ರೈತರ ಬೆಳೆ ಸ್ವಾತಂತ್ರ್ಯ ಕಸಿಯುತ್ತಾ ಪ್ರಾಧಿಕಾರ?


Team Udayavani, Jun 3, 2018, 6:00 AM IST

cauvery-water-management-au.jpg

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕಾವೇರಿ ಕಣಿವೆ ಪ್ರದೇಶದ ರೈತರ ಪಾಲಿಗೆ ಮರಣ ಶಾಸನವಾಗಿ ಪರಿಣಮಿಸಲಿದೆ ಎಂಬ ಆತಂಕ ಮಾರ್ದನಿಸುತ್ತಿದೆ. ಕಾವೇರಿ, ಕಬಿನಿ, ಹೇಮಾವತಿ ನದಿ ನೀರು ಇದೀಗ ಪ್ರಾಧಿಕಾರದ ವಶವಾಗಿರುವು ದಿಂದ ಬೆಳೆಗಳಿಗೆ, ಕುಡಿಯಲು ಹಂಚಿಕೆಯಾಗಿರುವಷ್ಟು ನೀರಿನ ಪ್ರಮಾಣಕ್ಕಿಂತ ಒಂದಿಷ್ಟು ನೀರನ್ನು ಹೆಚ್ಚು ಬಳಸಲು ಸಾಧ್ಯವಾಗದಂತಹ ಕಠೊರ ಪರಿಸ್ಥಿತಿ ರೈತರಿಗೆ ಎದುರಾಗುವುದು ನಿಶ್ಚಿತ.

ಪ್ರಸಕ್ತ ಮುಂಗಾರು ಆರಂಭದಿಂದಲೇ ನೀರು ಹಂಚಿಕೆ ಪ್ರಕ್ರಿಯೆ ಶುರುವಾಗಲಿದ್ದು, ಎಲ್ಲಾ ಜಲಾಶಯಗಳಲ್ಲಿರುವ ನೀರಿನ ಮಟ್ಟ, ಜಲಾಶಯಗಳಿಗೆ ಹರಿದುಬರುತ್ತಿರುವ ಒಳಹರಿವಿನ ಪ್ರಮಾಣ, ಹೊರಹೋಗುವ ನೀರಿನ ಲೆಕ್ಕದ ಮೇಲೆ ಪ್ರಾಧಿಕಾರ ಇದೀಗ ಕಣ್ಣಿಟ್ಟಿದೆ. ಆ ಲೆಕ್ಕದ ಆಧಾರದ ಮೇಲೆ ತಿಂಗಳಿಗೆ ಎಷ್ಟು ನೀರು ಹರಿಸಬೇಕೋ ಅದನ್ನು ದಿನದ ಲೆಕ್ಕದಲ್ಲಿ ಬಿಡುಗಡೆ ಮಾಡಲು ಶುರು ಮಾಡಲಿದೆ.

ಬೆಳೆ ಸ್ವಾತಂತ್ರ್ಯವಿಲ್ಲ:
ಇನ್ನು ಮುಂದೆ ರೈತರು ತಮಗಿಷ್ಟ ಬಂದ ಬೆಳೆ ಬೆಳೆಯುವಂತಿಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿರುವುದರಿಂದ ಇಷ್ಟಾನುಸಾರ ಬೆಳೆ ಬೆಳೆಯುವ ಸ್ವಾತಂತ್ರ್ಯ ಕಳೆದುಕೊಂಡಿದ್ದಾರೆ. ಭತ್ತದ ಬೆಳೆಗೆ 7.67 ಲಕ್ಷ ಎಕರೆ ಪ್ರದೇಶವನ್ನು ಕಾವೇರಿ ಜಲಾನಯನ ಪ್ರದೇಶದಲ್ಲಿ ತೋರಿಸಿದ್ದರೆ, 40 ಸಾವಿರ ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆಯಲಷ್ಟೇ ಅವಕಾಶವಿದೆ. ಅರೆ ನೀರಾವರಿ ಪ್ರದೇಶದಲ್ಲಿ 7.15 ಲಕ್ಷ ಎಕರೆ, ಬೇಸಿಗೆ ಬೆಳೆ ಅರೆ ನೀರಾವರಿ ಪ್ರದೇಶ 3.62 ಲಕ್ಷ ಎಕರೆ ಸೇರಿ 18.85 ಲಕ್ಷ ಎಕರೆ ಪ್ರದೇಶವನ್ನು ನಮೂದಿಸಿದ್ದರೂ, ಪ್ರಸ್ತುತ 32 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಬೆಳೆಯುತ್ತಿದ್ದಾರೆ. ಇದಕ್ಕೆಲ್ಲಾ ಮುಂದಿನ ದಿನಗಳಲ್ಲಿ ಕಡಿವಾಣ ಹಾಕಿ 18.85 ಲಕ್ಷ ಎಕರೆ ಪ್ರದೇಶಕ್ಕೆ ಬೆಳೆ ಸೀಮಿತಗೊಳಿಸುವ ಸಾಧ್ಯತೆ ಹೆಚ್ಚಾಗಿದೆ.

ಕುಡಿಯುವ ನೀರಿಗೂ ಕೊಕ್ಕೆ
ನ್ಯಾಯಾಧಿಕರಣ ಕುಡಿಯುವ ನೀರಿಗೆ ಕೇವಲ 3 ಟಿಎಂಸಿಯಷ್ಟು ನೀರನ್ನು ಮೀಸಲಿಟ್ಟಿದೆ. ಆದರೆ, ನಮಗೆ ಅಗತ್ಯವಿರುವ ನೀರಿನ ಪ್ರಮಾಣ 43.78 ಟಿಎಂಸಿ. ಮೈಸೂರು ಜಿಲ್ಲೆಗೆ ವಾರ್ಷಿಕ 4.76 ಟಿಎಂಸಿ, ಮಂಡ್ಯ ಜಿಲ್ಲೆಗೆ 6.35 ಟಿಎಂಸಿ, ರಾಮನಗರ ಜಿಲ್ಲೆಗೆ 3.2 ಟಿಎಂಸಿ, ಚಾಮರಾಜನಗರ ಜಿಲ್ಲೆಗೆ 5.07 ಟಿಎಂಸಿ, ಹಾಸನ ಜಿಲ್ಲೆಗೆ 3.8 ಟಿಎಂಸಿ ಹಾಗೂ ಬೆಂಗಳೂರು ನಗರಕ್ಕೆ ವಾರ್ಷಿಕ 20.63 ಟಿಎಂಸಿ ನೀರಿನ ಅಗತ್ಯವಿದೆ. 
ಹೀಗಾಗಿ, ಈ ಭಾಗದ ರೈತರು ಮುಂದಿನ ದಿನಗಳಲ್ಲಿ ಸಂಕಷ್ಟದ ದಿನಗಳನ್ನು ಎದುರಿಸಬೇಕಾಗಬಹುದು.

ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಿಂದ ರಾಜ್ಯಕ್ಕೆ ಹೆಚ್ಚಿನ ತೊಂದರೆಯಾಗುವ ಸಾಧ್ಯತೆಗಳಿಲ್ಲ. ಸುಪ್ರೀಂಕೋರ್ಟ್‌ನ ಆದೇಶವನ್ನು ಯಾವುದಾದರೂ ಸ್ವಾಯತ್ತ ಸಂಸ್ಥೆ ಅನುಷ್ಠಾನಗೊಳಿಸಬೇಕಾಗುತ್ತದೆ. ಅದರಂತೆ ಪ್ರಾಧಿಕಾರ ಅಸ್ತಿತ್ವಕ್ಕೆ ಬಂದಿದೆ. ಒಂದೊಮ್ಮೆ ರಾಜ್ಯದ ಹಿತಾಸಕ್ತಿಗೆ ವಿರುದ್ಧವಾದ ಬೆಳವಣಿಗೆ ನಡೆದರೆ ಅದನ್ನು ಪ್ರಶ್ನಿಸಲು ಅವಕಾಶವಿದೆ. ಜತೆಗೆ ರಾಜ್ಯದ ಪ್ರತಿನಿಧಿಗಳು ಸಹ ಪ್ರಾಧಿಕಾರದಲ್ಲಿರುತ್ತಾರೆ. ತಮಿಳುನಾಡಿಗೆ ಹಂಚಿಕೆಯಾದ ಪಾಲಿನ ನೀರು ಹರಿಸಿದರೆ ನಂತರ ಯಾವ ಪ್ರಾಧಿಕಾರವೂ ಯಾವುದೇ ರೀತಿಯಲ್ಲಿ ಅಡ್ಡಿಪಡಿಸಲು ಅವಕಾಶವಿರುವುದಿಲ್ಲ.
– ಮಧುಸೂಧನ ನಾಯಕ್‌, ಮಾಜಿ ಅಡ್ವೋಕೇಟ್‌ ಜನರಲ್‌

ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಿಂದ ರಾಜ್ಯಕ್ಕೆ ಸ್ವಲ್ಪ ಹಿನ್ನಡೆಯಾಗುವ ಸಂಭವವಿದೆ. ರಾಜ್ಯ ಸರ್ಕಾರದ ಅಧೀನದಲ್ಲಿದ್ದರೆ ಪರಿಸ್ಥಿತಿಗೆ ಅನುಗುಣವಾಗಿ ನೀರು ಹರಿಸಲು ಅನುಕೂಲವಾಗುತ್ತಿತ್ತು. ಒಂದೊಮ್ಮೆ ಕಾಲಮಿತಿಯೊಳಗೆ ನಿಗದಿತ ಪ್ರಮಾಣದ ನೀರು ಹರಿಸಲು ಸಾಧ್ಯವಾಗದಿದ್ದರೆ ಅದನ್ನು ಇನ್ನೊಂದು ಅವಧಿಯಲ್ಲಿ ಹರಿಸಿ ಸಮತೋಲನ ಕಾಯ್ದುಕೊಳ್ಳಲು ಅವಕಾಶವಿರುತ್ತಿತ್ತು. ಉತ್ತಮ ಮಳೆಯಾಗದ ಸಂದರ್ಭದಲ್ಲೂ ನಿಗದಿತ ಪ್ರಮಾಣದ ನೀರು ಹರಿಸಬೇಕು ಎಂದು ಸೂಚಿಸಿದರೆ ತೊಂದರೆಯಾಗಲಿದೆ. ಇದರಿಂದ ರೈತರು, ಜನರ ಹಿತ ಕಾಪಾಡುವುದು ಕಷ್ಟಕರವಾಗಬಹುದು.
– ಅಶೋಕ್‌ ಹಾರ್ನಳ್ಳಿ, ಮಾಜಿ ಅಡ್ವೋಕೇಟ್‌ ಜನರಲ್‌

ಕೇಂದ್ರ ಸರ್ಕಾರವು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚಿಸಿರುವುದು ಅಮ್ಮಾ ಸರ್ಕಾರ ಮತ್ತು ರಾಜ್ಯದ ರೈತರಿಗೆ ಸಂದ ಅತಿದೊಡ್ಡ ಜಯ. ತಮಿಳುನಾಡು ಮತ್ತು ರೈತರ ಹಕ್ಕು ಮತ್ತೆ ಸಿಕ್ಕಿದಂತಾಯಿತು.
– ಕೆ. ಪಳನಿಸ್ವಾಮಿ, ತಮಿಳುನಾಡು ಮುಖ್ಯಮಂತ್ರಿ
 

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.