ಫ‌ಲ ನೀಡಿತೇ ಸಿದ್ದು ಸಂಧಾನ?


Team Udayavani, Oct 26, 2018, 6:05 AM IST

sidda-kgaf-621x414livemint.jpg

ಮಂಡ್ಯ: ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನಡೆಸಿದ ರಾಜಕೀಯ ಸಂಧಾನ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಫ‌ಲ ಕೊಡುವುದೇ ಎನ್ನುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್‌-ಜೆಡಿಎಸ್‌ ಚುನಾವಣಾ ಮೈತ್ರಿಗೆ ಪ್ರಬಲ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದ ಮಾಜಿ ಶಾಸಕರಾದ ಎನ್‌.ಚೆಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ರಮೇಶ್‌ ಬಂಡಿಸಿದ್ದೇಗೌಡ ಮತ್ತಿತರ ಮುಖಂಡರು ಅಧಿಕೃತವಾಗಿ ಚುನಾವಣಾ ರಣರಂಗವನ್ನೇ ಪ್ರವೇಶಿಸದೆ ತಟಸ್ಥ ನಿಲುವನ್ನು ತಾಳುವುದರ ಮೂಲಕ ಮೌನ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಬುಧವಾರದಂದು ಮಂಡ್ಯಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ, ಜೆಡಿಎಸ್‌ನ ಪ್ರಬಲ ವಿರೋಧಿಗಳಾಗಿದ್ದ ನಾಯಕರನ್ನು ಮತ್ತು ಕಾಂಗ್ರೆಸ್‌ನ ನಿಷ್ಠಾವಂತ ಮುಖಂಡರನ್ನು ಒಂದೇ ವೇದಿಕೆಗೆ ಕರೆತರುವಲ್ಲಿ ಯಶಸ್ವಿಯಾದರು.

ಚುನಾವಣೆ ಘೋಷಣೆಯಾದ ಬಳಿಕ ನಡೆಯುತ್ತಿರುವ ಪ್ರಚಾರ ಸಮಾವೇಶದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಎರಡೂ ಪಕ್ಷದ ನಾಯಕರ ಭಾವಚಿತ್ರಗಳು ಆಯಾಯ ಕ್ಷೇತ್ರಗಳಲ್ಲಿ ವಿಜೃಂಭಿಸುತ್ತಿದ್ದರೂ, ಕಾಂಗ್ರೆಸ್‌ ನಾಯಕರು ಪ್ರಚಾರ ವೇದಿಕೆ ಹಂಚಿಕೊಳ್ಳಲು ನಿರಾಕರಿಸುತ್ತಿದ್ದಾರೆ. ಇದಕ್ಕೆ ಭವಿಷ್ಯದಲ್ಲಿ ಕಾರ್ಯಕರ್ತರ ಪ್ರಬಲ ವಿರೋಧ ಎದುರಿಸಬೇಕಾಗುತ್ತದೆ ಎಂಬ ಭಯ ಪ್ರಮುಖ ಕಾರಣವಾಗಿದೆ. ಈ ಉದ್ದೇಶದಿಂದಲೇ ಸಿದ್ದರಾಮಯ್ಯ ಬುಧವಾರ ನಡೆಸಿದ ರಹಸ್ಯ ಸಭೆಯಲ್ಲಿ ಕಾಂಗ್ರೆಸ್ಸಿಗರು ಜೆಡಿಎಸ್‌ನ ಪ್ರಚಾರ ಸಭೆಯಲ್ಲಿ ಭಾಗವಹಿಸಲೇಬೇಕೆಂಬ ಕಟ್ಟಾಜ್ಞೆ ಹೊರಡಿಸಿಲ್ಲ. ಬದಲಾಗಿ ಅವರವರ ವಿವೇಚನೆಗೆ ಬಿಡುವುದರ ಮೂಲಕ ಕಾಂಗ್ರೆಸ್ಸಿಗರು ಸ್ವತಂತ್ರವಾಗಿ ಜೆಡಿಎಸ್‌ ಪರವಾಗಿ ಚುನಾವಣಾ ಪ್ರಚಾರ ನಡೆಸುವಂತೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್‌ ಬೆಂಬಲಿತ ಜೆಡಿಎಸ್‌ ಅಭ್ಯರ್ಥಿ ಎಲ್‌.ಆರ್‌.ಶಿವರಾಮೇಗೌಡ ಅವರ ಉಪಸ್ಥಿತಿಯ ನಡುವೆ ಕಾಂಗ್ರೆಸ್‌ ನಾಯಕರ ಬೆಂಬಲವನ್ನು ಘೋಷಿಸುವಲ್ಲಿ ಸಫ‌ಲರಾಗಿರುವ ಸಿದ್ದರಾಮಯ್ಯ, ಮೊದಲ ಹಂತವಾಗಿ ಕಾಂಗ್ರೆಸ್‌ ಮುಖಂಡರ ಮನವೊಲಿಸುವ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಆದರೆ, ಆಯಾಯ ಕ್ಷೇತ್ರದ ಮಾಜಿ ಶಾಸಕರು ಚುನಾವಣಾ ದಿನದೊಳಗೆ ಹಂತ, ಹಂತವಾಗಿ ಕಾಂಗ್ರೆಸ್‌ ಮನಸ್ಥಿತಿಗಳನ್ನು ಜೆಡಿಎಸ್‌ ಮತಗಳನ್ನಾಗಿ ಪರಿವರ್ತಿಸುವ ಪ್ರಾಮಾಣಿಕ ಪ್ರಯತ್ನವನ್ನು ನಡೆಸುವರೋ ಅಥವಾ ಮತದಾನದ ನಿಲುವನ್ನು ಕಾರ್ಯಕರ್ತರ ವಿವೇಚನೆಗೆ ಬಿಟ್ಟು ಬಿಡುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.