ಬಂಗಾರದ ಕತ್ತಿಯಲ್ಲಿ ಕ್ಷೌರಿಕ ಸೇವೆ


Team Udayavani, Jun 9, 2018, 6:00 AM IST

8ckd1b.jpg

ಚಿಕ್ಕೋಡಿ: ರಾಜ ಮಹಾರಾಜರು ಬೆಳ್ಳಿ -ಬಂಗಾರದ ತಟ್ಟೆಯಲ್ಲಿ ಊಟ ಮಾಡಿರಬಹುದು. ಆದರೆ ಇಲ್ಲೊಂದು ಆಶ್ಚರ್ಯಕರ ಸಂಗತಿಯಿದೆ. ಇಲ್ಲಿನ ಕ್ಷೌರಿಕನೊಬ್ಬ ಗ್ರಾಹಕರಿಗೆ ಚಿನ್ನದ ಕತ್ತಿಯಿಂದ ಕ್ಷೌರ ಮಾಡಿ ವಿಶೇಷ ಸೇವೆ ನೀಡುತ್ತಿದ್ದಾರೆ.

ಈ ಸೇವೆಗೆ ಮನಸೋತಿರುವ ಅನೇಕರು ದೂರ ದೂರದಿಂದ ಬಂದು ಇಲ್ಲಿ ಭೇಟಿ ನೀಡುತ್ತಿದ್ದಾರೆ. ಗ್ರಾಹಕರಿಗೆ ಹೊಸ ಮಾದರಿಯ ಕೇಶ ವಿನ್ಯಾಸವನ್ನು ಮಾಡುವುದಲ್ಲದೇ ಎಸಿ ಸೆಲೂನ್‌ನಲ್ಲಿ ಟೀ-ಕಾಫಿ ಆತಿಥ್ಯ ಕೂಡ ಇಲ್ಲಿ ದೊರೆಯುತ್ತದೆ.

ಮಹಾರಾಷ್ಟ್ರದ ಜಿಲ್ಲಾ ಕೇಂದ್ರವಾದ ಸಾಂಗಲಿ ನಗರದ ಮಾಳ ಭಾಗದಲ್ಲಿರುವ ಉಸ್ತ್ರಾ ಸಲೂನ್‌ ಮಾಲೀಕ ರಾಮಚಂದ್ರ ಕಾಶಿದ್‌ ಅವರೇ ಈ ಕ್ಷೌರಿಕ. 3.50 ಲಕ್ಷ ರೂ. ಮೌಲ್ಯದ 11 ತೊಲೆ ಬಂಗಾರದಲ್ಲಿ ಮಾಡಿಸಿದ ಬಂಗಾರದ ಕತ್ತಿಯಿಂದ ಜನರ ಕ್ಷೌರ ಮಾಡುತ್ತಾರೆ.

ಇಂಥ ಸೇವೆ ನೀಡಬೇಕೆಂಬ ಆಲೋಚನೆ ಅವರಿಗೆ ಮೊಳೆತಿದ್ದು ವಿಶೇಷ ಸಂದರ್ಭವೊಂದರಲ್ಲಿ. ರಾಮಚಂದ್ರ ತನ್ನ ತಂದೆ-ತಾಯಿಯ 33ನೇ ಮದುವೆ ವಾರ್ಷಿಕೋತ್ಸವದ ನಿಮಿತ್ತ ಬಂಗಾರದ ಕತ್ತಿಯನ್ನು ಮಾಡಿಸಿ ತಂದೆಯ ಕ್ಷೌರ ಮಾಡುವ ಮೂಲಕ ಬಂಗಾರದ ಕತ್ತಿಯನ್ನು ಮಾರುಕಟ್ಟೆಗೆ ಪರಿಚಯಿಸಿದರು.

ಸಾಂಗಲಿ ಪಟ್ಟಣದ ಮಾಳ ಭಾಗದಲ್ಲಿ ಕಳೆದ 7 ವರ್ಷಗಳಿಂದ ಕ್ಷೌರಿಕ ವೃತ್ತಿ ಮಾಡುತ್ತಿರುವ ರಾಮಚಂದ್ರ, ನವ ಯುವಕರಿಗೆ ನೂತನ ಮಾದರಿಯ ಕೇಶ ವಿನ್ಯಾಸ ಮಾಡುತ್ತ ಗಮನ ಸೆಳೆದಿದ್ದಾರೆ. ಕೆಲ ತಿಂಗಳ ಹಿಂದೆ ವಾಟ್ಸ್‌ಅಪ್‌ ಗ್ರೂಪ್‌ ಒಂದರಲ್ಲಿ ಬಂಗಾರದ ಕತ್ತರಿ ಹಾಗೂ ಕತ್ತಿಯ ಚಿತ್ರ ಬಂದಿರುವುದನ್ನು ಗಮನಿಸಿ ತಾವೂ ಬಂಗಾರದ ಕತ್ತಿ ಮೂಲಕ ಕ್ಷೌರ ಮಾಡಬೇಕೆಂದು ಆಲೋಚಿಸಿ ಅದನ್ನು ಕಾರ್ಯರೂಪಕ್ಕೆ ತರುವಲ್ಲಿ ಈಗ ಯಶಸ್ವಿಯಾಗಿದ್ದಾರೆ.

ಬಂಗಾರದ ಕತ್ತಿಯಿಂದ ಕ್ಷೌರದ ವಿಷಯ ಗ್ರಾಹಕರಿಗೆ ತಿಳಿಯುತ್ತಿದ್ದಂತೆ ಮಹಾರಾಷ್ಟ್ರ ವಿವಿಧೆಡೆಯಿಂದ ಜನರು ಸೆ‌ಲೂನ್‌ಗೆ ಬಂದು ಕ್ಷೌರ ಮಾಡಿಸಿಕೊಂಡು ಹೋಗುತ್ತಿದ್ದಾರೆ. ಇದಕ್ಕಾಗಿ ಗ್ರಾಹಕರಿಗೆ ಅವರು 200 ರೂ. ದರ ನಿಗದಿ ಮಾಡಿದ್ದಾರೆ. ತಾವು ಬಯಸಿದಂತೆ  ಕ್ಷೌರಿಕ ಕ್ಷೇತ್ರದಲ್ಲಿ  ಸಾಧನೆ ಮಾಡಬೇಕೆಂಬ ಉದ್ದೇಶದಿಂದ ಬಂಗಾರದ ಕತ್ತಿ ಮಾಡಿಸಿ ಗ್ರಾಹಕರಿಗೆ ವಿಶೇಷ ಸೇವೆ ನೀಡುತ್ತಿದ್ದು, ಮುಂಬರುವ ದಿನಗಳಲ್ಲಿ ಬಂಗಾರದ ಲೇಪನದಿಂದ ಕೂಡಿದ ಬ್ಲೇಡ್‌ ಬಳಸುವ ಯೋಚನೆ ಹೊಂದಿರುವುದಾಗಿ ರಾಮಚಂದ್ರ ಹೇಳಿದ್ದಾರೆ.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.