ಹೆಲಿಕಾಪ್ಟರ್ ಬಾಡಿಗೆ ಬಿಲ್ ಬಗ್ಗೆ ಸಿಎಸ್ ಕೇಳಿ; BSY ತಿರುಗೇಟು
Team Udayavani, Jun 6, 2018, 1:45 PM IST
ಮೈಸೂರು: ಯಡಿಯೂರಪ್ಪ ಅವರು ಎರಡು ದಿನ ಮುಖ್ಯಮಂತ್ರಿಯಾಗಿ ಹೆಲಿಕಾಪ್ಟರ್ ಹಾರಾಟಕ್ಕೆ 13 ಲಕ್ಷ ರೂ. ಬಿಲ್ ಮಾಡಿದ್ದಾರೆ. ಈ ಹಣಕ್ಕೆ ಯಾರು ಹೊಣೆ ಎಂದು ಕೇಳುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಈ ಪ್ರಶ್ನೆಯನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ
ಕೇಳಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ.
ನಗರದಲ್ಲಿ ಮಾತನಾಡಿ, “ಹೊಸ ಸರ್ಕಾರ ರಚನೆಯಾಗುವವರೆಗೆ ರಾಜ್ಯಪಾಲರ ಆದೇಶದಂತೆ ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರಿದಿದ್ದ ನಾನು,ಇಳಕಲ್ ಮಹಾಂತ ಶಿವಯೋಗಿ ಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆದು, ಸರ್ಕಾರಿ ಗೌರವ ನೀಡಲು ಹೆಲಿಕಾಪ್ಟರ್ ನಲ್ಲಿ ಹೋಗಿ, ಆತ್ಮಹತ್ಯೆ ಮಾಡಿಕೊಂಡ ರೈತನ ಮನೆಗೂ ಭೇಟಿ ನೀಡಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿ, ವಾಪಸ್ ಬೆಂಗಳೂರಿಗೆ ಬಂದಿದ್ದೇನೆ.
ಇದಕ್ಕೆ 13 ಲಕ್ಷ ಬಿಲ್ ಬಂದಿದೆ. ಯಡಿಯೂರಪ್ಪ ಹೆಲಿಕಾಪ್ಟರ್ನಲ್ಲಿ ಹೋಗಿ ದುಂದುವೆಚ್ಚ ಮಾಡಿದ್ದಾರೆ ಎನ್ನುವ ಕುಮಾರ ಸ್ವಾಮಿ ಹೆಲಿಕಾಪ್ಟರ್ ಬಾಡಿಗೆಯಲ್ಲಿ ನಾನು ಕಮೀಷನ್ ಪಡೆದಿರುವಂತೆ ಮಾತನಾಡುತ್ತಿದ್ದಾರೆ. ಅಪ್ಪ-ಮಕ್ಕಳು ಸತ್ಯ ಹರಿಶ್ಚಂದ್ರರಂತೆ ಆಡುವುದನ್ನು ಬಿಟ್ಟು ಬನ್ನಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
“ಹೆಲಿಕಾಪ್ಟರ್ ಬಾಡಿಗೆಯನ್ನು ಸ್ವಂತ ಹಣದಿಂದ ಪಾವತಿಸಲು ಸಿದ್ಧನಿದ್ದೇನೆ. ಆದರೆ, ಈ ಬಗ್ಗೆ ಅನಗತ್ಯ ಗೊಂದಲ ಮೂಡಿಸುವುದು ಬೇಡ. ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇನೆ. ಜೊತೆಗೆ, ಈ ಬಗ್ಗೆ ಬಹಿರಂಗ ಪತ್ರವನ್ನೂ ಬರೆಯುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ