ಫ‌ಲ ನೀಡಿತೇ ಸಿದ್ದು ಸಂಧಾನ?


Team Udayavani, Oct 26, 2018, 6:05 AM IST

sidda-kgaf-621x414livemint.jpg

ಮಂಡ್ಯ: ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನಡೆಸಿದ ರಾಜಕೀಯ ಸಂಧಾನ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಫ‌ಲ ಕೊಡುವುದೇ ಎನ್ನುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್‌-ಜೆಡಿಎಸ್‌ ಚುನಾವಣಾ ಮೈತ್ರಿಗೆ ಪ್ರಬಲ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದ ಮಾಜಿ ಶಾಸಕರಾದ ಎನ್‌.ಚೆಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ರಮೇಶ್‌ ಬಂಡಿಸಿದ್ದೇಗೌಡ ಮತ್ತಿತರ ಮುಖಂಡರು ಅಧಿಕೃತವಾಗಿ ಚುನಾವಣಾ ರಣರಂಗವನ್ನೇ ಪ್ರವೇಶಿಸದೆ ತಟಸ್ಥ ನಿಲುವನ್ನು ತಾಳುವುದರ ಮೂಲಕ ಮೌನ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಬುಧವಾರದಂದು ಮಂಡ್ಯಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ, ಜೆಡಿಎಸ್‌ನ ಪ್ರಬಲ ವಿರೋಧಿಗಳಾಗಿದ್ದ ನಾಯಕರನ್ನು ಮತ್ತು ಕಾಂಗ್ರೆಸ್‌ನ ನಿಷ್ಠಾವಂತ ಮುಖಂಡರನ್ನು ಒಂದೇ ವೇದಿಕೆಗೆ ಕರೆತರುವಲ್ಲಿ ಯಶಸ್ವಿಯಾದರು.

ಚುನಾವಣೆ ಘೋಷಣೆಯಾದ ಬಳಿಕ ನಡೆಯುತ್ತಿರುವ ಪ್ರಚಾರ ಸಮಾವೇಶದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಎರಡೂ ಪಕ್ಷದ ನಾಯಕರ ಭಾವಚಿತ್ರಗಳು ಆಯಾಯ ಕ್ಷೇತ್ರಗಳಲ್ಲಿ ವಿಜೃಂಭಿಸುತ್ತಿದ್ದರೂ, ಕಾಂಗ್ರೆಸ್‌ ನಾಯಕರು ಪ್ರಚಾರ ವೇದಿಕೆ ಹಂಚಿಕೊಳ್ಳಲು ನಿರಾಕರಿಸುತ್ತಿದ್ದಾರೆ. ಇದಕ್ಕೆ ಭವಿಷ್ಯದಲ್ಲಿ ಕಾರ್ಯಕರ್ತರ ಪ್ರಬಲ ವಿರೋಧ ಎದುರಿಸಬೇಕಾಗುತ್ತದೆ ಎಂಬ ಭಯ ಪ್ರಮುಖ ಕಾರಣವಾಗಿದೆ. ಈ ಉದ್ದೇಶದಿಂದಲೇ ಸಿದ್ದರಾಮಯ್ಯ ಬುಧವಾರ ನಡೆಸಿದ ರಹಸ್ಯ ಸಭೆಯಲ್ಲಿ ಕಾಂಗ್ರೆಸ್ಸಿಗರು ಜೆಡಿಎಸ್‌ನ ಪ್ರಚಾರ ಸಭೆಯಲ್ಲಿ ಭಾಗವಹಿಸಲೇಬೇಕೆಂಬ ಕಟ್ಟಾಜ್ಞೆ ಹೊರಡಿಸಿಲ್ಲ. ಬದಲಾಗಿ ಅವರವರ ವಿವೇಚನೆಗೆ ಬಿಡುವುದರ ಮೂಲಕ ಕಾಂಗ್ರೆಸ್ಸಿಗರು ಸ್ವತಂತ್ರವಾಗಿ ಜೆಡಿಎಸ್‌ ಪರವಾಗಿ ಚುನಾವಣಾ ಪ್ರಚಾರ ನಡೆಸುವಂತೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್‌ ಬೆಂಬಲಿತ ಜೆಡಿಎಸ್‌ ಅಭ್ಯರ್ಥಿ ಎಲ್‌.ಆರ್‌.ಶಿವರಾಮೇಗೌಡ ಅವರ ಉಪಸ್ಥಿತಿಯ ನಡುವೆ ಕಾಂಗ್ರೆಸ್‌ ನಾಯಕರ ಬೆಂಬಲವನ್ನು ಘೋಷಿಸುವಲ್ಲಿ ಸಫ‌ಲರಾಗಿರುವ ಸಿದ್ದರಾಮಯ್ಯ, ಮೊದಲ ಹಂತವಾಗಿ ಕಾಂಗ್ರೆಸ್‌ ಮುಖಂಡರ ಮನವೊಲಿಸುವ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಆದರೆ, ಆಯಾಯ ಕ್ಷೇತ್ರದ ಮಾಜಿ ಶಾಸಕರು ಚುನಾವಣಾ ದಿನದೊಳಗೆ ಹಂತ, ಹಂತವಾಗಿ ಕಾಂಗ್ರೆಸ್‌ ಮನಸ್ಥಿತಿಗಳನ್ನು ಜೆಡಿಎಸ್‌ ಮತಗಳನ್ನಾಗಿ ಪರಿವರ್ತಿಸುವ ಪ್ರಾಮಾಣಿಕ ಪ್ರಯತ್ನವನ್ನು ನಡೆಸುವರೋ ಅಥವಾ ಮತದಾನದ ನಿಲುವನ್ನು ಕಾರ್ಯಕರ್ತರ ವಿವೇಚನೆಗೆ ಬಿಟ್ಟು ಬಿಡುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.