ಬೇಸರ ಸಹಜ,ಯಾರೂ ಪಕ್ಷ ಬಿಡಲ್ಲ: ಸಿದ್ದರಾಮಯ್ಯ
Team Udayavani, Jun 9, 2018, 6:05 AM IST
ಬಾಗಲಕೋಟೆ: ಸಚಿವ ಸ್ಥಾನ ಸಿಗದವರಿಗೆ ಬೇಸರ ಆಗುವುದು ಸಹಜ. ಪಕ್ಷದಲ್ಲಿ ಕೆಲವರಿಗೆ ಅಸಮಾಧಾನ
ಇರುವುದೂ ನಿಜ. ಆದರೆ,ಅವರೆಲ್ಲ ಪಕ್ಷ ಬಿಟ್ಟು ಹೋಗಲ್ಲ. ಎಲ್ಲರನ್ನೂ ಸಮಾಧಾನಪಡಿಸುತ್ತೇವೆ ಎಂದು ಮಾಜಿ
ಮುಖ್ಯಮಂತ್ರಿ, ಶಾಸಕ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ಬಿ.ಎನ್ ಜಾಲಿಹಾಳ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಚಿವ ಎಂ.ಬಿ.ಪಾಟೀಲ ನನ್ನನ್ನು ಭೇಟಿ ಮಾಡಿದ್ದಾರೆ. ಆದರೆ,ಕಣ್ಣೀರು ಹಾಕಿಲ್ಲ. ಅವರನ್ನು ನಾನು ಸಮಾಧಾನ ಮಾಡಿದ್ದೇನೆ.
ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಸಮಾಧಾನ ಮಾಡಿದ್ದಾರೆ ಎಂದರು. ಎಂ.ಬಿ.ಪಾಟೀಲ ನನ್ನ ಜತೆಗೆ 22 ಶಾಸಕರಿದ್ದಾರೆ ಎಂದಿದ್ದಾರೆ.ಅವರಿಂದ ಕಾಂಗ್ರೆಸ್ಗೆ ಹಿನ್ನಡೆಯಾಗುತ್ತದೆಯೇ ಎಂಬ ಪ್ರಶ್ನೆಗೆ ಗರಂ ಆದ ಸಿದ್ದರಾಮಯ್ಯ, ಹಿನ್ನಡೆ ಅಂದರೇನು ಎಂದು ಮರು ಪ್ರಶ್ನೆ ಹಾಕಿದರು. ನಾನು ಪ್ರಮುಖರ ಮನವೊಲಿಕೆಗೆ ಬೆಂಗಳೂರಿಗೆ ಮರಳಿ ಹೋಗುವುದಿಲ್ಲ.
ನಾನು ಯಾಕೆ ಬೆಂಗಳೂರಿಗೆ ಹೋಗಬೇಕು. ಎಲ್ಲರನ್ನೂ ಸಮಾಧಾನ ಮಾಡಿದ್ದೇವೆ. ಮಾಜಿ ಸಚಿವ ಸತೀಶ
ಜಾರಕಿಹೊಳಿ ಎಐಸಿಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ವಿಷಯ ನನಗೆ ಗೊತ್ತಿಲ್ಲ.
ಕಾಂಗ್ರೆಸ್ನಿಂದ ಹೊರ ಬರುವಂತೆ ಕುರುಬ ಸಮಾಜದ ಶಾಸಕರಿಗೆ ಕರೆ ನೀಡಿರುವ ಕುರುಬರ ಸಂಘದ ಅಧ್ಯಕ್ಷ
ಯಾರು ಎಂಬುದೂ ನನಗೆ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು
Temperature; ರಾಜ್ಯದಲ್ಲಿ ಮತ್ತೆ ದಿಢೀರ್ ಏರಿದ ತಾಪಮಾನ
ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?