ಡಿಕೆಶಿಯಿಂದ “ಶತ್ರು ಸಂಹಾರ ಯಾಗ’
Team Udayavani, Jun 4, 2018, 6:45 AM IST
ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿ ಬಯಸಿದ ಖಾತೆ ಸಿಗದೆ
ಬೇಸರಗೊಂಡಿದ್ದಾರೆ ಎಂದು ಹೇಳಲಾದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ತಮಿಳುನಾಡಿನ ತಿರವಳ್ಳೂರು ಬಳಿಯ ವಿಷ್ಣು ದೇವಾಲಯದಲ್ಲಿ “ಶತ್ರು ಸಂಹಾರ ಯಾಗ’ ಮಾಡಿದ್ದಾರೆ.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿ ಸಂಪುಟ ವಿಸ್ತರಣೆಯ ಹಗ್ಗ ಜಗ್ಗಾಟ ನಡೆದಿರುವ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ವಿಷ್ಣು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಹೋಮ-ಹವನದಲ್ಲಿ ಪಾಲ್ಗೊಂಡಿರುವುದು ಕುತೂಹಲ ಮೂಡಿಸಿದೆ.
ಶನಿವಾರ ಕುಟುಂಬ ಸಮೇತ ದೇವಾಲಯಕ್ಕೆ ತೆರಳಿದ ಅವರು, ಹಿರಿಯ ಜ್ಯೋತಿಷಿಗಳ ಮಂದಾಳತ್ವದಲ್ಲಿ ಶತ್ರು ಸಂಹಾರ ಯಾಗ ಮಾಡಿಸಿದರು.
ಈ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಯಾರೊಂದಿಗೂ ಮಾತನಾಡದೆ ಪೂಜೆ ಕಾರ್ಯದಲ್ಲಿ ಮಗ್ನರಾಗಿದ್ದರು
ಎಂದು ಹೇಳಲಾಗಿದೆ. ಸಂಪುಟ ವಿಸ್ತರಣೆಯಲ್ಲಿ ಡಿ.ಕೆ. ಶಿವಕುಮಾರ್ ಇಂಧನ ಖಾತೆ ಬಯಸಿದ್ದರು. ಆದರೆ, ಆ
ಖಾತೆ ಜೆಡಿಎಸ್ ಪಾಲಾಯಿತು. ಸಮ್ಮಿಶ್ರ ಸರ್ಕಾರ ರಚನೆ ವಿಚಾರದಲ್ಲಿ ಕಾಂಗ್ರೆಸ್-ಜೆಡಿಎಸ್ ನಡುವೆ ನಡೆದ
ಪ್ರಮುಖ ಮಾತುಕತೆ ಸಂದರ್ಭದಲ್ಲೂ ಡಿ.ಕೆ.ಶಿವಕುಮಾರ್ ಅವರನ್ನು ದೂರ ಇಡಲಾಗಿತ್ತು. ಇದರಿಂದ ಅವರು ಬೇಸರಗೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ