ಹಲವೆಡೆ ಮುಂದುವರಿದ ಮಳೆ ಅವಘಡ
Team Udayavani, Jun 4, 2018, 6:05 AM IST
ಬೆಂಗಳೂರು/ಮಂಗಳೂರು: ರಾಜಧಾನಿ ಬೆಂಗಳೂರು, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಭಾನುವಾವೂ ಮಳೆ
ಯಾಗಿದೆ. ಈ ಮಧ್ಯೆ, ಭಾನುವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಚಿಕ್ಕೋಡಿಯಲ್ಲಿ
ರಾಜ್ಯದಲ್ಲೇ ಗರಿಷ್ಠ, 7 ಸೆಂ.ಮೀ. ಮಳೆ ಸುರಿಯಿತು.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಗೊಂದಿಹಳ್ಳಿಯಲ್ಲಿ ರೇಷ್ಮೆ ಶೆಡ್ನಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಅವ
ಘಡಕ್ಕೆ ರೆಡ್ಡಪ್ಪ (58) ಎಂಬುವರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಮಳೆ ಬಂದಾಗ ಬೀಸಿದ ಬಾರಿ ಗಾಳಿಗೆ ವಿದ್ಯುತ್ ಸಮಸ್ಯೆ ಉಂಟಾಗಿತ್ತು. ಅದನ್ನು ಸರಿಪಡಿಸುವ ವೇಳೆ ವಿದ್ಯುತ್ ಶಾಕ್ ಹೊಡೆಯಿತು.
ಶಿವಮೊಗ್ಗದಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಗೆ ಹಲವೆಡೆ ಸಂಪರ್ಕ ರಸ್ತೆ ಕಡಿದುಹೋಗಿದ್ದು, ಜನರು ಪರದಾಡುವಂತಾಯಿತು. ತಾಲೂಕಿನ ಹೊರಬೈಲು ಗ್ರಾಮದ ಸಂಪರ್ಕ ರಸ್ತೆ ಬಂದ್ ಆಗಿದ್ದು, ರಸ್ತೆಯಲ್ಲಿ ನಾಲ್ಕೈದು ಅಡಿ ನೀರು ಹರಿಯುತ್ತಿತ್ತು. ಸುತ್ತಮುತ್ತಲ ಗದ್ದೆ, ತೋಟಗಳಿಗೂ ನೀರು ನುಗ್ಗಿದ್ದು, ಹಲವೆಡೆ ಶುಂಠಿ ಗದ್ದೆಗಳಲ್ಲಿ ನೀರು ನುಗ್ಗಿದ ಪರಿಣಾಮ ಬಿತ್ತನೆ ಮಾಡಿದ್ದ ಶುಂಠಿ, ಮೆಕ್ಕೆಜೋಳ ಕೊಚ್ಚಿ ಹೋಗಿದೆ.
ಕರಾವಳಿಯ ಕೆಲವೆಡೆಯೂ ಮಳೆಯಾಗಿದ್ದು, ಕೆದೂರಿನಲ್ಲಿ ಸಿಡಿಲು ಬಡಿದು ಕೆಲ ಮನೆಗಳಿಗೆ ಹಾನಿಯಾಗಿದೆ. ಮಂಗಳವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆ ಯಂತೆ ಕರಾವಳಿ ಹಾಗೂ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜಲಾಶಯಗಳ ಒಳಹರಿವು ಹೆಚ್ಚಳ
ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಕಣಿವೆಯ ಜಲಾಶಯಗಳಿಗೆ ನೀರು ಹರಿದು ಬರುತ್ತಿದೆ.
ಕೆಆರ್ಎಸ್ನ ನೀರಿನ ಮಟ್ಟ (124.80 ಅಡಿ ಗರಿಷ್ಠ) 75.55 ಅಡಿಗಳಿಗೆ ಏರಿದೆ. ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದ(2284.00 ಅಡಿ ಗರಿಷ್ಠ) ನೀರಿನ ಮಟ್ಟ 2258.40 ಅಡಿಗೆ ಏರಿದೆ. ಜಲಾಶಯ ಭರ್ತಿಯಾಗಲು 25.60 ಅಡಿ ಬಾಕಿ ಇದೆ.
ಹಾಸನ ಜಿಲ್ಲೆಯ ಹೇಮಾವತಿಯಲ್ಲಿ (2922.00 ಅಡಿ ಗರಿಷ್ಠ) 2867.50 ಅಡಿ ನೀರು ಸಂಗ್ರಹವಿದ್ದು, ಭರ್ತಿಯಾಗಲು 54.50 ಅಡಿ ಬಾಕಿ ಇದೆ. ಕೊಡಗಿನ ಹಾರಂಗಿಯಲ್ಲಿ (2859.00 ಅಡಿ ಗರಿಷ್ಠ) 2784.23 ಅಡಿ ನೀರು ಸಂಗ್ರಹವಿದ್ದು,ಭರ್ತಿಯಾಗಲು 74.77 ಅಡಿ ಬಾಕಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
Rural Life: ಗ್ರಾಮೀಣ ಬದುಕಿನ ಮೆಲುಕು