ಗಾರ್ಮೆಂಟ್ಸ್‌ ಕಾರ್ಮಿಕರ ಮನವೊಲಿಸಿದ ಸಿಎಂ


Team Udayavani, Jun 13, 2018, 11:54 AM IST

garments.jpg

ಬೆಂಗಳೂರು: ಕನಿಷ್ಠ ವೇತನ ನಿಗದಿಗೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗಿದ್ದ ಗಾರ್ಮೆಂಟ್‌ ಕಾರ್ಖಾನೆಗಳ ಕಾರ್ಮಿಕರ ಮನವೊಲಿಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಜೂ. 18ರಂದು ಸಮಸ್ಯೆ ಪರಿಹಾರಕ್ಕೆ ಕಾರ್ಖಾನೆಗಳ ಮಾಲಿಕರು ಮತ್ತು ಕಾರ್ಮಿಕರ ಸಭೆ ಕರೆದಿದ್ದಾರೆ. 

ಕಾರ್ಖಾನೆಗಳೂ ಉಳಿಯಬೇಕು ಹಾಗೂ ಕಾರ್ಮಿಕರೂ ಬೀದಿ ಪಾಲಾಗಬಾರದು. ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಲ್ಲಿ ಸರ್ಕಾರ ಮುಕ್ತ ವಾಗಿದೆ. ಯಾರೂ ಬೀದಿಗಿಳಿದು ಪ್ರತಿಭಟನೆ ಮಾಡಬಾರದು ಎಂಬುದು ಸರ್ಕಾರದ ಉದ್ದೇಶ. ಈ ಮೊದಲೇ ಕಾರ್ಮಿಕರು ಮತ್ತು ಮಾಲಿಕರೊಂದಿಗೆ ಚರ್ಚೆ ನಡೆಸಬೇಕಿತ್ತು. ಅದೇನೇ ಇರಲಿ, ಈಗ ಎಲ್ಲ ರೀತಿಯ ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಮಾಲಿಕರ ಮೇಲೂ ತುಂಬಾ ಒತ್ತಡ ಹಾಕುವಂತಿಲ್ಲ. ಆಗ, ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆ ಇದೆ. ಅದೇ ರೀತಿ, ಕಾರ್ಮಿಕರ ಬೇಡಿಕೆಗಳಿಗೂ ಸ್ಪಂದಿಸಬೇಕು. ಇದಕ್ಕಾಗಿ ಈ ಹಿಂದೆ ಅಧಿಸೂಚನೆ ಹೊರಡಿಸಿದಂತೆ ತಿಂಗಳಿಗೆ 1,587 ರೂ. ಕನಿಷ್ಠ ವೇತನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಜೂ. 14ರಂದು ನಡೆಸಲು ನಿರ್ಧರಿಸಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕಾರ್ಮಿಕರು ಕೈಬಿಟ್ಟಿದ್ದಾರೆ. 

ಸರ್ಕಾರದಿಂದಲೇ ದ್ರೋಹ; ಆಕ್ರೋಶ: ಇದಕ್ಕೂ ಮುನ್ನ ಗಾರ್ಮೆಂಟ್‌ ಮತ್ತು ಟೆಕ್ಸ್‌ಟೈಲ್‌ ವರ್ಕರ್ ಯೂನಿಯನ್‌ ಅಧ್ಯಕ್ಷೆ ಪ್ರತಿಭಾ ಮಾತನಾಡಿ, ಗಾರ್ಮೆಂಟ್‌ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸುವ ಸಂಬಂಧ 2018ರ ಫೆಬ್ರವರಿಯಲ್ಲಿ ಕರಡು ಆದೇಶವನ್ನು ಹೊರಡಿಸಲಾಗಿತ್ತು. ಅದರಲ್ಲಿ ತಿಂಗಳಿಗೆ 11,587 ರೂ. ವೇತನ ನಿಗದಿಪಡಿಸಲಾಗಿತ್ತು.

ಆದರೆ, ಏಕಾಏಕಿ ನಂತರದಲ್ಲಿ ಆ ಕರಡು ಆದೇಶವನ್ನು ಹಿಂಪಡೆಯಲಾಗಿದೆ. ಈ ಮೂಲಕ ಸರ್ಕಾರದಿಂದಲೇ ಕಾರ್ಮಿಕರಿಗೆ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ಕೆಲವು ಕಂಪನಿಗಳಲ್ಲಿ ಟೆಕ್ಸ್‌ಟೈಲ್‌, ಸ್ಪಿನ್ನಿಂಗ್‌ ಮಿಲ್‌, ಡೈಯಿಂಗ್‌ ಮತ್ತು ಪ್ರಿಂಟಿಂಗ್‌ ಒಂದೇ ಕಡೆ ಇದೆ.

ಒಬ್ಬರಿಗೆ ವೇತನ ಹೆಚ್ಚಿಸಿದರೆ, ಉಳಿದವರಿಗೂ ಅನ್ವಯಿಸುತ್ತದೆ. ಇದರಿಂದ ಹೊರೆ ಆಗಲಿದ್ದು, ಈ ನಿರ್ಧಾರದಿಂದ ಹಿಂದೆಸರಿಯುವಂತೆ ಮಾಲಿಕರು ಒತ್ತಾಯಿಸಿದರು. ಹಿಂದಿನ ಸರ್ಕಾರದ ಸೂಚನೆಯಂತೆ ಅಧಿಸೂಚನೆ ಹಿಂಪಡೆಯಲಾಗಿದೆ ಎಂದು ಮುಖ್ಯಮಂತ್ರಿಗೆ ಸಮಜಾಯಿಷಿ ನೀಡಿದರು. 

ಆಗ ಕಾರ್ಮಿಕ ಮುಖಂಡರು, ಎಲ್ಲರಿಗೂ ಒಂದೇ ಮಾದರಿಯ ವೇತನ ಈಗಾಗಲೇ ಇದೆ. ಹಾಗಾಗಿ, ಈ ವಾದದಲ್ಲಿ ಹುರುಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ, 18ರಂದು ನಡೆಯುವ ಸಭೆಯಲ್ಲಿ ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು.

ಪ್ರಕರಣ ವಾಪಸ್‌; ಪರಿಶೀಲನೆ: ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಮಿಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕು. ಕಾರ್ಖಾನೆಗಳಲ್ಲಿನ ಮಹಿಳಾ ಕಾರ್ಮಿಕರ ಮೇಲೆ ದೌರ್ಜನ್ಯಕ್ಕೆ ತಡೆ, ಉಚಿತ ಬಸ್‌ ಪಾಸ್‌ ಸೌಲಭ್ಯ ಸೇರಿದಂತೆ ಇದೇ ವೇಳೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕಾರ್ಮಿಕ ಮುಖಂಡರು ಮನವಿ ಮಾಡಿದರು. ಕಾರ್ಮಿಕರ ವಿರುದ್ಧದ ಪ್ರಕರಣ ಹಿಂಪಡೆಯುವ ಬಗ್ಗೆ ಗೃಹ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.