ಮತದಾರರ ನಿರ್ಣಯಕ್ಕೆ ಬದ್ಧ: ಬಿ.ಸಿ.ಪಾಟೀಲ
Team Udayavani, Jun 7, 2018, 6:05 AM IST
ಹಾವೇರಿ: ನನಗೆ ಸಚಿವ ಸ್ಥಾನ ನೀಡದೆ ಕಾಂಗ್ರೆಸ್ ಲಿಂಗಾಯತರನ್ನು ಕಡೆಗಣಿಸಿದೆ ಎಂದು ಸಚಿವಾಕಾಂಕ್ಷಿ, ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ.ಪಾಟೀಲ ತಿಳಿಸಿದ್ದಾರೆ.
ಈ ಕುರಿತು “ಉದಯವಾಣಿ’ ಜತೆ ಮಾತನಾಡಿದ ಅವರು, “ಲಿಂಗಾಯತರು ಹೆಚ್ಚು ಬಿಜೆಪಿ ಬೆಂಬಲಿಸುತ್ತಾರೆ
ಎನ್ನಲಾಗುತ್ತದೆ. ಪಕ್ಷ ಈ ರೀತಿ ಲಿಂಗಾಯತರಿಗೆ ಸ್ಥಾನ ವಂಚಿಸಿದರೆ ಲಿಂಗಾಯತರು ಹೇಗೆ ಕಾಂಗ್ರೆಸ್ನ್ನು ಬೆಂಬಲಿಸುತ್ತಾರೆ? ಲಿಂಗಾಯತರ ವಿಶ್ವಾಸಗಳಿಸುವ ಕೆಲಸ ಕಾಂಗ್ರೆಸ್ ಮಾಡಿಲ್ಲ.
ಉತ್ತರ ಕರ್ನಾಟಕ ಹಾಗೂ ಲಿಂಗಾಯತರನ್ನು ಪಕ್ಷ ಕಡೆಗಣಿಸಿದೆ. ನನಗೆ ಸಚಿವನಾಗುವ ಎಲ್ಲ ಅರ್ಹತೆಗಳೂ ಇವೆ. ವಿರೋಧ ಪಕ್ಷದವರು ನನ್ನನ್ನು ಸೆಳೆಯಲು ಮುಂದಾದರು. ಆಗಲೂ ನಾನು ಪಕ್ಷದ ನಿಷ್ಠೆ ಮೆರೆದಿದ್ದೇನೆ. ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಆಯ್ಕೆಯಾದ ಕಾಂಗ್ರೆಸ್ ಶಾಸಕ ನಾನೊಬ್ಬನೆ. ಹೀಗಾಗಿ ನನಗೇ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ,ಯಾವ ಕಾರಣಕ್ಕೆ ಸಚಿವ ಸ್ಥಾನ ಕೈತಪ್ಪಿದೆ ಎಂಬ ಸ್ಪಷ್ಟ ಮಾಹಿತಿ ಇಲ್ಲ. ನನ್ನ ಕ್ಷೇತ್ರದ ಮತದಾರರು ಮುಂದೆ ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ಅದಕ್ಕೆ ಬಬದ್ಧನಾಗಿರುತ್ತೇನೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ