ಫ‌ಲ ನೀಡಿತೇ ಸಿದ್ದು ಸಂಧಾನ?


Team Udayavani, Oct 26, 2018, 6:05 AM IST

sidda-kgaf-621x414livemint.jpg

ಮಂಡ್ಯ: ಮಾಜಿ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ನಡೆಸಿದ ರಾಜಕೀಯ ಸಂಧಾನ ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಫ‌ಲ ಕೊಡುವುದೇ ಎನ್ನುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಕಾಂಗ್ರೆಸ್‌-ಜೆಡಿಎಸ್‌ ಚುನಾವಣಾ ಮೈತ್ರಿಗೆ ಪ್ರಬಲ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದ ಮಾಜಿ ಶಾಸಕರಾದ ಎನ್‌.ಚೆಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ರಮೇಶ್‌ ಬಂಡಿಸಿದ್ದೇಗೌಡ ಮತ್ತಿತರ ಮುಖಂಡರು ಅಧಿಕೃತವಾಗಿ ಚುನಾವಣಾ ರಣರಂಗವನ್ನೇ ಪ್ರವೇಶಿಸದೆ ತಟಸ್ಥ ನಿಲುವನ್ನು ತಾಳುವುದರ ಮೂಲಕ ಮೌನ ಪ್ರತಿಭಟನೆಯನ್ನು ವ್ಯಕ್ತಪಡಿಸಿದ್ದರು. ಆದರೆ, ಬುಧವಾರದಂದು ಮಂಡ್ಯಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ, ಜೆಡಿಎಸ್‌ನ ಪ್ರಬಲ ವಿರೋಧಿಗಳಾಗಿದ್ದ ನಾಯಕರನ್ನು ಮತ್ತು ಕಾಂಗ್ರೆಸ್‌ನ ನಿಷ್ಠಾವಂತ ಮುಖಂಡರನ್ನು ಒಂದೇ ವೇದಿಕೆಗೆ ಕರೆತರುವಲ್ಲಿ ಯಶಸ್ವಿಯಾದರು.

ಚುನಾವಣೆ ಘೋಷಣೆಯಾದ ಬಳಿಕ ನಡೆಯುತ್ತಿರುವ ಪ್ರಚಾರ ಸಮಾವೇಶದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಎರಡೂ ಪಕ್ಷದ ನಾಯಕರ ಭಾವಚಿತ್ರಗಳು ಆಯಾಯ ಕ್ಷೇತ್ರಗಳಲ್ಲಿ ವಿಜೃಂಭಿಸುತ್ತಿದ್ದರೂ, ಕಾಂಗ್ರೆಸ್‌ ನಾಯಕರು ಪ್ರಚಾರ ವೇದಿಕೆ ಹಂಚಿಕೊಳ್ಳಲು ನಿರಾಕರಿಸುತ್ತಿದ್ದಾರೆ. ಇದಕ್ಕೆ ಭವಿಷ್ಯದಲ್ಲಿ ಕಾರ್ಯಕರ್ತರ ಪ್ರಬಲ ವಿರೋಧ ಎದುರಿಸಬೇಕಾಗುತ್ತದೆ ಎಂಬ ಭಯ ಪ್ರಮುಖ ಕಾರಣವಾಗಿದೆ. ಈ ಉದ್ದೇಶದಿಂದಲೇ ಸಿದ್ದರಾಮಯ್ಯ ಬುಧವಾರ ನಡೆಸಿದ ರಹಸ್ಯ ಸಭೆಯಲ್ಲಿ ಕಾಂಗ್ರೆಸ್ಸಿಗರು ಜೆಡಿಎಸ್‌ನ ಪ್ರಚಾರ ಸಭೆಯಲ್ಲಿ ಭಾಗವಹಿಸಲೇಬೇಕೆಂಬ ಕಟ್ಟಾಜ್ಞೆ ಹೊರಡಿಸಿಲ್ಲ. ಬದಲಾಗಿ ಅವರವರ ವಿವೇಚನೆಗೆ ಬಿಡುವುದರ ಮೂಲಕ ಕಾಂಗ್ರೆಸ್ಸಿಗರು ಸ್ವತಂತ್ರವಾಗಿ ಜೆಡಿಎಸ್‌ ಪರವಾಗಿ ಚುನಾವಣಾ ಪ್ರಚಾರ ನಡೆಸುವಂತೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್‌ ಬೆಂಬಲಿತ ಜೆಡಿಎಸ್‌ ಅಭ್ಯರ್ಥಿ ಎಲ್‌.ಆರ್‌.ಶಿವರಾಮೇಗೌಡ ಅವರ ಉಪಸ್ಥಿತಿಯ ನಡುವೆ ಕಾಂಗ್ರೆಸ್‌ ನಾಯಕರ ಬೆಂಬಲವನ್ನು ಘೋಷಿಸುವಲ್ಲಿ ಸಫ‌ಲರಾಗಿರುವ ಸಿದ್ದರಾಮಯ್ಯ, ಮೊದಲ ಹಂತವಾಗಿ ಕಾಂಗ್ರೆಸ್‌ ಮುಖಂಡರ ಮನವೊಲಿಸುವ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ. ಆದರೆ, ಆಯಾಯ ಕ್ಷೇತ್ರದ ಮಾಜಿ ಶಾಸಕರು ಚುನಾವಣಾ ದಿನದೊಳಗೆ ಹಂತ, ಹಂತವಾಗಿ ಕಾಂಗ್ರೆಸ್‌ ಮನಸ್ಥಿತಿಗಳನ್ನು ಜೆಡಿಎಸ್‌ ಮತಗಳನ್ನಾಗಿ ಪರಿವರ್ತಿಸುವ ಪ್ರಾಮಾಣಿಕ ಪ್ರಯತ್ನವನ್ನು ನಡೆಸುವರೋ ಅಥವಾ ಮತದಾನದ ನಿಲುವನ್ನು ಕಾರ್ಯಕರ್ತರ ವಿವೇಚನೆಗೆ ಬಿಟ್ಟು ಬಿಡುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.