ಜನತಾ ದರ್ಶನದಲ್ಲಿ ಜನಜಂಗುಳಿ
Team Udayavani, Jun 12, 2018, 6:25 AM IST
ಬೆಂಗಳೂರು: ಮುಖ್ಯಮಂತ್ರಿಯವರ ಜನತಾ ದರ್ಶನದಲ್ಲಿ ಸೋಮವಾರ ಜನಜಂಗುಳಿಯೇ ಇತ್ತು. ಬೆಳಗ್ಗೆಯಿಂದ ಸಂಜೆವರೆಗೆ ಕಾದ ಸಾರ್ವಜನಿಕರು ನಾಡಿನ ದೊರೆಯ ಮುಂದೆ ತಮ್ಮ ಅಹವಾಲುಗಳನ್ನು ತೋಡಿಕೊಂಡರು. ಸೋಮವಾರದ ಜನತಾ ದರ್ಶನದಲ್ಲಿ 350ಕ್ಕೂ ಹೆಚ್ಚು ಜನರು ತಮ್ಮ ವಿವಿಧ ಬೇಡಿಕೆಗಳ ಮನವಿಯನ್ನು
ಮುಖ್ಯಮಂತ್ರಿಯವರಿಗೆ ಸಲ್ಲಿಸಿದರು.
ಇದೇ ವೇಳೆ ನೇಮಕಾತಿ ಪಟ್ಟಿ ಬಿಡುಗಡೆ ಮಾಡಿ ಎಂದು 100ಕ್ಕೂ ಹೆಚ್ಚು ಕಿರಿಯ ಮಹಿಳಾ ಆರೋಗ್ಯ ಸಹಾಯಕಿರು ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಇಂಗ್ಲಿಷ್, ಗಣಿತ ಶಿಕ್ಷಕರ ನೇಮಕಾತಿಗೆ ನಿಗದಿಪಡಿಸಿರುವ ಅಂಕಗಳನ್ನು ಕಡಿತಗೊಳಿಸಬೇಕು ಎಂದು ಹೈದರಾಬಾದ್ ಕರ್ನಾಟಕದ 50ಕ್ಕೂ ಹೆಚ್ಚುಅಭ್ಯರ್ಥಿಗಳು ಮನವಿ ಸಲ್ಲಿಸಿದರು. ಬೆಳಗ್ಗೆ 10 ಗಂಟೆಗೆ ಜನತಾ ದರ್ಶನ ನಿಗದಿಯಾಗಿತ್ತು. ಆದರೆ, ಮುಖ್ಯಮಂತ್ರಿ ಬಂದಿದ್ದು ಮಧ್ಯಾಹ್ನ 3 ಗಂಟೆ ವೇಳೆಗೆ. ಎಲ್ಲರ ಅಹವಾಲುಗಳನ್ನು ಸಮಧಾನದಿಂದ ಆಲಿಸಿದ ಮುಖ್ಯಮಂತ್ರಿಗಳು ಕೆಲವು ಮನವಿಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆಗಳನ್ನು ನೀಡಿದರು.
ಬಜೆಟ್ ಮಂಡನೆವರೆಗೆ ಜನತಾ ದರ್ಶನ ಇಲ್ಲ: ಬಜೆಟ್ ಸಿದ್ಧತೆ ಮಾಡಬೇಕಾಗಿರುವುದರಿಂದ ಸಿಎಂ ಕುಮಾರಸ್ವಾಮಿ ಅವರು ಬಜೆಟ್ ಮಂಡನೆವರೆಗೆ ಜನತಾ ದರ್ಶನ ಸ್ಥಗಿತಗೊಳಿಸಿದ್ದಾರೆ. ಈ ಕುರಿತು ಸಿಎಂ ಕಚೇರಿ ಪ್ರಕಟಣೆ ಹೊರಡಿಸಿದ್ದು, ಬಜೆಟ್ ಅಧಿವೇಶನ ಮುಕ್ತಾಯಗೊಳ್ಳುವವರೆಗೆ ಜನತಾ ದರ್ಶನ ಮತ್ತು ಸಾರ್ವಜನಿಕರ
ಭೇಟಿಯನ್ನು ಮುಂದೂಡಲಾಗಿದೆ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
MUST WATCH
ಹೊಸ ಸೇರ್ಪಡೆ
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ