ಕೊರಳಲ್ಲಿ ಹಾವು ಸುತ್ತಿಕೊಂಡು ಅಧಿಕಾರಿಗಳಿಗೆ ಬೆದರಿಕೆ ಹಾಕಿದ!
Team Udayavani, Jun 8, 2018, 6:45 AM IST
ರೋಣ: ಸತತ 6 ತಿಂಗಳಿಂದ ಮಾಸಾಶನ ಬಾರದ ಹಿನ್ನೆಲೆಯಲ್ಲಿ ಪಟ್ಟಣದ ವಯೋ ವೃದ್ಧನೊಬ್ಬ ಜೀವಂತ ಹಾವನ್ನು ಕೊರಳಿನಲ್ಲಿ ಸುತ್ತಿಕೊಂಡು ತಹಶೀಲ್ದಾರ್, ಉಪ ಖಜಾನೆ ಇಲಾಖೆ ಕಾರ್ಯಾಲಯಕ್ಕೆ ತೆರಳಿ ಮಾಸಾಶನ ಬಿಡುಗಡೆಗೆ ಒತ್ತಾಯಿಸಿದ ಘಟನೆ ಗುರುವಾರ ಪಟ್ಟಣದಲ್ಲಿ ನಡೆದಿದೆ.
ಸಾಕಷ್ಟು ಬಾರಿ ಕಚೇರಿಗೆ ಅಲೆದರೂ ತನ್ನ ಕೆಲಸಕ್ಕೆ ಸ್ಪಂದಿಸದಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ರಾಜಾಖಾನ, ಬೆಳಗ್ಗೆ ಜೀವಂತ ಹಾವಿನೊಂದಿಗೆ ತಹಶೀಲ್ದಾರ್, ಉಪ ಖಜಾನೆಯ ಕಚೇರಿಗೆ ಆಗಮಿಸಿ, ನನಗೆ ಅಂಗವಿಕಲ ಮಾಸಾಶನ ಬಿಡುಗಡೆ ಮಾಡುತ್ತಿರೋ ಇಲ್ಲವೋ? ಇಲ್ಲದಿದ್ದರೇ ನಿಮ್ಮ ಕಚೇರಿಯಲ್ಲಿ ಹಾವನ್ನು ಬಿಟ್ಟು ಹೋಗುವೆ ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕಿದ.
ಇದರಿಂದ ಭಯಗೊಂಡ ಕಚೇರಿ ಸಿಬ್ಬಂದಿ, ತಾಂತ್ರಿಕ ದೋಷದಿಂದ ನಿಮ್ಮ ಖಾತೆಗೆ ಮಾಸಾಶನ ಜಮಾ ಆಗಿಲ್ಲ. ಈ ತಿಂಗಳಿಂದ ಜಮಾ ಮಾಡಲಾಗಿದೆ ಎಂದು ಖಜಾನೆ ಅಧಿ ಕಾರಿಗಳು ಉತ್ತರಿಸಿದ ನಂತರ ಕಚೇರಿಯಿಂದ ಹೊರ ಹೋದ. ನಂತರ ವಿವಿಧ ಸ್ಥಳಗಳಲ್ಲಿ ಕೊರಳಿನಲ್ಲಿ ಹಾವು ಹಿಡಿದು ಜನರ ಮುಂದೆ ಪ್ರದರ್ಶಿಸಿದ.
ಈ ಕುರಿತು ಪ್ರತಿಕ್ರಿಯಿಸಿರುವ ರೋಣ ತಹಶೀಲ್ದಾರ್ ಶಿವಲಿಂಗಪ್ರಭು ವಾಲಿ, ಹಾವಿನೊಂದಿಗೆ ವ್ಯಕ್ತಿಯೋರ್ವ ಮಾಸಾಶನ ಬಿಡುಗಡೆ ಮಾಡುವಂತೆ ಒತ್ತಾಯಿಸಲು ಉಪ ಖಜಾನೆ ಕಚೇರಿಗೆ ಬಂದಿದ್ದ. ಇದು ನನ್ನ ಗಮನಕ್ಕೆ ಬಂದಿಲ್ಲ. ನಾನು ಕಚೇರಿಯಲ್ಲಿ ಇರದೇ ಇರುವ ಸಮಯದಲ್ಲಿ ಏನಾದರೂ ಬಂದಿದ್ದರೆ ಖಜಾನೆ ಇಲಾಖೆ ಸಿಬ್ಬಂದಿಯಿಂದ ಮಾಹಿತಿ ಪಡೆದು ಅವರ ಮಾಸಾಶನ ಬಿಡುಗಡೆ ಮಾಡಲು ಆದೇಶ ನೀಡುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ