ನಷ್ಟದ ನೆಪ: ಹಾಲು ಖರೀದಿ ದರ ಇಳಿಕೆ


Team Udayavani, Jun 6, 2018, 6:00 AM IST

z-43.jpg

ಬೆಂಗಳೂರು: ಕೆಎಂಎಫ್ನ ಹಾಲು ಸಂಗ್ರಹಣೆಯಲ್ಲಿ ಏರಿಕೆಯಾಗುತ್ತಿದ್ದರೂ, ಹಾಲು ಮಾರಾಟ ಪ್ರಮಾಣದಲ್ಲಿ ನಿರೀಕ್ಷಿತ ಏರಿಕೆಯಾಗಿಲ್ಲ. ನಷ್ಟದ ಭೀತಿಯಿಂದ ಹಾಲು ಒಕ್ಕೂಟಗಳು ಇದರ ಭಾರವನ್ನು ಹೈನುಗಾರರ ಮೇಲೆ ಹಾಕಲು ಹೊರಟಿವೆ.  ಮಾರಾಟದ ಕೊರತೆ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರ ಒಕ್ಕೂಟಗಳು ರೈತರಿಂದ ಖರೀದಿಸುವ ಹಾಲಿನ ದರದಲ್ಲಿ ಇಳಿಕೆ ಮಾಡಲಾರಂಭಿಸಿವೆ.

ಬೆಂಗಳೂರು,  ಕೋಲಾರ, ತುಮಕೂರು ಹಾಲು ಉತ್ಪಾದಕರ ಒಕ್ಕೂಟಗಳಲ್ಲಿ ಹಾಲು ಖರೀದಿ ದರ ಇಳಿಕೆಯಾಗಿದ್ದು, ನಷ್ಟ ಭರ್ತಿಗೆ ಇತರ ಒಕ್ಕೂಟಗಳಲ್ಲೂ ಖರೀದಿ ದರ ಇಳಿಸುವ ಸಾಧ್ಯತೆ ಇದೆ. ದ.ಕ. ಹಾಲು ಒಕ್ಕೂಟ ದರ ಇಳಿಕೆ ಪ್ರಕಟಿಸಿಲ್ಲ. ಸರಕಾರ ರೈತರಿಗೆ ನೀಡುವ ಐದು ರೂ. ಪ್ರೋತ್ಸಾಹ ಧನದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.

ಮೇ 20ರಂದು 81.68 ಲಕ್ಷ ಲೀಟರ್‌ ಹಾಲು ಸಂಗ್ರಹವಾಗಿದ್ದು, ಇದು ಕೆಎಂಎಫ್ ಇತಿಹಾಸದಲ್ಲಿ ದಾಖಲೆ. ಜೂನ್‌ನಲ್ಲಿ ಹಾಲು ಉತ್ಪಾದನೆ ಇನ್ನಷ್ಟು ಹೆಚ್ಚುವ ನಿರೀಕ್ಷೆಯಿದೆ. ಆದರೆ ಮಾರಾಟ ಪ್ರಮಾಣ ಆಶಾದಾಯಕವಾಗಿಲ್ಲ. ಹಾಲು ಉತ್ಪಾದಕರ ಸಂಘಗಳ ಮೂಲಕ ನಿತ್ಯ ಸುಮಾರು 80 ಲಕ್ಷ ಲೀಟರ್‌ ಹಾಲು ಶೇಖರಣೆಯಾಗುತ್ತದೆ. ಇದರಲ್ಲಿ 36 ಲಕ್ಷ ಲೀಟರ್‌ನಷ್ಟು ಹಾಲು ಮಾತ್ರ ಮಾರಾಟವಾಗುತ್ತಿದೆ. ಹಾಗಾಗಿ ಉಳಿದಿದ್ದನ್ನು ಹಾಲಿನ ಪುಡಿಯಾಗಿ ಪರಿವರ್ತಿಸಲಾಗುತ್ತಿದ್ದು, ಇದಕ್ಕೆ ಹೆಚ್ಚುವರಿಯಾಗಿ ವೆಚ್ಚವಾಗುತ್ತದೆ. ಹಾಲಿನ ಪುಡಿ ಮಾರಾಟ ಕೂಡ ಆಶಾದಾಯಕವಾಗಿಲ್ಲ. ಹಾಗಾಗಿ ಒಕ್ಕೂಟಗಳು ನಷ್ಟ ಪ್ರಮಾಣ ತಗ್ಗಿಸಲು ರೈತರಿಂದ ಖರೀದಿಸುವ ಹಾಲಿನ ದರದಲ್ಲೇ ಇಳಿಕೆ ಮಾಡಲು ಮುಂದಾಗಿವೆ ಎಂದು ಮೂಲಗಳು ತಿಳಿಸಿವೆ.

ವಹಿವಾಟಿಗೆ ಅನುಗುಣವಾಗಿ ಏರಿಳಿತ
ಕೆಎಂಎಫ್ ಅಧೀನದಲ್ಲಿರುವ 14 ಜಿಲ್ಲಾ ಹಾಲು ಒಕ್ಕೂಟಗಳ ಪೈಕಿ 3-4 ಒಕ್ಕೂಟಗಳು ರೈತರಿಂದ ಹಾಲು ಖರೀದಿಸುವ ದರವನ್ನು ಕಡಿಮೆ ಮಾಡಿದ್ದಾರೆ.

ಎಲ್ಲೆಲ್ಲಿ ಇಳಿಕೆ?
ಬೆಂಗಳೂರು ಹಾಲು ಒಕ್ಕೂಟ ವ್ಯಾಪ್ತಿಯಲ್ಲಿ ಬೆಂಗಳೂರು ನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ರಾಮನಗರ ಜಿಲ್ಲೆಯಿದ್ದು, ರೈತರಿಂದ ಖರೀದಿಸುವ ಹಾಲಿನ ದರ 25 ರೂ.ನಿಂದ 23 ರೂ.ಗೆ ಇಳಿಕೆಯಾಗಿದೆ. ಮೇ 23ರಂದು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದು, ಜೂ.1ರಿಂದ ಜಾರಿಗೆ ಬಂದಿದೆ. ಕೋಲಾರ, ತುಮಕೂರು ಒಕ್ಕೂಟಗಳಲ್ಲಿ 1 ರೂ. ಇಳಿಕೆಯಾಗಿದೆ. ಧಾರವಾಡ, ಬೆಳಗಾವಿ, ಶಿವಮೊಗ್ಗದಲ್ಲಿ 21.50 ರೂ. ಗೆ ಖರೀದಿಸಲಾಗಿದ್ದು, ರಾಜ್ಯದಲ್ಲೇ ಅತಿ ಕಡಿಮೆ ದರ ಎನಿಸಿದೆ.

ಮಾರಾಟ ತಂತ್ರಗಾರಿಕೆ ವೈಫ‌ಲ್ಯ
ಕೆಎಂಎಫ್ ಹಾಲು ಗುಣಮಟ್ಟದಿಂದ ಕೂಡಿದ್ದು, ಭಾರೀ ಬೇಡಿಕೆಯಿದೆ. ಆದರೆ ಮಾರುಕಟ್ಟೆ ತಂತ್ರಗಾರಿಕೆ ವೈಫ‌ಲ್ಯ, ಹೊಸ ಪ್ರದೇಶಗಳಲ್ಲಿ ವಹಿವಾಟು ವಿಸ್ತರಣೆ, ಹೊಸ ಗ್ರಾಹಕರನ್ನು ಸೆಳೆಯುವ ಕಾರ್ಯದಲ್ಲೂ ಒಕ್ಕೂಟ ಹಿಂದಿದೆ. ನಗರ ಪ್ರದೇಶದ ಅಪಾರ್ಟ್‌ ಮೆಂಟ್‌ಗಳು, ಹೊಸ ಬಡಾವಣೆಗಳಲ್ಲಿ ಮಳಿಗೆಗಳನ್ನು ತೆರೆಯುವ ಕಾರ್ಯ ನಡೆಯುತ್ತಿಲ್ಲ. ಹಲವೆಡೆ ಬೆಳಗ್ಗೆ 7 ಗಂಟೆ ನಂತರವೇ ಹಾಲು ಸಿಗದ ಸ್ಥಿತಿ ಇದೆ. ಶುಭ ಸಮಾರಂಭಗಳಿಗೆ ಹಾಲು, ಮೊಸರು, ತುಪ್ಪ, ಐಸ್‌ಕ್ರೀಮ್‌ಗಳನ್ನು ಸಕಾಲದಲ್ಲಿ ಪೂರೈಕೆಯಲ್ಲಿನ ವ್ಯತ್ಯಯವೂ ವಹಿವಾಟಿನ ಹಿನ್ನಡೆಗೆ ಕಾರಣವಾಗಿದೆ. ಈ ಲೋಪಗಳನ್ನು ಸರಿಪಡಿಸಿಕೊಂಡು ಮಾರಾಟ ವ್ಯವಸ್ಥೆಯನ್ನು ಸುಧಾರಿಸಿದರೆ ಹೆಚ್ಚಿನ ವಹಿವಾಟು ನಡೆಸಲು ಅವಕಾಶವಿದೆ ಎಂದು ಮೂಲಗಳು ಹೇಳಿವೆ.

ಟಾಪ್ ನ್ಯೂಸ್

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.