ಎಫ್ಐಆರ್ ದಾಖಲು; ನಟ ದುನಿಯಾ ವಿಜಯ್ ಪರಾರಿ, ಏನಿದು ಪ್ರಕರಣ?
Team Udayavani, May 31, 2018, 3:34 PM IST
ಬೆಂಗಳೂರು:ಮಾಸ್ತಿಗುಡಿ ಚಿತ್ರೀಕರಣದ ವೇಳೆ ಖಳನಟರಾದ ಅನಿಲ್ ಹಾಗೂ ಉದಯ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಸುಂದರ್ ಗೌಡ ಪರಾರಿಯಾಗಲು ಸಹಕರಿಸಿದ ಆರೋಪದ ಮೇಲೆ ನಟ ದುನಿಯಾ ವಿಜಯ್ ಮೇಲೆ ಎಫ್ ಐಆರ್ ದಾಖಲಾಗಿದೆ.
ಖಳನಟರಿಬ್ಬರ ಸಾವಿನ ಪ್ರಕರಣ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ನಿರ್ಮಾಪಕ ಸುಂದರ್ ಗೌಡ ಪದೇ, ಪದೇ ವಿಚಾರಣೆಗೆ ಗೈರು ಹಾಜರಾಗಿದ್ದರಿಂದ ರಾಮನಗರ ಜೆಎಂಎಫ್ ಸಿ ಕೋರ್ಟ್ ನಿನ್ನೆ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.
ಏತನ್ಮಧ್ಯೆ ಸುಂದರ ಗೌಡ ದುನಿಯಾ ವಿಜಿ ಮನೆಯಲ್ಲಿ ಆಶ್ರಯ ಪಡೆದಿದ್ದಾರೆಂಬ ಮಾಹಿತಿ ಮೇರೆಗೆ ಪೊಲೀಸರು ಬಂಧಿಸಲು ಹೋದ ವೇಳೆ ದುನಿಯಾ ವಿಜಿ ಅವರು ಸುಂದರ್ ಗೌಡ ಪರಾರಿಯಾಗಲು ಸಹಕರಿಸಿದ್ದಲ್ಲದೆ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ದೂರಿ ಚನ್ನಮ್ಮನ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಗೋವಿಂದರಾಜು ಪ್ರಕರಣ ದಾಖಲಿಸಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು ದುನಿಯಾ ವಿಜಿ ಬಂಧನಕ್ಕೆ ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ. ಬಹುಕೋಟಿ ವಂಚನೆ ಪ್ರಕರಣ..235 ಕೋಟಿ ರೂಪಾಯಿ ವಂಚನೆ ಠೇವಣಿ ಹಣ ವಾಪಸ್ ಕೊಡದೇ ವಂಚಿಸಿದ್ದ ಆನಂದ್ ಅಪ್ಪುಗೋಳ್. 2017ರ ಆಗಸ್ಟ್ ನಿಂದ ಠೇವಣಿ ಹಣ ಸಂಗೊಳ್ಳಿ ರಾಯಣ್ಣ ಭೀಮಾಂಬಿಕಾ ಸೊಸೈಟಿ ಮೂಲಕ ವಂಚನೆ. ಖಡೇಬಜಾರ್ ಪೊಲೀಸರಿಂದ ಬಂಧನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು