ ಮಾಡದಿದ್ದರೆ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದು ಹೇಳಿದರು.

ರೈತರ ಹಿತರಕ್ಷಣೆ ಕಾಳಜಿ ಇಲ್ಲ
ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸಾಲ ಮನ್ನಾ ಮಾಡುವುದಾಗಿ ಚುನಾವಣೆಗೂ ಮುನ್ನ ಘೋಷಿಸಿದ್ದ ಕುಮಾರಸ್ವಾಮಿಯವರು ಆ ನಂತರ ದಿನಕ್ಕೊಂದು ಹೇಳಿಕೆ ನೀಡುತ್ತಾ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಸಂಪುಟ ರಚನೆ, ಖಾತೆ ಹಂಚಿಕೆ ಗೊಂದಲದಲ್ಲೇ ಮುಳುಗಿರುವ ಮುಖ್ಯಮಂತ್ರಿಗಳಿಗೆ ರೈತರ ಹಿತರಕ್ಷಣೆ ಬಗ್ಗೆ ಕಾಳಜಿ ಇಲ್ಲ ಎಂದು ವಾಗ್ಧಾಳಿ ನಡೆಸಿದರು.

ಕಳೆದ ಐದು ವರ್ಷದಲ್ಲಿ ರಾಜ್ಯದಲ್ಲಿ 3,800 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚುನಾವಣೆ ನಂತರವೂ ಬೆಳಗಾವಿ, ರಾಯಚೂರಿನಲ್ಲಿ ಸಾಲಬಾಧೆ ತಾಳಲಾರದೆ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು ಕಳವಳಕಾರಿ ಸಂಗತಿ. ಒಂದೊಮ್ಮೆ ಸರ್ಕಾರ ಸಾಲ ಮನ್ನಾ ಮಾಡಿದ್ದರೆ ಈ ದುರ್ಘ‌ಟನೆಗಳನ್ನು ತಪ್ಪಿಸಬಹುದಿತ್ತು. ಮೈತ್ರಿ ಸರ್ಕಾರದ ನೆಪವೊಡ್ಡಿ ಈ ಹಿಂದೆ ತಾವೇ ನೀಡಿದ್ದ ಭರವಸೆಯಿಂದ ಹಿಂದೆ ಸರಿಯುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತರು ಬಲಿಪಶುವಾಗಲು ಬಿಡುವುದಿಲ್ಲ
ಕುಮಾರಸ್ವಾಮಿಯವರು ಸಾಂದರ್ಭಿಕ ಶಿಶುವಾಗಿರಲಿ ಇಲ್ಲವೇ ಸನ್ನಿವೇಶದ ಶಿಶುವಾದರೂ ಆಗಲಿ. ಆದರೆ ಅವರ ಸಂದರ್ಭ, ಸನ್ನಿವೇಶಕ್ಕೆ ರೈತರು ಬಲಿಪಶುಗಳಾಗುವುದನ್ನು ಸಹಿಸುವುದಿಲ್ಲ. ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಅಧಿಕಾರ ಹಿಡಿಯುವ ಮುನ್ನ ಕಾಂಗ್ರೆಸ್‌ನಿಂದ ಸ್ಪಷ್ಟ ಭರವಸೆ ಪಡೆಯದೆ ಕುರ್ಚಿ ವ್ಯಾಮೋಹಕ್ಕೆ ಮುಖ್ಯಮಂತ್ರಿಯಾದ ಕುಮಾರಸ್ವಾಮಿಯವರು ಇದೀಗ ಕುಂಟು ನೆಪ ಹೇಳುವುದು ಸರಿಯಲ್ಲ ಎಂದು ಕಿಡಿ ಕಾರಿದರು.

ಜನರ ಕ್ಷಮೆ ಯಾಚಿಸಬೇಕು
ತಾವು ರಾಜ್ಯದ ಜನರ ಮುಲಾಜಿನಲ್ಲಿಲ್ಲ. ಬದಲಿಗೆ ಕಾಂಗ್ರೆಸ್ಸಿನ ಮುಲಾಜಿನಲ್ಲಿದ್ದೇನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಾಡಿನ ಆರೂವರೆ ಕೋಟಿ ಜನರಿಗೆ ಅವಮಾನ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅವಮಾನಿಸಿದ್ದಾರೆ. ಸ್ವತಂತ್ರ ಭಾರತ ಇತಿಹಾಸದಲ್ಲಿ ಯಾವ ಮುಖ್ಯಮಂತ್ರಿಯೂ ಜನರ ಬಗ್ಗೆ ಇಷ್ಟು ಹಗುರವಾಗಿ ಮಾತನಾಡಿಲ್ಲ. ಕುಮಾರಸ್ವಾಮಿಯವರು ಹತಾಶೆಯಿಂದ ನೀಡಿರುವ ಹೇಳಿಕೆ ಖಂಡನೀಯ. ಕೂಡಲೇ ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.