ಸಂಪುಟ ಸರ್ಕಸ್‌: ಕಗ್ಗಂಟಾದ ಕೈ ಆಕಾಂಕ್ಷಿಗಳ ಪಟ್ಟಿ


Team Udayavani, Jun 1, 2018, 6:00 AM IST

z-42.jpg

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಕಾಂಗ್ರೆಸ್‌ನಲ್ಲಿ ನಿರಂತರ ಸರ್ಕಸ್‌ ಮುಂದುವರಿದಿದ್ದು, ರಾಜ್ಯ ನಾಯಕರು ಗುರುವಾರ ತಡ ರಾತ್ರಿವರೆಗೂ ಕಸರತ್ತು ನಡೆಸಿದರೂ, ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗಿಲ್ಲ ಎಂದು ತಿಳಿದು ಬಂದಿದೆ. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ, ಕೆ.ಸಿ.ವೇಣುಗೋಪಾಲ್‌, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ ಹಲವು ಸುತ್ತಿನ ಮಾತುಕತೆ ನಡೆಸಿದರೂ, ಆಕಾಂಕ್ಷಿಗಳ ಒತ್ತಡ ಹೆಚ್ಚಾಗಿರುವು ದರಿಂದ ಅಂತಿಮವಾಗಿ ಯಾರು ಸಂಪುಟ ಸೇರಬೇಕೆಂಬ ಪಟ್ಟಿ ಸಿದ್ಧಪಡಿಸಲು ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ.

ಹಿರಿಯ ಶಾಸಕರಾದ ಎಚ್‌.ಕೆ. ಪಾಟೀಲ್‌, ಆರ್‌.ವಿ ದೇಶಪಾಂಡೆ, ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್‌, ರೋಷನ್‌ ಬೇಗ್‌, ಎಂ.ಬಿ. ಪಾಟೀಲ್‌, ಶಾಮನೂರು ಶಿವಶಂಕರಪ್ಪ ಅವರಿಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಬಗ್ಗೆ ಪಕ್ಷದಲ್ಲಿ ಅಪಸ್ವರ ಕೇಳಿ ಬಂದಿರುವುದರಿಂದ ಹಿರಿಯರನ್ನು ಹೊರಗಿಟ್ಟು
ಪಟ್ಟಿ ಸಿದ್ಧಪಡಿಸುವುದು ರಾಜ್ಯ ನಾಯಕರಿಗೆ ಕಷ್ಟವಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಬೀದರ್‌ನಲ್ಲಿ ಮಾಜಿ ಸಚಿವ ಈಶ್ವರ್‌ ಖಂಡ್ರೆಗೆ ಮತ್ತೆ ಅವಕಾಶ ಕಲ್ಪಿಸಿದರೆ, ಬಸವರಾಜ್‌ ಪಾಟೀಲ್‌ ಹುಮ್ನಾಬಾದ್‌ ಬಂಡಾಯ ಏಳುವ ಸಾಧ್ಯತೆಯಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ ಸತೀಶ್‌ ಜಾರಕಿಹೊಳಿ, ರಮೇಶ್‌ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಟಾಳ್ಕರ್‌ ಮೂವರೂ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದಾರೆ. ರಮೇಶ್‌ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಟಾಳ್ಕರ್‌ಗೆ ಸಚಿವ ಸ್ಥಾನ ನೀಡಬಾರದು ಎಂದು ರಾಜ್ಯ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿದು ಬಂದಿದೆ. 

ಲಕ್ಷ್ಮಿ ಹೆಬ್ಟಾಳ್ಕರ್‌ ಮಹಿಳಾ ಕೋಟಾದಡಿ ಸಂಪುಟದಲ್ಲಿ ಸೇರಲು ಪ್ರಯತ್ನ ನಡೆಸಿದರೆ, ಅವರಿಗೆ ಪರ್ಯಾಯವಾಗಿ ಮಹಿಳಾ ಕೋಟಾದಡಿ ದಲಿತ ಸಮುದಾಯದ ಎಡಗೈ ಪಂಗಡಕ್ಕೆ ಸೇರಿದ ರೂಪಾ ಶಶಿಧರ್‌ಗೆ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಕೇಂದ್ರದ ಮಾಜಿ ಸಚಿವ ಕೆ.ಎಚ್‌. ಮುನಿಯಪ್ಪ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಎಂ.ಬಿ. ಪಾಟೀಲರಿಗೆ ಅವರ ಜಿಲ್ಲೆಯ ಶಾಸಕರಾದ ಶಿವಾನಂದ ಪಾಟೀಲ್‌ ಹಾಗೂ ಯಶವಂತರಾಯಗೌಡ ಪಾಟೀಲ್‌ ವಿರೋಧ ವ್ಯಕ್ತಪಡಿಸುತ್ತಿದ್ದಾರೆಂಬ ಮಾತು ಕೇಳಿ ಬರುತ್ತಿದೆ. ಆದರೆ, ಎಂ.ಬಿ.ಪಾಟೀಲ್‌ ಹೈಕಮಾಂಡ್‌ ಮೂಲಕ ಸಂಪುಟ ಸೇರಲು ನಿರಂತರ ಪ್ರಯತ್ನ ನಡೆಸಿದ್ದಾರೆ. ತೀವ್ರ ಪೈಪೋಟಿ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ 15 -18 ಸಚಿವ ಸ್ಥಾನಗಳನ್ನು ಭರ್ತಿ ಮಾಡಿ, 3-4 ಸ್ಥಾನಗಳನ್ನು ಖಾಲಿ ಉಳಿಸಿಕೊಳ್ಳಲು ಚಿಂತನೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಅಲ್ಲದೇ ಸಚಿವ ಸ್ಥಾನ ವಂಚಿತರಾಗುವ ಶಾಸಕರಿಗೆ ಪ್ರಮುಖ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಕಲ್ಪಿಸಲು ಯೋಜಿಸಿದ್ದಾರೆಂದು ತಿಳಿದು ಬಂದಿದೆ.

ಇದರ ಮಧ್ಯೆಯೂ ಶುಕ್ರವಾರ ಮುಖ್ಯಮಂತ್ರಿ ಕುಮಾರಸ್ವಾಮಿ ಜತೆ ಚರ್ಚಿಸಿ ಹೈಕಮಾಂಡ್‌ಗೆ ಪಟ್ಟಿ ರವಾನಿಸಲು ಕಾಂಗ್ರೆಸ್‌ ನಿರ್ಧರಿಸಿದೆ. ಸದ್ಯ
ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದಿರುವುದರಿಂದ ಮುಂದಿನ ಬುಧವಾರದ ವರೆಗೂ ಸಂಪುಟ ವಿಸ್ತರಣೆ ನಡೆಯುವುದು ಅನುಮಾನ ಎಂದು
ಹೇಳಲಾಗಿದೆ.

ಜೆಡಿಎಸ್‌ ನಾಯಕರ ಜತೆ ನಮ್ಮ ನಾಯಕರು ಸಂಪರ್ಕದಲ್ಲಿದ್ದಾರೆ. ಖಾತೆ ಹಂಚಿಕೆ ವಿಚಾರ ವಾಗಿ ನಿರಂತರ ಚರ್ಚೆ ನಡೆಸುತ್ತಿದ್ದಾರೆ. ಖಾತೆ ಹಂಚಿಕೆ ವಿಷಯ ಎರಡು ದಿನದಲ್ಲಿ ಬಗೆ ಹರಿಯಲಿದೆ.
● ಕೃಷ್ಣ ಭೈರೇಗೌಡ, ಮಾಜಿ ಸಚಿವ

ಸಮ್ಮಿಶ್ರ ಸರ್ಕಾರ ಇರುವುದರಿಂದ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾಶ್ಮೀರದಲ್ಲಿ ಸಂಪುಟ ರಚನೆಗೆ 3 ತಿಂಗಳು ಸಮಯ ತೆಗೆದುಕೊಳ್ಳಲಾಗಿತ್ತು. ಖಾತೆ ಹಂಚಿಕೆ ಬಗ್ಗೆ ಶೀಘ್ರವೇ ತೀರ್ಮಾನ ಕೈಗೊಳ್ಳಲಿದ್ದೇವೆ.
● ಕೆ.ಸಿ. ವೇಣುಗೋಪಾಲ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.