ಕೊರಳಲ್ಲಿ ಹಾವು ಸುತ್ತಿಕೊಂಡು ಅಧಿಕಾರಿಗಳಿಗೆ ಬೆದರಿಕೆ ಹಾಕಿದ!
Team Udayavani, Jun 8, 2018, 6:45 AM IST
ರೋಣ: ಸತತ 6 ತಿಂಗಳಿಂದ ಮಾಸಾಶನ ಬಾರದ ಹಿನ್ನೆಲೆಯಲ್ಲಿ ಪಟ್ಟಣದ ವಯೋ ವೃದ್ಧನೊಬ್ಬ ಜೀವಂತ ಹಾವನ್ನು ಕೊರಳಿನಲ್ಲಿ ಸುತ್ತಿಕೊಂಡು ತಹಶೀಲ್ದಾರ್, ಉಪ ಖಜಾನೆ ಇಲಾಖೆ ಕಾರ್ಯಾಲಯಕ್ಕೆ ತೆರಳಿ ಮಾಸಾಶನ ಬಿಡುಗಡೆಗೆ ಒತ್ತಾಯಿಸಿದ ಘಟನೆ ಗುರುವಾರ ಪಟ್ಟಣದಲ್ಲಿ ನಡೆದಿದೆ.
ಸಾಕಷ್ಟು ಬಾರಿ ಕಚೇರಿಗೆ ಅಲೆದರೂ ತನ್ನ ಕೆಲಸಕ್ಕೆ ಸ್ಪಂದಿಸದಿರುವ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ರಾಜಾಖಾನ, ಬೆಳಗ್ಗೆ ಜೀವಂತ ಹಾವಿನೊಂದಿಗೆ ತಹಶೀಲ್ದಾರ್, ಉಪ ಖಜಾನೆಯ ಕಚೇರಿಗೆ ಆಗಮಿಸಿ, ನನಗೆ ಅಂಗವಿಕಲ ಮಾಸಾಶನ ಬಿಡುಗಡೆ ಮಾಡುತ್ತಿರೋ ಇಲ್ಲವೋ? ಇಲ್ಲದಿದ್ದರೇ ನಿಮ್ಮ ಕಚೇರಿಯಲ್ಲಿ ಹಾವನ್ನು ಬಿಟ್ಟು ಹೋಗುವೆ ಎಂದು ಅಧಿಕಾರಿಗಳಿಗೆ ಬೆದರಿಕೆ ಹಾಕಿದ.
ಇದರಿಂದ ಭಯಗೊಂಡ ಕಚೇರಿ ಸಿಬ್ಬಂದಿ, ತಾಂತ್ರಿಕ ದೋಷದಿಂದ ನಿಮ್ಮ ಖಾತೆಗೆ ಮಾಸಾಶನ ಜಮಾ ಆಗಿಲ್ಲ. ಈ ತಿಂಗಳಿಂದ ಜಮಾ ಮಾಡಲಾಗಿದೆ ಎಂದು ಖಜಾನೆ ಅಧಿ ಕಾರಿಗಳು ಉತ್ತರಿಸಿದ ನಂತರ ಕಚೇರಿಯಿಂದ ಹೊರ ಹೋದ. ನಂತರ ವಿವಿಧ ಸ್ಥಳಗಳಲ್ಲಿ ಕೊರಳಿನಲ್ಲಿ ಹಾವು ಹಿಡಿದು ಜನರ ಮುಂದೆ ಪ್ರದರ್ಶಿಸಿದ.
ಈ ಕುರಿತು ಪ್ರತಿಕ್ರಿಯಿಸಿರುವ ರೋಣ ತಹಶೀಲ್ದಾರ್ ಶಿವಲಿಂಗಪ್ರಭು ವಾಲಿ, ಹಾವಿನೊಂದಿಗೆ ವ್ಯಕ್ತಿಯೋರ್ವ ಮಾಸಾಶನ ಬಿಡುಗಡೆ ಮಾಡುವಂತೆ ಒತ್ತಾಯಿಸಲು ಉಪ ಖಜಾನೆ ಕಚೇರಿಗೆ ಬಂದಿದ್ದ. ಇದು ನನ್ನ ಗಮನಕ್ಕೆ ಬಂದಿಲ್ಲ. ನಾನು ಕಚೇರಿಯಲ್ಲಿ ಇರದೇ ಇರುವ ಸಮಯದಲ್ಲಿ ಏನಾದರೂ ಬಂದಿದ್ದರೆ ಖಜಾನೆ ಇಲಾಖೆ ಸಿಬ್ಬಂದಿಯಿಂದ ಮಾಹಿತಿ ಪಡೆದು ಅವರ ಮಾಸಾಶನ ಬಿಡುಗಡೆ ಮಾಡಲು ಆದೇಶ ನೀಡುತ್ತೇನೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?