ಕೋಲಾರಕ್ಕೆ ಬಂತು ಕೆ.ಸಿ.ವ್ಯಾಲಿ ನೀರು


Team Udayavani, Jun 3, 2018, 6:55 AM IST

ban03061806medn.jpg

ಕೋಲಾರ: ಹಲವು ಹೋರಾಟಗಳ ನಂತರ ಕೊನೆಗೂ ಕೆ.ಸಿ.ವ್ಯಾಲಿ ಯೋಜನೆಯಡಿ ಜಿಲ್ಲೆಗೆ ನೀರು ಹರಿದು
ಬಂದಿದೆ. ಈ ಯೋಜನೆಯಲ್ಲಿ ಮೊಟ್ಟ ಮೊದಲ ಬಾರಿಗೆ ತಾಲೂಕಿನ ಲಕ್ಷ್ಮೀಸಾಗರ ಕೆರೆಗೆ ನೀರು ಹರಿಯಿತು.

ಸುಮಾರು 55 ಕಿ.ಮೀ.ದೂರ ಪೈಪ್‌ಗಳ ಮೂಲಕ ಹಾದು ಬಂದ ನೀರು,ಶನಿವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ
ಲಕ್ಷ್ಮೀಸಾಗರ ಕೆರೆಯ ಬಳಿ ಉಕ್ಕಿ ಹರಿಯುತ್ತಿದ್ದಂತೆ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ
ಅಭಿಯಂತರ ವೆಂಕಟೇಶ್‌ ನೇತೃತ್ವದಅಧಿಕಾರಿಗಳು ಪೂಜೆ ಸಲ್ಲಿಸಿ, ಹೂ ಚೆಲ್ಲಿ, ಕೈಮುಗಿದು ಸ್ವಾಗತಿಸಿದರು. ಜನ
ಸಂತೋಷದಿಂದ ಕುಣಿದಾಡಿದರು.

2013ರಲ್ಲಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ, ಪ್ರಣಾಳಿಕೆಯ ಭರವಸೆಗೆ ತಕ್ಕಂತೆ ಕೋಲಾರಕ್ಕೆ ಕೆ.ಸಿ.ವ್ಯಾಲಿ ಯೋಜನೆಯಡಿ ಶುದ್ದೀಕರಿಸಿದ ತ್ಯಾಜ್ಯ ನೀರನ್ನು ಕೆರೆಗಳಿಗೆ ತುಂಬಿಸಿ, ಅಂತರ್ಜಲ
ಹೆಚ್ಚಿಸಲು ಮುಂದಾಯಿತು. 2016ರ ಮೇ 30 ರಂದು ನರಸಾಪುರ ಕೆರೆಯಂಗಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂದಿನಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಗುದ್ದಲಿ ಪೂಜೆ ನೆರವೇರಿಸಿದರು. ಆರಂಭದಲ್ಲಿ ಕುಂಟುತ್ತಾ ಸಾಗಿದ್ದ ಯೋಜನೆ ರಮೇಶ್‌ ಕುಮಾರ್‌ ಉಸ್ತುವಾರಿ ಸಚಿವರಾಗುತ್ತಿದ್ದಂತೆಯೇ ಚುರುಕುಕಂಡಿತು. ಪ್ರತಿಫ‌ಲವಾಗಿ ನಿರೀಕ್ಷೆಗೂ ಮೀರಿ ಟೆಂಡರ್‌ನಲ್ಲಿ ಸೂಚಿಸಿದ್ದಕ್ಕಿಂತಲೂ ಒಂದು ತಿಂಗಳು ಮೊದಲೇ ಕೋಲಾರದ ಲಕ್ಷ್ಮೀಸಾಗರ ಕೆರೆಗೆ ನೀರು ಹರಿದು ಬರುವಂತಾಗಿದೆ.

52.5 ಕಿ.ಮೀ.ಹರಿದು ಬಂದ ನೀರು:
ಬೆಳ್ಳಂದೂರು ಎಸ್‌ಟಿಪಿಯಿಂದ ವರ್ತೂರು ಎಸ್‌ಟಿಪಿವರೆಗೂ ಸುಮಾರು 10 ಕಿ.ಮೀ, ವರ್ತೂರು ಎಸ್‌ಟಿಪಿಯಿಂದ ಲಕ್ಷ್ಮೀಸಾಗರ ಕೆರೆವರೆಗೂ 40 ಕಿ.ಮೀ. ದೂರದವರೆಗೆ ಪೈಪ್‌ಲೈನ್‌ ಮೂಲಕವೇ ನೀರು ಹರಿದು ಬಂದು ಕೆರೆ
ಸೇರಿತು. ಲಕ್ಷ್ಮೀಸಾಗರ ಕೆರೆಯಿಂದ ಇನ್ನೂ 126 ಕಿ.ಮೀ.ದೂರ ಈ ನೀರು ಕೆರೆಯಿಂದ ಕೆರೆಗೆ ಹರಿದು
ಸಾಗಬೇಕಾಗಿದೆ. ಕೋಲಾರ ಜಿಲ್ಲೆಯ ಗಡಿ ಗ್ರಾಮ ನಂಗಲಿವರೆಗೂ 130 ಕೆರೆಗಳನ್ನು ತುಂಬಿಸುತ್ತಾ ಕೆ.ಸಿ.ವ್ಯಾಲಿ ನೀರು ಹರಿಯಲು ಒಂದು ವರ್ಷ ಅಗತ್ಯವೆಂದು ಅಧಿಕಾರಿಗಳು ವಿವರಿಸುತ್ತಾರೆ.

ಪ್ರಸ್ತುತ ಕೇವಲ ಐದನೇ ಒಂದು ಭಾಗದ ನೀರನ್ನು ಮಾತ್ರವೇ ಪ್ರಾಯೋಗಿ ಕವಾಗಿ ಪೈಪ್‌ಗ್ಳಲ್ಲಿ ಹರಿಸುತ್ತಿರುವುದರಿಂದ ಸೋಮವಾರದೊಳಗೆ ಲಕ್ಷ್ಮೀಸಾಗರ ಕೆರೆ ತುಂಬಲಿದೆ. ಒಂದು ವಾರದೊಳಗೆ ಮಧ್ಯ ದಲ್ಲಿರುವ ಎರಡು ಮೂರು ಚಿಕ್ಕ ಕೆರೆಗಳು ತುಂಬಿದ ನಂತರ ನೀರು ನರಸಾಪುರ ಕೆರೆಗೆ ಹರಿಯಲಿದೆ. ನರಸಾಪುರ ಸೇರಿದಂತೆ ಆರು ಲಿಫ್ಟ್ ಕೇಂದ್ರಗಳ ಕಾಮಗಾರಿಯೂ ಪೂರ್ಣಗೊಳ್ಳುತ್ತಿದ್ದು, ಯಂತ್ರಗಳ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದೆ.

ಕಣ್ಣೀರಿಟ್ಟ ರಮೇಶ್‌ಕುಮಾರ್‌
ಕೆ.ಸಿ.ವ್ಯಾಲಿ ನೀರನ್ನು ನೋಡುತ್ತಿದ್ದಂತೆ ಭಾವುಕರಾದ ವಿಧಾನಸಭಾಧ್ಯಕ್ಷ ರಮೇಶ್‌ ಕುಮಾರ್‌, ಕಣ್ಣೀರಿಡುತ್ತಲೇ 
“ಇಂತಹ ಒಳ್ಳೆಯ ಕೆಲಸಕ್ಕಾಗಿ ನನ್ನ ತಾಯಿ ನನಗೆ ಜನ್ಮ ನೀಡಿದ್ದರು’ ಎಂದರು.

ಶನಿವಾರ ತಾಲೂಕಿನ ಲಕ್ಷ್ಮೀಸಾಗರ ಕೆರೆಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಯೋಜನೆ ಜಾರಿಗೆ ಬಂದ ಹಲವಾರು ಅಡ್ಡಿ ಆತಂಕಗಳನ್ನು ಸ್ಮರಿಸಿದರು. ಕೋಲಾರ ಜಿಲ್ಲೆಯ ಜನತೆ ನೀರಿಗಾಗಿ ಹಲವಾರು ವರ್ಷಗಳಿಂದ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಬರದಿಂದ ತತ್ತರಿಸಿರುವ ಇಲ್ಲಿನ ಅಂತರ್ಜಲವೂ 1,500 ಅಡಿಗಳಿಗೆ ತಲುಪಿದೆ. ಅಲ್ಲಿ ಸಿಗುವ ನೀರು ವಿಷವಾಗಿದೆ. ತಾಯಿಯ ಎದೆಯ ಹಾಲಲ್ಲೂ ವಿಷವಿದೆ ಎಂದು ತಜ್ಞರು ತಿಳಿಸುವಷ್ಟರ ಮಟ್ಟಿಗೆ ಪರಿಸ್ಥಿತಿ ವಿಕೋಪಕ್ಕೆಹೋಗಿದೆ ಎಂದರು. ಜೂ.7ರಂದು ಮುಖ್ಯಮಂತ್ರಿಗ ಳಿಂದ ಯೋಜನೆಗೆ ಚಾಲನೆ ಸಿಗುವ ಸಾಧ್ಯತೆ ಇದೆ.

ಏನಿದು ಕೆ.ಸಿ ವ್ಯಾಲಿ?
ಬೆಂಗಳೂರಿನ ಕೋರಮಂಗಲ ಚಲ್ಲಘಟ್ಟ ಭಾಗದಲ್ಲಿ ಪ್ರತಿ ವರ್ಷವೂ ಸುಮಾರು 5 ಟಿಎಂಸಿ ತ್ಯಾಜ್ಯ ನೀರನ್ನು
ಸಂಸ್ಕರಿಸಿ ತಮಿಳುನಾಡಿನತ್ತ ಕಾಲುವೆಯಲ್ಲಿ ಹರಿಸಲಾಗುತ್ತಿತ್ತು. ಇದೇ ನೀರನ್ನು ಎರಡು ಬಾರಿ ಸಂಸ್ಕರಿಸಿ ಕೋರಮಂಗಲ ಚಲ್ಲಘಟ್ಟ ವ್ಯಾಲಿ ಎಂಬ ಹೆಸರಿನ ಯೋಜನೆಯಡಿ ಕೋಲಾರದ 130 ಕೆರೆಗಳಿಗೆ ಹರಿಸಲು ಸುಮಾರು 1,342 ಕೋಟಿ ರೂ.ಗಳ ವೆಚ್ಚದ ಯೋಜನೆಯನ್ನು ರೂಪಿಸಲಾಗಿತ್ತು. ಕೋಲಾರ ಜಿಲ್ಲೆಯ 125 ಮತ್ತು ಚಿಂತಾಮಣಿ ತಾಲೂಕಿನ 5 ಕೆರೆಗಳು ಸೇರಿದಂತೆ ಒಟ್ಟು 130 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪಾಲಾರ್‌ ನದಿ ಕಣಿವೆ ಮಾರ್ಗದಲ್ಲಿಯೇ ಹರಿಸುವ ಯೋಜನೆಯಿದು. ಕೋಲಾರ ಜಿಲ್ಲೆಯ ಬಹುತೇಕ ಎಲ್ಲಾ ತಾಲೂಕುಗಳ ಎಲ್ಲಾ
ದೊಡ್ಡಕೆರೆಗಳಿಗೂ ನೀರು ಹರಿಸುವುದು ಈ ಯೋಜನೆಯ ವಿಶೇಷ.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.