ಎಐಸಿಸಿಗೆ ರಾಜೀನಾಮೆ ನೀಡುವೆ: ಸತೀಶ


Team Udayavani, Jun 9, 2018, 6:35 AM IST

satish-jarkiholiddd.jpg

ಬೆಳಗಾವಿ: ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಶಾಸಕ ಸತೀಶ ಜಾರಕಿಹೊಳಿ ತಿಳಿಸಿದರು.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಚಿವ ಸ್ಥಾನ ಸಿಗದಿರುವುದಕ್ಕೆ ನನಗೆ ತೀವ್ರ ಅಸಮಾಧಾನವಿದೆ. ನನ್ನ ಬೆಂಬಲಿಗರಿಗೂ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ. ಅನೇಕ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಎರಡು ದಿನದಲ್ಲಿ ಬೆಂಬಲಿಗರೊಂದಿಗೆ ಸಭೆ ನಡೆಸಿ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು. ನನ್ನ ಕ್ಷೇತ್ರ ವ್ಯಾಪ್ತಿ ಕೇವಲ ಯಮಕನಮರಡಿ ಅಲ್ಲ. ಇಡೀ ರಾಜ್ಯಾದ್ಯಂತ ಪಕ್ಷ ಸಂಘಟಿಸುವ ಕೆಲಸ ಮಾಡುತ್ತ ಬಂದಿದ್ದೇನೆ. ನನಗೆ ಸಚಿವ ಸ್ಥಾನ ತಪ್ಪಿಸಿದವರು ಬೆಂಗಳೂರು ಹಾಗೂ ದೆಹಲಿಯಲ್ಲಿದ್ದಾರೆ. ವಾರದೊಳಗೆ ಅವರ ಹೆಸರನ್ನು ಬಹಿರಂಗಪಡಿಸುತ್ತೇನೆ’ ಎಂದರು.

ರಾಜೀನಾಮೆಗೆ 55 ಸದಸ್ಯರ ನಿರ್ಧಾರ: ಸತೀಶ ಜಾರಕಿಹೊಳಿಗೆ ಸಚಿವ ಸ್ಥಾನ ನೀಡದೆ ಇರುವುದನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ 14 ಜಿಪಂ ಸದಸ್ಯರು, 28 ತಾಪಂ, ನಾಲ್ವರು ಎಪಿಎಂಸಿ, ಇಬ್ಬರು ಮಹಾನಗರಪಾಲಿಕೆ ಸದಸ್ಯರು ಹಾಗೂ ಪಕ್ಷದ ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ಸಲ್ಲಿಸಲು ತೀರ್ಮಾನಿಸಿದ್ದಾರೆ. ಶುಕ್ರವಾರ ಸತೀಶ ಜಾರಕಿಹೊಳಿ ನಿವಾಸದಲ್ಲಿ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸದಸ್ಯರು, ಒಟ್ಟು 55ಕ್ಕೂ ಹೆಚ್ಚು ಪದಾಧಿಕಾರಿಗಳು ಈಗ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಇದರಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ ಸಹ ಸೇರಿದ್ದಾರೆ ಎಂದರು.

ಪಾಟೀಲ ಬೆಂಬಲಿಗರಿಂದ 11ರಂದು ವಿಜಯಪುರ ಬಂದ್‌
ವಿಜಯಪುರ
: ಬಬಲೇಶ್ವರ ಶಾಸಕ ಡಾ.ಎಂ.ಬಿ. ಪಾಟೀಲ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನದ ಜತೆಗೆ ಜಲ ಸಂಪನ್ಮೂಲ ಖಾತೆ ನೀಡುವಂತೆ ಆಗ್ರಹಿಸಿ ಸೋಮವಾರ ವಿಜಯಪುರ ಬಂದ್‌ಗೆ ಕರೆ ನೀಡಲು ಬೆಂಬಲಿಗರು ನಿರ್ಧರಿಸಿದ್ದಾರೆ. 

ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ಸಾರ್ವಜನಿಕ ಸಂರ್ಪಕಾ ಧಿಕಾರಿ ಡಾ.ಮಹಾಂತೇಶ ಬಿರಾದಾರ, ಭವಿಷ್ಯದ ಮುಖ್ಯಮಂತ್ರಿ ಎಂಬ ಕಾರಣಕ್ಕೆ ಅವರನ್ನು ರಾಜಕೀಯವಾಗಿ ತುಳಿಯುವ ಹುನ್ನಾರ ನಡೆದಿದೆ. ಹೀಗಾಗಿ ಸೋಮವಾರ ಮಾಜಿ ಶಾಸಕ ರಾಜು ಆಲಗೂರ ನೇತೃತ್ವದಲ್ಲಿ ಬಂದ್‌ಗೆ ಕರೆ ನೀಡಲು ಯೋಜಿಸಲಾಗುತ್ತಿದೆ. ಶನಿವಾರ, ಈ ಕುರಿತು ಅಂತಿಮ ನಿರ್ಧಾರ ಪ್ರಕಟಿಸಲಾಗುತ್ತದೆ ಎಂದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.