ಜೆಡಿಎಸ್‌ ಜತೆ ಹೊಂದಾಣಿಕೆ ಅನಿವಾರ್ಯ


Team Udayavani, Jun 3, 2018, 6:00 AM IST

180602kpn86.jpg

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಜತೆಗೂಡಿ ಸಮ್ಮಿಶ್ರ ಸರ್ಕಾರ ರಚಿಸುವುದು ಅನಿವಾರ್ಯವಾಗಿತ್ತು. ರಾಷ್ಟ್ರಮಟ್ಟದ ಬೆಳವಣಿಗೆ ಹಿನ್ನೆಲೆಯಲ್ಲಿ ಇದು ಬಿಟ್ಟು ಬೇರೆ ಇರಲಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್‌
ಸಮರ್ಥಿಸಿಕೊಂಡಿದ್ದಾರೆ.

ವಿಧಾನಸಭೆ ಚುನಾವಣೆ ಫ‌ಲಿತಾಂಶದ ನಂತರ ನಡೆದ ಪಕ್ಷದ ಪದಾಧಿಕಾರಿಗಳ ಮೊದಲ ಸಭೆಯಲ್ಲಿ ಮಾತನಾಡಿದ
ಅವರು, ಚುನಾವಣೆಯಲ್ಲಿ ಜೆಡಿಎಸ್‌ ವಿರುದ್ಧವೂ ಹೋರಾಟ ಮಾಡಿದ್ದು ನಿಜ. ಕೆಲವರಿಗೆ ಸರ್ಕಾರ ರಚನೆ ಬಗ್ಗೆ
ಬೇಸರ ಅಥವಾ ನೋವು ಇರಬಹುದು. ಆದರೆ, ಹೈಕಮಾಂಡ್‌ ತೀರ್ಮಾನವನ್ನು ಎಲ್ಲರೂ ಒಪ್ಪಲೇಬೇಕಾಗಿದೆ
ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಅನಿವಾರ್ಯ ಪರಿಸ್ಥಿತಿಯಲ್ಲಿ ಜೆಡಿಎಸ್‌ ಜತೆ ಕೈ ಜೋಡಿಸಿದ್ದೇವೆ. ರಾಷ್ಟ್ರೀಯ ಪಕ್ಷವಾಗಿ ಸಣ್ಣ ಪಕ್ಷದ ಮಾತು
ಕೇಳಬೇಕಾಗಿರುವುದು ನಿಜಕ್ಕೂ ನೋವಿನ ಸಂಗತಿ. ಮುಖ್ಯಮಂತ್ರಿ ಸ್ಥಾನವನ್ನು ಅವರಿಗೇ ಬಿಟ್ಟುಕೊಟ್ಟಿದ್ದೇವೆ
ಎನ್ನುವುದಕ್ಕಿಂತ ಇನ್ನೊಂದು ನೋವಿನ ವಿಷಯ ಏನಿದೆ ಹೇಳಿ ಎಂದು ಪರಮೇಶ್ವರ್‌ ಕಾರ್ಯಕರ್ತರನ್ನೇ ಪ್ರಶ್ನಿಸಿದರು
ಎಂದು ಹೇಳಲಾಗಿದೆ.

ಪ್ರಮುಖ ಖಾತೆಗಳನ್ನು ಜೆಡಿಎಸ್‌ನವರೇ ಇಟ್ಟುಕೊಂಡಿದ್ದಾರೆ. ಅದಕ್ಕೆ ಕಾಂಗ್ರೆಸ್‌ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಾರದಿರುವುದೇ ಕಾರಣ. ಆದರೆ, ಇನ್ನು ಮುಂದೆ ಆ ರೀತಿ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮ ಮೇಲಿದೆ. ಲೋಕಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಾವು ಗೆದ್ದರೆ, ನಮ್ಮ ಧ್ವನಿ ಗಟ್ಟಿಯಾಗುತ್ತದೆ.

ಐದು ವರ್ಷ ಜೆಡಿಎಸ್‌ಗೆ ಸಿಎಂ ಸ್ಥಾನ ಬಿಟ್ಟು ಕೊಡಲು ಹೈಕಮಾಂಡ್‌ ಸೂಚಿಸಿರುವುದರಿಂದ ಅವರ ಮಾತು ನಾವು
ಕೇಳಲೇಬೇಕಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿಯನ್ನು ಪ್ರಧಾನಿ ಮಾಡಲು ಈ ಹೊಂದಾಣಿಕೆ ಅನಿವಾರ್ಯ ಎಂದರು ಎನ್ನಲಾಗಿದೆ.

ಲೋಕಸಭೆ ಚುನಾವಣೆ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿಯೂ ಜೆಡಿಎಸ್‌ನೊಂದಿಗೆ ಮೈತ್ರಿ
ಮುಂದುವರಿಯಲಿದೆ, ಅದಕ್ಕಾಗಿ ಜಿಲ್ಲಾಮಟ್ಟದಲ್ಲಿ ಜಂಟಿಯಾಗಿ ಹೋರಾಟ ನಡೆಸುವಂತೆ ಪಕ್ಷದ ಪದಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಐದು ವರ್ಷ ಉತ್ತಮ ಆಡಳಿತ ನೀಡಿದ್ದರೂ, ಕಾಂಗ್ರೆಸ್‌ಗೆ
ಹಿನ್ನಡೆಯಾಗಲು ಕಾರಣಗಳೇನೆಂದು ವರದಿ ನೀಡುವಂತೆ ಜಿಲ್ಲಾಧ್ಯಕ್ಷರಿಗೆ ಇದೇ ಸಂದರ್ಭದಲ್ಲಿ ಪರಮೇಶ್ವರ್‌
ಸೂಚಿಸಿದರು.

ಮಂಡ್ಯ, ಶಿವಮೊಗ್ಗ ಹಾಗೂ ಬಳ್ಳಾರಿ ಲೋಕಸಭಾ ಉಪ ಚುನಾವಣೆಗೆ ಕಾರ್ಯಕರ್ತರು ಸಿದ್ಧತೆ ಮಾಡಿಕೊಳ್ಳಬೇಕು.
ರಾಮನಗರ ಮತ್ತು ಜಮಖಂಡಿ ಉಪ ಚುನಾವಣೆ ಮೈತ್ರಿ ಬಗ್ಗೆ ಹೈಕಮಾಂಡ್‌ ಜತೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಚುನಾವಣೆಯಲ್ಲಿ ಪ್ರಮುಖ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳು ಕಾಂಗ್ರೆಸ್‌ನಿಂದ ದೂರ ಉಳಿದಿರುವುದಕ್ಕೆ ಕಾರಣ ಹುಡುಕಿ, ಆ ಸಮುದಾಯಗಳ ವಿಶ್ವಾಸ ಗಳಿಸಿ ಎಂದು ತಿಳಿಸಿದರು ಎನ್ನಲಾಗಿದೆ.

ಕಾರ್ಯಕ್ರಮದಲ್ಲಿ ಇತ್ತೀಚೆಗೆ ನಿಧನರಾದ ಜಮಖಂಡಿ ಶಾಸಕ ಸಿದ್ದು ನ್ಯಾಮಗೌಡ ಅವರಿಗೆ ಶ್ರದ್ಧಾಂಜಲಿ
ಅರ್ಪಿಸಲಾಯಿತು. ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿರುವ ಪರಮೇಶ್ವರ್‌ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ನಿಗಮ ಮಂಡಳಿಗೆ ಶೀಘ್ರ ನೇಮಕ
ಹೊಸ ಸರ್ಕಾರ ರಚನೆಯಾಗಿರುವುದರಿಂದ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದ ಕಾರ್ಯಕರ್ತರಿಗೆ ನಿಗಮ
ಮಂಡಳಿಯಲ್ಲಿ ಸ್ಥಾನ ಕಲ್ಪಿಸುವ ಭರವಸೆ ನೀಡಿರುವ ಪರಮೇಶ್ವರ್‌, ಜಿಲ್ಲಾಮಟ್ಟದ ಕಾರ್ಯಕರ್ತರ ಪಟ್ಟಿ
ನೀಡುವಂತೆ ಜಿಲ್ಲಾಧ್ಯಕ್ಷರಿಗೆ ನಿರ್ದೇಶಿಸಿದರು. ವಿಧಾನಸಭೆ ಚುನಾವಣೆಗೆ ಟಿಕೆಟ್‌ ಪಡೆದು ಸೋತವರು, ಮಾಜಿ
ಶಾಸಕರು, ಹಿಂದಿನ ಸರ್ಕಾರದ ಅವಧಿಯಲ್ಲಿ ನಿಗಮ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ಅನುಭವಿಸಿದವರಿಗೆ ಮತ್ತೆ
ಅವಕಾಶ ನೀಡಬಾರದು ಎಂದು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಒತ್ತಾಯಿಸಿದರು.

ವಿಧಾನಸಭೆ ಚುನಾವಣೆಯಲ್ಲಿ ಸೋಲಿಗೆ ಕಾರಣವಾದ ವರದಿ ನೀಡುವಂತೆ ಜಿಲ್ಲಾಧ್ಯಕ್ಷರಿಗೆ ಸೂಚಿಸಲಾಗಿದೆ.
ಮುಂಬರುವ ಚುನಾವಣೆಗೆ ಪಕ್ಷ ಸಂಘಟಿಸಲು ಸೂಚಿಸಲಾಗಿದೆ. ಚುನಾವಣೆಯಲ್ಲಿ ಪ್ರಾಮಾಣಿಕವಾಗಿ ದುಡಿದವರ ಪಟ್ಟಿ ನೀಡುವಂತೆ ಸೂಚಿಸಲಾಗಿದ್ದು, ನಿಗಮ ಮಂಡಳಿಗೆ ಶೀಘ್ರವೇ ನೇಮಕ ಮಾಡಲಾಗುವುದು.

– ಡಾ.ಜಿ. ಪರಮೇಶ್ವರ್‌, ಉಪ ಮುಖ್ಯಮಂತ್ರಿ

ಲಕ್ಷ್ಮೀ ಹೆಬ್ಟಾಳ್ಕರ್‌ ಸಚಿವರಾಗುವುದಕ್ಕೆ ನಮ್ಮ ವಿರೋಧವಿಲ್ಲ. ಸಚಿವ ಸ್ಥಾನಕ್ಕಾಗಿ ನಾವು ಯಾರಿಗೂ ಕೇಳಿಲ್ಲ. ಯಾರಿಗೂ ವಿರೋಧ ವ್ಯಕ್ತಪಡಿಸಿಲ್ಲ. ಇಂತದ್ದೇ ಖಾತೆ ನೀಡಿ ಎಂದು ಬೇಡಿಕೆ ಇಟ್ಟಿಲ್ಲ. ಅದನ್ನು ರಾಹುಲ್‌ ಗಾಂಧಿ ತೀರ್ಮಾನಿಸುತ್ತಾರೆ. ಯಾವ ಖಾತೆಕೊಟ್ಟರೂ ನಿಭಾಯಿಸಲು ಸಿದ್ಧ 
– ಸತೀಶ ಜಾರಕಿಹೊಳಿ, ಮಾಜಿ ಸಚಿವ

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.