ಗಾರ್ಮೆಂಟ್ಸ್‌ ಕಾರ್ಮಿಕರ ಮನವೊಲಿಸಿದ ಸಿಎಂ


Team Udayavani, Jun 13, 2018, 11:54 AM IST

garments.jpg

ಬೆಂಗಳೂರು: ಕನಿಷ್ಠ ವೇತನ ನಿಗದಿಗೆ ಒತ್ತಾಯಿಸಿ ಪ್ರತಿಭಟನೆಗೆ ಮುಂದಾಗಿದ್ದ ಗಾರ್ಮೆಂಟ್‌ ಕಾರ್ಖಾನೆಗಳ ಕಾರ್ಮಿಕರ ಮನವೊಲಿಸಿದ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಜೂ. 18ರಂದು ಸಮಸ್ಯೆ ಪರಿಹಾರಕ್ಕೆ ಕಾರ್ಖಾನೆಗಳ ಮಾಲಿಕರು ಮತ್ತು ಕಾರ್ಮಿಕರ ಸಭೆ ಕರೆದಿದ್ದಾರೆ. 

ಕಾರ್ಖಾನೆಗಳೂ ಉಳಿಯಬೇಕು ಹಾಗೂ ಕಾರ್ಮಿಕರೂ ಬೀದಿ ಪಾಲಾಗಬಾರದು. ಈ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವಲ್ಲಿ ಸರ್ಕಾರ ಮುಕ್ತ ವಾಗಿದೆ. ಯಾರೂ ಬೀದಿಗಿಳಿದು ಪ್ರತಿಭಟನೆ ಮಾಡಬಾರದು ಎಂಬುದು ಸರ್ಕಾರದ ಉದ್ದೇಶ. ಈ ಮೊದಲೇ ಕಾರ್ಮಿಕರು ಮತ್ತು ಮಾಲಿಕರೊಂದಿಗೆ ಚರ್ಚೆ ನಡೆಸಬೇಕಿತ್ತು. ಅದೇನೇ ಇರಲಿ, ಈಗ ಎಲ್ಲ ರೀತಿಯ ಸಮಸ್ಯೆಗಳನ್ನು ಚರ್ಚಿಸಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಮಾಲಿಕರ ಮೇಲೂ ತುಂಬಾ ಒತ್ತಡ ಹಾಕುವಂತಿಲ್ಲ. ಆಗ, ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆ ಇದೆ. ಅದೇ ರೀತಿ, ಕಾರ್ಮಿಕರ ಬೇಡಿಕೆಗಳಿಗೂ ಸ್ಪಂದಿಸಬೇಕು. ಇದಕ್ಕಾಗಿ ಈ ಹಿಂದೆ ಅಧಿಸೂಚನೆ ಹೊರಡಿಸಿದಂತೆ ತಿಂಗಳಿಗೆ 1,587 ರೂ. ಕನಿಷ್ಠ ವೇತನ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಈ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ಜೂ. 14ರಂದು ನಡೆಸಲು ನಿರ್ಧರಿಸಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಕಾರ್ಮಿಕರು ಕೈಬಿಟ್ಟಿದ್ದಾರೆ. 

ಸರ್ಕಾರದಿಂದಲೇ ದ್ರೋಹ; ಆಕ್ರೋಶ: ಇದಕ್ಕೂ ಮುನ್ನ ಗಾರ್ಮೆಂಟ್‌ ಮತ್ತು ಟೆಕ್ಸ್‌ಟೈಲ್‌ ವರ್ಕರ್ ಯೂನಿಯನ್‌ ಅಧ್ಯಕ್ಷೆ ಪ್ರತಿಭಾ ಮಾತನಾಡಿ, ಗಾರ್ಮೆಂಟ್‌ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಪಡಿಸುವ ಸಂಬಂಧ 2018ರ ಫೆಬ್ರವರಿಯಲ್ಲಿ ಕರಡು ಆದೇಶವನ್ನು ಹೊರಡಿಸಲಾಗಿತ್ತು. ಅದರಲ್ಲಿ ತಿಂಗಳಿಗೆ 11,587 ರೂ. ವೇತನ ನಿಗದಿಪಡಿಸಲಾಗಿತ್ತು.

ಆದರೆ, ಏಕಾಏಕಿ ನಂತರದಲ್ಲಿ ಆ ಕರಡು ಆದೇಶವನ್ನು ಹಿಂಪಡೆಯಲಾಗಿದೆ. ಈ ಮೂಲಕ ಸರ್ಕಾರದಿಂದಲೇ ಕಾರ್ಮಿಕರಿಗೆ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ಕೆಲವು ಕಂಪನಿಗಳಲ್ಲಿ ಟೆಕ್ಸ್‌ಟೈಲ್‌, ಸ್ಪಿನ್ನಿಂಗ್‌ ಮಿಲ್‌, ಡೈಯಿಂಗ್‌ ಮತ್ತು ಪ್ರಿಂಟಿಂಗ್‌ ಒಂದೇ ಕಡೆ ಇದೆ.

ಒಬ್ಬರಿಗೆ ವೇತನ ಹೆಚ್ಚಿಸಿದರೆ, ಉಳಿದವರಿಗೂ ಅನ್ವಯಿಸುತ್ತದೆ. ಇದರಿಂದ ಹೊರೆ ಆಗಲಿದ್ದು, ಈ ನಿರ್ಧಾರದಿಂದ ಹಿಂದೆಸರಿಯುವಂತೆ ಮಾಲಿಕರು ಒತ್ತಾಯಿಸಿದರು. ಹಿಂದಿನ ಸರ್ಕಾರದ ಸೂಚನೆಯಂತೆ ಅಧಿಸೂಚನೆ ಹಿಂಪಡೆಯಲಾಗಿದೆ ಎಂದು ಮುಖ್ಯಮಂತ್ರಿಗೆ ಸಮಜಾಯಿಷಿ ನೀಡಿದರು. 

ಆಗ ಕಾರ್ಮಿಕ ಮುಖಂಡರು, ಎಲ್ಲರಿಗೂ ಒಂದೇ ಮಾದರಿಯ ವೇತನ ಈಗಾಗಲೇ ಇದೆ. ಹಾಗಾಗಿ, ಈ ವಾದದಲ್ಲಿ ಹುರುಳಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಮಧ್ಯಪ್ರವೇಶಿಸಿದ ಮುಖ್ಯಮಂತ್ರಿ, 18ರಂದು ನಡೆಯುವ ಸಭೆಯಲ್ಲಿ ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ತಿಳಿಸಿದರು.

ಪ್ರಕರಣ ವಾಪಸ್‌; ಪರಿಶೀಲನೆ: ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಈ ಹಿಂದೆ ನಗರದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಮಿಕರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕು. ಕಾರ್ಖಾನೆಗಳಲ್ಲಿನ ಮಹಿಳಾ ಕಾರ್ಮಿಕರ ಮೇಲೆ ದೌರ್ಜನ್ಯಕ್ಕೆ ತಡೆ, ಉಚಿತ ಬಸ್‌ ಪಾಸ್‌ ಸೌಲಭ್ಯ ಸೇರಿದಂತೆ ಇದೇ ವೇಳೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕಾರ್ಮಿಕ ಮುಖಂಡರು ಮನವಿ ಮಾಡಿದರು. ಕಾರ್ಮಿಕರ ವಿರುದ್ಧದ ಪ್ರಕರಣ ಹಿಂಪಡೆಯುವ ಬಗ್ಗೆ ಗೃಹ ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.