ಸಿಎಂ ರಾಜೀನಾಮೆ ಕೊಡಲಿ: ವಾಟಾಳ್
Team Udayavani, May 31, 2018, 7:00 AM IST
ಕೊಪ್ಪಳ: ಸಾಲ ಮನ್ನಾ ಮಾಡಲಾಗದಿದ್ದರೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ರಾಜೀನಾಮೆ ಕೊಟ್ಟು
ಹೊರ ನಡೆಯಬೇಕು ಎಂದು ಕನ್ನಪರ ಸಂಘಟನೆಗಳ ಒಕ್ಕೂಟದ ಮುಖಂಡ ವಾಟಾಳ್ ನಾಗರಾಜ ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಸಾಲ ಮನ್ನಾ ವಿಚಾರದಲ್ಲಿ ಮೈತ್ರಿ ಸರ್ಕಾರ
ಯಾವುದೇ ನಾಟಕ ಆಡಬಾರದು. ಕುಮಾರಸ್ವಾಮಿಯವರು ರಾಜ್ಯದ ಜನರ ಮುಲಾಜಿನಲ್ಲಿಲ್ಲ. ಕಾಂಗ್ರೆಸ್ನ
ಮುಲಾಜಿನಲ್ಲಿದ್ದೇನೆ ಅನ್ನೋದಾದ್ರೆ ಮುಖ್ಯಮಂತ್ರಿಯಾಗಿ ಯಾಕಿರಬೇಕು. ಸಿಎಂ ಸ್ಥಾನ ಬಿಟ್ಟು ಹೋಗಬೇಕು ಎಂದರು. ಸರ್ಕಾರ ರೈತರ ಪರವಾಗಿ ಪ್ರಾಮಾಣಿಕ ನಿರ್ಧಾರ ತೆಗೆದುಕೊಳ್ಳಬೇಕು.
ಸಮ್ಮಿಶ್ರ ಸರ್ಕಾರ ರಚಿಸೋದಕ್ಕೆ ಅವರಿಗೆ ನಂಬಿಕೆಯಿದೆ. ನಾವಿಬ್ಬರೂ ಒಂದಾಗಿದ್ದೇವೆ ಎನ್ನುತ್ತಿದ್ದಾರೆ. ಆದರೆ ಸಾಲ
ಮನ್ನಾ ವಿಚಾರದಲ್ಲಿ ಏಕೆ ನಂಬಿಕೆ ಬರುತ್ತಿಲ್ಲ. ಹಣಕಾಸು ಖಾತೆಗಾಗಿ ಜೆಡಿಎಸ್-ಕಾಂಗ್ರೆಸ್ ಸುಮ್ಮನೆ ನಾಟಕ
ಮಾಡುತ್ತಿದ್ದಾರೆ. ಇಬ್ಬರೂ ಸೇರಿ ಸಾಲ ಮನ್ನಾ ವಿಷಯದಲ್ಲಿ ನಿರ್ಧಾರ ಕೈಗೊಳ್ಳಲೇಬೇಕು. ಇಲ್ಲದಿದ್ದರೆ ರಾಜೀನಾಮೆ
ಕೊಡಲಿ, ಮತ್ತೆ ರಾಜ್ಯದಲ್ಲಿ ಚುನಾವಣೆಯಾಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್